ಸೀರಿಯಲ್‌ ಪ್ರಭಾವಕ್ಕೆ ಬಲಿಯಾದಳೇ ಬಾಲಕಿ?


Team Udayavani, Nov 30, 2017, 6:35 AM IST

watching-TV-serial.jpg

ಹರಿಹರ: ಕೆಲ ದಿನದ ಹಿಂದೆ ಬೆಂಕಿ ತಗುಲಿ 7 ವರ್ಷದ ಬಾಲಕಿ ಮೃತಪಟ್ಟ ಪ್ರಕರಣ ಈಗ ಹೊಸ ತಿರುವು ಪಡೆದಿದ್ದು ಹಲವು ಊಹಾ ಪೋಹಗಳಿಗೆ ಎಡೆಮಾಡಿಕೊಟ್ಟಿದೆ.

ನಗರದ ಆಶ್ರಯ ಬಡಾವಣೆಯಲ್ಲಿ ಬೆಂಕಿ ತಗುಲಿ ಬಾಲಕಿ ಪ್ರಾರ್ಥನಾ ಮೃತಪಟ್ಟಿದ್ದಳು. ಘಟನೆ ನಡೆದು 18 ದಿನಗಳ
ನಂತರ ಬಾಲಕಿ ಸಾವಿಗೆ ಟಿವಿಯಲ್ಲಿ ಪ್ರಸಾರವಾಗುವ ಸೀರಿಯಲ್‌ (ಧಾರಾವಾಹಿ) ಕಾರಣ ಎಂಬ ಗುಲ್ಲೆದ್ದಿದೆ. ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುವ ಧಾರಾವಾಹಿಯೊಂದರ ದೃಶ್ಯ ನೋಡಿ ಬಾಲಕಿ ಬೆಂಕಿ ಹಚ್ಚಿ ಕೊಂಡಿದ್ದಳೆಂಬ ಸುದ್ದಿ ಹರಡಿದೆ. ಆದರೆ ಘಟನೆ ನಡೆದ ನಂತರ ಬಾಲಕಿ ತಾಯಿ ಆಕಸ್ಮಿಕವಾಗಿ ಬೆಂಕಿ ತಗುಲಿ ಮಗಳು ಮೃತಪಟ್ಟಿದ್ದಾಳೆ ಎಂದು ದೂರು ದಾಖಲಿಸಿದ್ದರು.

ಚೈತ್ರಾ ಮತ್ತು ಮಂಜುನಾಥ್‌ ದಂಪತಿಯ 7 ವರ್ಷದ ಪುತ್ರಿ ಪ್ರಾರ್ಥನಾ ನ.11ರ ಮಧ್ಯಾಹ್ನ ಶಾಲೆಯಿಂದ ಬಂದು ಮನೆಯಲ್ಲಿ ಸಹೋದರಿಯೊಂದಿಗೆ ಆಟವಾಡುತ್ತಿದ್ದಾಗ ಬೆಂಕಿ ತಗುಲಿ ಗಾಯಗೊಂಡಿದ್ದಳು. ಕೂಡಲೇ ಬಾಲಕಿಯನ್ನು
ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ದಾವಣಗೆರೆ ಎಸ್‌.ಎಸ್‌.ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಿಸದೆ ನ.12ರ ಬೆಳಗಿನ ಜಾವ ಆಸ್ಪತ್ರೆಯಲ್ಲಿ ಬಾಲಕಿ ಮೃತಪಟ್ಟಿದ್ದಳು.

ಧಾರಾವಾಹಿ ಪರಿಣಾಮ: ಬಾಲಕಿ ಮೃತಪಟ್ಟು 18 ದಿನ ಕಳೆದ ನಂತರ ಆಕೆಯ ಪೋಷಕರು ಮಗಳ ಸಾವಿಗೆ ಬೇರೆಯದ್ದೇ ಆದ ಕಾರಣ ನೀಡುತ್ತಿದ್ದಾರೆ. ತಮ್ಮ ಮಗಳು ಸಾವಿಗೀಡಾಗಲು ಖಾಸಗಿ ವಾಹಿನಿಯೊಂದರ ಧಾರಾವಾಹಿಯಲ್ಲಿ ಪ್ರಸಾರವಾದ ದೃಶ್ಯವೇ ಕಾರಣ. ಅದರಲ್ಲಿ ಮಹಿಳೆಯೊಬ್ಬಳು ಬೆಂಕಿ ಹಚ್ಚಿಕೊಂಡು ನನ್ನನ್ನು ಕಾಪಾಡುವಂತೆ ದೇವರ ಮೊರೆ ಇಡುವುದನ್ನು ನೋಡಿದ ಬಾಲಕಿ ತಾನೂ ಅದನ್ನು ಅನುಕರಿಸಲು ಹೋಗಿ ಅನಾಹುತ ಮಾಡಿಕೊಂಡಿದ್ದಾಳೆ ಎಂದು ಹೇಳುತ್ತಿದ್ದಾರೆ. ಬಾಲಕಿ ಪ್ರಾರ್ಥನಾ ನಗರದ ಸೆಂಟ್‌ ಮೇರೀಸ್‌ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದಳು. ತಂದೆ ಮಂಜುನಾಥ್‌ ಕಟ್ಟಡ ಕಟ್ಟುವ ಕೆಲಸ ಮಾಡುತ್ತಿದ್ದರೆ, ತಾಯಿ ಚೈತ್ರಾ ಮನೆಗೆಲಸ ಮಾಡುತ್ತಿದ್ದಾರೆ. ಇವರ 2 ಹೆಣ್ಣು, ಒಂದು ಗಂಡು ಮಗುವಿನಲ್ಲಿ ಪ್ರಾರ್ಥನಾ ಹಿರಿಯ ಮಗಳಾಗಿದ್ದಳು. ಪ್ರಾರ್ಥನಾ ಆಸ್ಪತ್ರೆಯಲ್ಲಿ ಸಾವಿಗೀಡಾದ ದಿನ ತಾಯಿ ಚೈತ್ರಾ ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಘಟನೆ ಕುರಿತಂತೆ ಅದರಲ್ಲಿ ವಿವರಣೆ ನೀಡಿದ್ದಾರೆ.

ಹೀಗೆ ದೂರು ದಾಖಲಾಗಿದ್ದರೂ ಇದೀಗ ಪೋಷಕರು ಬೇರೆಯದ್ದೇ ಕಾರಣ ಹೇಳುತ್ತಿರುವುದು ಯಾಕೆ ಎಂಬ ಅನುಮಾನ ಮೂಡಿದೆ. ಇನ್ನೊಂದೆಡೆ ಧಾರಾವಾಹಿ ನೋಡಿ ಬಾಲಕಿ ಪ್ರಭಾವಕ್ಕೊಳಗಾಗಿಯೇ ಈ ರೀತಿ ಮಾಡಿಕೊಂಡಿರಬಹುದು ಎಂಬುದನ್ನು ಅಲ್ಲಗಳೆಯುವಂತಿಲ್ಲ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

ಬಾಲಕಿ ಪ್ರಾರ್ಥನಾ ಪ್ರಕರಣದಲ್ಲಿ ಧಾರಾವಾಹಿಯ ಪ್ರಭಾವವಿದೆ ಎಂದೆ ನಿಸುತ್ತಿಲ್ಲ. ಸಹಜವಾಗಿಯೇ ಮಕ್ಕಳಲ್ಲಿ ಕುತೂಹಲ ಹೆಚ್ಚು, ಅದರಂತೆಯೇ ಪ್ರಾರ್ಥನಾ ಬೆಂಕಿ ಕಡ್ಡಿ ಗೀರಿ ಪೇಪರ್‌ ಸುಡಲು ಮುಂದಾಗಿರುವ ಸಾಧ್ಯತೆಯಿದೆ.
–  ಶ್ರೀಧರ್‌, ಪಿಎಸ್‌ಐ, ಹರಿಹರ ನಗರ ಠಾಣೆ

ಪ್ರಾರ್ಥನಾ ಮನೆಯ ಸದಸ್ಯರು ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುವ “ನಂದಿನಿ’ ಧಾರಾವಾಹಿಯನ್ನು ವೀಕ್ಷಿಸುತ್ತಿದ್ದರು. ಅದರಲ್ಲಿ ಬರುವ ಪ್ರಸಂಗದಿಂದ ಪ್ರೇರಿತರಾಗಿ ಈ ಘಟನೆ ನಡೆದಿದೆ ಎಂದು ಅಕ್ಕಪಕ್ಕದ ಮನೆಯವರು ಹೇಳುತ್ತಿದ್ದಾರೆ.
– ಡಿ.ಹನುಮಂತಪ್ಪ, ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.