ಮಹಾನಗರಗಳಲ್ಲಿ ಎಲೆಕ್ಟ್ರಿಕ್ ಬಸ್ ಆರಂಭಕ್ಕೆ ಯತ್ನ’
Team Udayavani, Dec 1, 2017, 6:50 AM IST
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಎಲ್ಲ ಮಹಾನಗರಗಳಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್ಗಳ ಸಂಚಾರ ಆರಂಭಿಸುವ ಕುರಿತು ರಾಜ್ಯ ಸರ್ಕಾರ ಗಂಭೀರ ಪ್ರಯತ್ನ ನಡೆಸಿದೆ ಎಂದು ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅನೇಕ ಕಂಪನಿಗಳು ಎಲೆಕ್ಟ್ರಿಕ್ ಬಸ್ಗಳ ಉತ್ಪಾದನೆಗೆ ಆಸಕ್ತಿ ತೋರಿವೆ. ಅದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ಎಲೆಕ್ಟ್ರಿಕ್ ವೆಹಿಕಲ್ ನೀತಿಯನ್ನು ಜಾರಿಗೆ ತಂದಿದೆ.
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವೆಹಿಕಲ್ ಸಂಚಾರ ಆರಂಭಿಸಲು ನೀಲನಕ್ಷೆ ಸಿದಟಛಿಪಡಿಸುವ ಕುರಿತು ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಪರಿಸರಸ್ನೇಹಿ ಬಸ್ಗಳನ್ನು ಪ್ರಾಯೋಗಿಕವಾಗಿ ಬೆಂಗಳೂರಿನಲ್ಲಿ ಆರಂಭಿಸಿ ನಂತರ ಧಾರವಾಡ ಹಾಗೂ ಬೆಳಗಾವಿಯಲ್ಲಿ ಆರಂಭಿಸಲಾಗುವುದು.
ಹೈಬ್ರಿಡ್ ವಾಹನಗಳಿಗೆ ಜಿಎಸ್ಟಿ ಪ್ರಮಾಣ ಹೆಚ್ಚಾಗಿದ್ದು, ಕೇಂದ್ರ ಸರ್ಕಾರ ಅದನ್ನು ಕಡಿಮೆ ಮಾಡಬೇಕು. 2030ರ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗೆ ಪರ್ಯಾಯ ಇಂಧನ ಬಳಕೆಯಾಗಬೇಕು ಎಂದು ಹೇಳಿದರು.
ಭವಿಷ್ಯದಲ್ಲಿ ಅನುಕೂಲ: ಕೇಂದ್ರ ಸರ್ಕಾರ ಜಿಎಸ್ಟಿ ಜಾರಿಗೊಳಿಸಿದ ದಿನದಿಂದ ರಾಜ್ಯದ ಕೈಗಾರಿಕಾ ವಲಯದ ಮೇಲೂ ವ್ಯತಿರಿಕ್ತ ಪರಿಣಾಮ ಉಂಟಾಗಿದೆ. ಇದೊಂದು ಗೇಮ್ ಚೇಂಜಿಂಗ್ ನೀತಿ. ಮುಂದಿನ ದಿನಗಳಲ್ಲಿ ಸಾಕಷ್ಟು
ಅನುಕೂಲವಾಗಲಿದೆ ಎಂದು ಹೇಳಿದರು.
ಜಿಎಸ್ಟಿ ವ್ಯವಸ್ಥೆಯನ್ನು ಆರಂಭದಲ್ಲಿಯೇ ಸ್ವಾಗತ ಮಾಡಿದ್ದೇವೆ. ಆದರೆ, ಅದರ ಅನುಷ್ಠಾನದಲ್ಲಿ ಗೊಂದಲಗಳಿರುವ ಕಾರಣ ಸಾಕಷ್ಟು ಸಮಸ್ಯೆಯಾಗಿದೆ. ಏಕರೂಪದ ತೆರಿಗೆ ಜಾರಿಯಾಗುವುದರಿಂದ ರಾಜ್ಯಗಳ ಗಡಿ ಭಾಗದಲ್ಲಿ ಚೆಕ್ಪೋಸ್ಟ್ಗಳು ಇರುವುದಿಲ್ಲ ಎಂದು ಹೇಳಿದರು.
ಸಾರಿಗೆ, ಅರಣ್ಯ ಚೆಕ್ಪೋಸ್ಟ್: ಆದರೆ, ರಾಜ್ಯದಲ್ಲಿ ಇನ್ನೂ ಚೆಕ್ಪೋಸ್ಟ್ಗಳು ಕಾರ್ಯ ನಿರ್ವಹಿಸುತ್ತಿವೆಯಲ್ಲ ಎಂಬ ಪ್ರಶ್ನೆಗೆ, ವಾಣಿಜ್ಯ ತೆರಿಗೆ ಇಲಾಖೆಯ ಚೆಕ್ಪೋಸ್ಟ್ಗಳನ್ನು ತೆರವುಗೊಳಿಸಲಾಗಿದೆ. ಸಾರಿಗೆ ಮತ್ತು ಅರಣ್ಯ ಇಲಾಖೆಯ ಚೆಕ್ಪೋಸ್ಟ್ಗಳು ಮಾತ್ರ ಕಾರ್ಯ ನಿರ್ವಹಿಸುತ್ತಿವೆ ಎಂದು ಹೇಳಿದರು. ಪ್ರತಿಪಕ್ಷಗಳ ನಾಯಕರು ಮಾಡುವ ಎಲ್ಲ ಆರೋಪಗಳು ಸತ್ಯವಾಗಿರುವುದಿಲ್ಲ ಎಂದು ಹೇಳಿದರು.
ನವೆಂಬರ್ 23, 24ರಂದು ನಡೆದ ಹೂಡಿಕೆದಾರರ ಶೃಂಗಸಭೆ ಯಶಸ್ವಿಯಾಗಿದೆ. 20 ಸಾವಿರ ಕೋಟಿ ರೂ.ಗಿಂತ ಅಧಿಕ ಬಂಡವಾಳ ಹೂಡಿಕೆಗೆ ಒಪ್ಪಂದವಾಗಿದೆ. ಸುಮಾರು 86,750 ಜನರಿಗೆ ಉದ್ಯೋಗ ದೊರೆಯಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!