ನಮ್ಮದು ಟ್ರುಥ್ಫುಲ್ ಸಿನಿಮಾ,ಕನ್ಫ್ಯೂಷನ್, ಥ್ರಿಲ್ಲರ್ ಇಲ್ಲ
Team Udayavani, Dec 1, 2017, 3:12 PM IST
ಮೈಸೂರು: ‘ನಮ್ಮದು ಕನ್ಫ್ಯೂಷನ್ ಸಿನಿಮಾ ಅಲ್ಲ. ಥ್ರಿಲ್ಲರ್ ಸಿನಿಮಾನೂ ಅಲ್ಲ , ಇದು ಟ್ರಾಥ್ಫುಲ್ ಸಿನಿಮಾ ‘..ಇದು ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ಕುರಿತು ಸಂಸ್ಥಾಪಕ ಉಪೇಂದ್ರ ಹೇಳಿದ ಮಾತು.
ಶುಕ್ರವಾರ ಮೈಸೂರಿನಲ್ಲಿ ಪಕ್ಷ ಸಂಘಟನೆಯ ಚಟುವಟಿಕೆಯಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ನಾನು ಮತ ಹಾಕಿ ಎಂದು ಬೇಡುವುದಿಲ್ಲ. ದೇಶ ಸೇವೆ ಮಾಡಲು ಬಂದಿದ್ದು, ನೀವೆ ಗೆಲ್ಲಿಸಬೇಕು ಹೊರತು ನಾನು ಗೆಲ್ಲುತ್ತೇನೆ ಎಂದು ಹೇಳುವುದಿಲ್ಲ’ ಎಂದರು.
‘ನನಗೆ ಹಲವು ಗಣ್ಯರು, ಹಿರಿಯರು ಬೆಂಬಲ ನೀಡಿದ್ದಾರೆ. ಮೈಸೂರಿನ ಯದುವಂಶದ ಮಹಾರಾಜ ಯದುವೀರ್ ಅವರು ಬೆಂಬಲ ನೀಡಿದ್ದಾರೆ. ಮುಂದಿನ ದಿನದಲ್ಲಿ ಇನ್ನಷ್ಟು ಜನರು ಬೆಂಬಲ ನೀಡಲಿದ್ದಾರೆ’ ಎಂದರು.
‘ಇದುವರೆಗೆ ಯಾವ ನಟರೂ ಪಕ್ಷ ಸೇರುವುದಾಗಿ ಹೇಳಿಲ್ಲ ಆದರೆ ಶಿವಣ್ಣ, ಯಶ್ ಅವರು ಬೆಂಬಲ ಸೂಚಿಸಿದ್ದಾರೆ’ ಎಂದರು.
‘ರಾಜಕೀಯದಲ್ಲಿ ಬದಲಾವಣೆಗಾಗಿ ಕ್ಯಾಶ್ಲೆಸ್ ಕೆಪಿಜೆಪಿ ಹುಟ್ಟುಹಾಕಿ ಸಮಾಜದಲ್ಲಿ ಬದಲಾವಣೆಗೆ ಮುಂದಾಗಿದ್ದೇವೆ’ ಎಂದರು.
‘ಪಕ್ಷ ಆರಂಭವಾದಾಗ ಕೇವಲ 10 ಶೇಕಡಾ ಜನರಿಗೆ ಗೊತ್ತಾಗಿತ್ತು ಆದರೆ ಈಗ ಮಾಧ್ಯಮಗಳ ಮೂಲಕ ಹಳ್ಳಿ ಹಳ್ಳಿಯ ಜನರಿಗೆ ಪಕ್ಷದ ಬಗ್ಗೆ ತಿಳಿದಿದೆ’ ಎಂದರು.
‘ನಾನು ನಾಯಕನಾಗಬೇಕು ಎನ್ನುವವರು ನಮ್ಮ ಪಕ್ಷಕ್ಕೆ ಬೇಡ. ಬೆಳಗ್ಗೆ 9 ರಿಂದ ಸಂಜೆ 6 ರ ವರೆಗೆ ದುಡಿಯುವವರು ನಮ್ಮ ಪಕ್ಷಕ್ಕೆ ಬೇಕು’ ಎಂದರು.
‘ನನ್ನ ಮೇಲೆ ಯಾವುದೇ ಕೇಸ್ ದಾಖಲಾಗಿಲ್ಲ, ದಾಖಲಾದರೆ ಕಾನೂನು ಹೋರಾಟ ಮಾಡುತ್ತೇನೆ’ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ