ಹಳ್ಳ ಹಿಡಿಯುತ್ತಿದೆ ಕಾವೇರಿ ತಂತ್ರಾಂಶ ಯೋಜನೆ!


Team Udayavani, Dec 2, 2017, 7:47 AM IST

02-2.jpg



ಶಿವಮೊಗ್ಗ: ಜನಹಿತದ ದೃಷ್ಟಿಯಿಂದ ಸರ್ಕಾರ ಯಾವುದೇ ಯೋಜನೆ ಜಾರಿಗೆ ತಂದರೂ ಅಧಿಕಾರಿಗಳ ಅಸಹಕಾರದಿಂದ ಯೋಜನೆಗಳು ಹೇಗೆ ಹಳ್ಳಹಿಡಿಯುತ್ತವೆ ಎಂಬುದಕ್ಕೆ ಇನ್ನೊಂದು ಸಾಕ್ಷಿ ದೊರಕಿದೆ. ಕಾವೇರಿ ತಂತ್ರಾಂಶ ಬಳಸಿ ಆನ್‌ ಲೈನ್‌ ಮೂಲಕ ಆಸ್ತಿ ನೋಂದಣಿಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರದ ಯೋಜನೆ ಅಧಿಕಾರಿಗಳ ಅಸಹಕಾರದಿಂದ ನನೆಗುದಿಗೆ ಬಿದ್ದಿದೆ.

ಆಸ್ತಿ ಖರೀದಿದಾರರು ಮತ್ತು ಮಾರಾಟಗಾರರ ಪಾಲಿಗೆ ವರದಾನವಾಗಬೇಕಿದ್ದ ಈ ಮಹತ್ವದ ಯೋಜನೆ ಜಾರಿಗೊಂಡು ತಿಂಗಳುಗಳೇ ಕಳೆದರೂ ಯಾವುದೇ ನೋಂದಣಾಧಿಕಾರಿ ಕಚೇರಿಯಲ್ಲಿ ಯಾವ ಮಾಹಿತಿಯೂ ಇಲ್ಲ ಎನ್ನುವ ದೂರು ಕೇಳಿಬರುತ್ತಿದೆ. ಈ ಯೋಜನೆ ಕುರಿತು ಜನರಲ್ಲಿ  ಅರಿವು ಮೂಡಿಸುವ ಪ್ರಯತ್ನವನ್ನೂ ಅಧಿಕಾರಿಗಳು ಮಾಡದೆ ಇರುವುದರಿಂದ ಆನ್‌ಲೈನ್‌ ನೋಂದಣಿ ಕುರಿತು ಆಸಕ್ತಿ ಉಳ್ಳವರು ನಿರಾಸೆ ಪಡುವಂತಾಗಿದೆ. ಆನ್‌ಲೈನ್‌ ಮೂಲಕ ಆಸ್ತಿ ನೋಂದಣಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು “ಕಾವೇರಿ’ ಎಂಬ ವೆಬ್‌ ಆಧಾರಿತ ತಂತ್ರಾಂಶದ
ಅಪ್ಲಿಕೇಷನ್‌ ಅಭಿವೃದ್ಧಿಪಡಿಸಿದೆ. ಈ ಮೂಲಕ ಸಾರ್ವಜನಿಕರು ತಮ್ಮ ಆಸ್ತಿ ನೋಂದಣಿ ಸಂಬಂಧ ಮುಂಚಿತವಾಗಿ ಸಮಯ (ಅಪಾಯಿಂಟ್‌ ಮೆಂಟ್‌)ನಿಗದಿಪಡಿಸಿಕೊಳ್ಳಲು ಸಾಧ್ಯವಾಗಲಿದೆ. ಜತೆಗೆ ಅಗತ್ಯವಾದ ಇಂಡೆಕ್ಸ್‌ ಹುಡುಕಲು ಮತ್ತು ನೋಂದಣಿ ಪ್ರತಿ ಪಡೆಯುವ ಸೌಲಭ್ಯ ಕಲ್ಪಿಸಲಾಗಿದೆ.

ಕೈಗಾರಿಕಾ ನೀತಿ ಉತ್ತೇಜನ ಇಲಾಖೆ (ಡಿಐಪಿಪಿ), ಇಂಡಿಯಾ-ಬಿಸಿನೆಸ್‌ ಆ್ಯಕ್ಷನ್‌ ರೀ ಫಾರ್ಮ್ ಆ್ಯಕ್ಷನ್‌ ಪ್ಲಾನ್‌ ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಜಂಟಿ ಸಹಯೋಗದಲ್ಲಿ 1908ರ ನೋಂದಣಿ ಕಾಯ್ದೆ ಮತ್ತು 1932ರ ಪಾರ್ಟ್‌ನರ್‌ಶಿಪ್‌ ಫರ್‌ ಮ್ಸ್‌ ಅಡಿ ಆನ್‌ಲೈನ್‌ ಆಸ್ತಿ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಜತೆಗೆ ರಾಜ್ಯ ಸರ್ಕಾರ ಸಹ ಕಳೆದ ಅ.27 ರಂದು ಹೊರಡಿಸಿರುವ 27ನೇ ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ನೋಂದಣಾಧಿಕಾರಿಗಳು ಹಾಗೂ ಉಪ ನೋಂದಣಾಧಿಕಾರಿಗಳಿಗೆ ನೀಡಿರುವ ಸೂಚನೆಯಲ್ಲಿ ಆನ್‌ಲೈನ್‌ ಆಸ್ತಿ ನೋಂದಣಿ ಸಂಬಂಧ ಸಲ್ಲಿಕೆಯಾಗುವ ಅರ್ಜಿ ಪರಿಷ್ಕರಣೆ ಸಂಬಂಧ ಕಾರ್ಯೋನ್ಮುಖವಾಗುವಂತೆ
ಸೂಚಿಸಿದೆ.

ಇಷ್ಟೆಲ್ಲಾ ಪ್ರಯತ್ನ ಹಾಗೂ ಕ್ರಮಗಳ ಹೊರತಾಗಿಯೂ ಆನ್‌ಲೈನ್‌ ಮೂಲಕ ಈ ತನಕ ಬೆರಳೆಣಿಕೆಯಷ್ಟು ಜನ ಮಾತ್ರ ಆನ್‌ಲೈನ್‌ ಮೂಲಕ ಆಸ್ತಿ ನೋಂದಣಿ ಮಾಡಿಕೊಂಡಿದ್ದಾರೆ. ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಜಿಲ್ಲೆಯ ಯಾವುದೇ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಆನ್‌ಲೈನ್‌ ಆಸ್ತಿ ನೋಂದಣಿ ಸಂಬಂಧ ಯಾವುದೇ ಮಾಹಿತಿ ಫಲಕವಾಗಲಿ, ಸೂಚನೆಯಾಗಲಿ ಅಳವಡಿಸದ ಕಾರಣ ಜನ ಎಂದಿನಂತೆ ಸರದಿಯಲ್ಲಿ ನಿಂತು ಆಸ್ತಿ ನೋಂದಣಿ ಮಾಡಿಸಿಕೊಳ್ಳುವುದು
ಸಾಮಾನ್ಯವಾಗಿದೆ.

ಆಸ್ತಿ ನೋಂದಣಿ ಸಂಬಂಧ ಆನ್‌ಲೈನ್‌ ಮೂಲಕ ಸಲ್ಲಿಕೆಯಾಗುವ ಅರ್ಜಿಗಳಿಗೆ ಮಾತ್ರ ಉತ್ತೇಜನ ನೀಡುವಂತೆ ಹಿರಿಯ ಅಧಿಕಾರಿಗಳಿಂದ ನಾವು ನಿರ್ದೇಶಿತರಾಗಿದ್ದೇವೆ. ಇನ್ನುಳಿದಂತೆ ಆನ್‌ ಲೈನ್‌ ಆಸ್ತಿ ನೋಂದಣಿ ಸಂಬಂಧ ಸಾರ್ವಜನಿಕರಿಗೆ ಮಾಹಿತಿ ನೀಡುವ ಹಾಗೂ ಅರಿವು ಮೂಡಿಸುವ ನಿಟ್ಟಿನಲ್ಲಿ ಹೇಗೆ ಹಾಗೂ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಅಧಿಕಾರಿಗಳ
ಸೂಚನೆ ನಿರೀಕ್ಷಿಸಲಾಗುತ್ತಿದೆ ಎಂದು ಶಿವಮೊಗ್ಗ ಉಪ ನೋಂದಣಾ ಧಿಕಾರಿ ಕಚೇರಿಯ ಹಿರಿಯ ಉಪ ನೋಂದಣಾಧಿಕಾರಿ ಪ್ರಸಾದ್‌ ಕುಮಾರ್‌ ಹೇಳುತ್ತಾರೆ.

ಅಧಿಕೃತತೆ ತಿಳಿಯಲು ಸಾಧ್ಯ
ಕಾವೇರಿ ತಂತ್ರಾಂಶದ ಮೂಲಕ ನಾಗರಿಕರು ಆಸ್ತಿ ನೋಂದಣಿಗಾಗಿ ಅಪಾಯಿಂಟ್‌ ಮೆಂಟ್‌ ನಿಗದಿಪಡಿಸಿಕೊಳ್ಳಬಹುದಾಗಿದೆ.
ಇದರಿಂದಾಗಿ ಆಸ್ತಿಯ ಹಾಲಿ ಮಾಲೀಕರು ಯಾರು ಹಾಗೂ ಆಸ್ತಿ ನೋಂದಣಿ ದಾಖಲೆ ಪುಸ್ತಕದಲ್ಲಿ ಆಸ್ತಿಯ ಅಧಿಕೃತತೆಯನ್ನು
ತಿಳಿಯಲು ಸಾಧ್ಯವಾಗಲಿದೆ.

ಗೋಪಾಲ್‌ ಯಡಗೆರೆ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.