ದೈಹಿಕ ಶಿಕ್ಷಕರು ಇನ್ಮೇಲೆ ಶೌಚಾಲಯವನ್ನೂ ಕಟ್ಟಿಸಬೇಕು!


Team Udayavani, Dec 2, 2017, 8:26 AM IST

02-8.jpg

ಹಾವೇರಿ: ಜಿಲ್ಲೆಯನ್ನು ಬಯಲು ಶೌಚಮುಕ್ತಗೊಳಿಸಲು ನಿರ್ಧರಿಸಿರುವ ಜಿಲ್ಲಾಡಳಿತ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ದೈಹಿಕ ಶಿಕ್ಷಕರನ್ನು ಬಳಸಿಕೊಳ್ಳುತ್ತಿದೆ. ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು ದೈಹಿಕ ಶಿಕ್ಷಕರಿದ್ದು, ಇದರಲ್ಲಿ ಆರಂಭಿಕ ಹಂತವಾಗಿ ಹಾವೇರಿ ತಾಲೂಕಿನ 60ಕ್ಕೂ ಹೆಚ್ಚು ದೈಹಿಕ ಶಿಕ್ಷಕರನ್ನು ಬಳಸಿಕೊಳ್ಳಲಾಗುತ್ತಿದೆ. ಅಷ್ಟೇ ಅಲ್ಲ ಶೌಚಖಾನೆ ನಿರ್ಮಾಣದ  ಮೇಲುಸ್ತುವಾರಿಯನ್ನೂ ಇವರ ಹೆಗಲಿಗೆ ವಹಿಸಲಾಗಿದೆ.

ದೈಹಿಕ ಶಿಕ್ಷಕರು ನಿತ್ಯ ಒಂದು ಹಳ್ಳಿಯನ್ನು ಆಯ್ಕೆ ಮಾಡಿಕೊಂಡು ಹೋಗಬೇಕು. ಅಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ಮನೆ ಮನೆ ಭೇಟಿ ನೀಡಿ ಶೌಚಗೃಹ ನಿರ್ಮಿಸಿಕೊಳ್ಳುವಂತೆ ಜನರ ಮನವೊಲಿಸಬೇಕು. ಒಂದು ಹಳ್ಳಿಯಲ್ಲಿ ಜಾಗೃತಿ ಹಾಗೂ ಶೌಚಖಾನೆ ನಿರ್ಮಾಣ ಕಾರ್ಯ ಪೂರ್ಣಗೊಂಡ ಬಳಿಕ ಮತ್ತೂಂದು ಹಳ್ಳಿಯನ್ನು ಆಯ್ಕೆ ಮಾಡಿಕೊಂಡು ಅಲ್ಲಿಗೆ ಹೋಗಬೇಕು. ಇಡೀ ಜಿಲ್ಲೆಯನ್ನು ಕಳೆದ ಅಕ್ಟೋಬರ್‌ 2ರೊಳಗೆ ಬಯಲು ಶೌಚಮುಕ್ತಗೊಳಿಸುವ ಗುರಿ ಹಾಕಿಕೊಳ್ಳಲಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಕೇವಲ ಶಿಗ್ಗಾವಿ ತಾಲೂಕನ್ನು ಮಾತ್ರ ಅಂದು ಬಯಲು ಬಹಿರ್ದೆಸೆ ಮುಕ್ತ ತಾಲೂಕು ಎಂದು ಘೋಷಿಸಲಾಯಿತು. ಈಗ 50ಕ್ಕೂ ಹೆಚ್ಚು
ಗ್ರಾಪಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಶೌಚಾಲಯ ನಿರ್ಮಿಸಲಾಗಿದ್ದು, ಪ್ರಸಕ್ತ ವರ್ಷ ಒಟ್ಟು 24,258ಕ್ಕೂ ಹೆಚ್ಚು ಶೌಚಾಲಯ ನಿರ್ಮಿಸಲಾಗಿದೆ. ಇನ್ನೂ 80 ಸಾವಿರಕ್ಕೂ ಅಧಿ ಕ ಶೌಚಾಲಯ ನಿರ್ಮಿಸಬೇಕಿದೆ. ಇದರಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಲು ಜಿಲ್ಲಾಡಳಿತ ದೈಹಿಕ ಶಿಕ್ಷಕರನ್ನು ಬಳಸಿಕೊಳ್ಳುತ್ತಿದೆ.

ಶೌಚಾಲಯ ಉಸ್ತುವಾರಿ: ಶಿಕ್ಷಕರು ಮನೆ ಮನೆಗೆ ಹೋಗಿ ಶೌಚಾಲಯ ಕಟ್ಟಿಸಿಕೊಳ್ಳುವಂತೆ ಪ್ರೇರಣೆ ನೀಡುವುದಷ್ಟೇ ಅಲ್ಲ. ಸ್ವತಃ ಸ್ಥಳದಲ್ಲಿ ನಿಂತು ಶೌಚಾಲಯ ಕಟ್ಟಡ ನಿರ್ಮಾಣ ಕಾಮಗಾರಿ ಮೇಲುಸ್ತುವಾರಿ ವಹಿಸಬೇಕಿದೆ. ಈ ಕಾರ್ಯದಲ್ಲಿ
ಭಾಗಿಯಾಗಿರುವ ಬಗ್ಗೆ ಹಾಜರಾತಿ, ಎಷ್ಟು ಜನರ ಮನವೊಲಿಕೆ, ಎಷ್ಟು ಶೌಚಖಾನೆ ಕಟ್ಟಿಸಿದ್ದೇವೆ ಎಂಬ ವರದಿಯನ್ನು ಶಿಕ್ಷಕರು ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ ನೀಡಬೇಕಿದೆ.

ಮೌಖೀಕ ಆದೇಶ: ಶೌಚಾಲಯ ನಿರ್ಮಿಸಿಕೊಳ್ಳಲು ಪ್ರೇರೇಪಿಸುವ ಕಾರ್ಯಕ್ಕೆ ದೈಹಿಕ ಶಿಕ್ಷಕರನ್ನು ನೇಮಿಸಿರುವ ಕುರಿತು ಜಿಲ್ಲಾಡಳಿತ ಯಾವುದೇ ಲಿಖೀತ ಆದೇಶ ಮಾಡಿಲ್ಲ. ಬದಲಾಗಿ ಜಿಪಂ ಸಿಇಒ ಉಪನಿರ್ದೇಶಕರಿಗೆ, ಉಪನಿರ್ದೇಶಕರು ಎಲ್ಲ
ಬಿಇಒಗಳಿಗೆ ಮೌಖೀಕ ಆದೇಶ ಮಾಡಲಾಗಿದೆ. 

ದೈಹಿಕ ಶಿಕ್ಷಕರ ಬಳಕೆಗೆ ಆಕ್ಷೇಪ: ಶೌಚಾಲಯ ನಿರ್ಮಿಸಿಕೊಳ್ಳುವಂತೆ ಪ್ರೇರೇಪಿಸುವ ಕಾರ್ಯ ಒಳ್ಳೆಯದೆ. ಆದರೆ, ಸರ್ಕಾರ ಎಲ್ಲ ಕೆಲಸಗಳಿಗೂ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳುತ್ತದೆ. ಶಿಕ್ಷಣ ಬಿಟ್ಟು ಬೇರೆ ಕೆಲಸಗಳಿಗೆ ಶಿಕ್ಷಕರನ್ನು ಬಳಸಿಕೊಳ್ಳುತ್ತಿರುವುದಕ್ಕೆ ಪ್ರಜ್ಞಾವಂತರಿಂದ ಆಕ್ಷೇಪ ವ್ಯಕ್ತವಾಗಿದೆ. 

ಕ್ಷೇತ್ರ ಶಿಕ್ಷಣಾಧಿಕಾರಿಯವರು ನಮಗೆ ಇಂದು ಕುರುಬಗೊಂಡ ಗ್ರಾಮಕ್ಕೆ ಬರಲು ಸೂಚಿಸಿದ್ದಾರೆ. ಅಲ್ಲಿ ದೈಹಿಕ ಶಿಕ್ಷಕರು ಹೋಗಿ  ಸಂಜೆವರೆಗೂ ಮನೆ ಮನೆ ಓಡಾಡಿ ಶೌಚಾಲಯ ಕಟ್ಟಿಸಿ ಕೊಳ್ಳುವಂತೆ ಮನ ವರಿಕೆ ಮಾಡ ಬೇಕಿದೆ. ಜಿಲ್ಲೆಯ ಎಲ್ಲ ಹಳ್ಳಿಗಳು ಬಯಲು ಶೌಚಮುಕ್ತ ಆಗುವ ವರೆಗೆ ಬಿಇಒ ಸೂಚಿಸಿದ ಹಳ್ಳಿಗೆ ಹೋಗಿ ಅರಿವು ಮೂಡಿಸಿ, ಶೌಚಖಾನೆ ನಿರ್ಮಿಸು ವವರೆಗೂ ಮೇಲುಸ್ತುವಾರಿ ವಹಿಸಬೇಕು.
 ● ಹೆಸರು ಹೇಳಲಿಚ್ಚಿಸದ ದೈಹಿಕ ಶಿಕ್ಷಕರು

ಶೌಚಾಲಯ ಕಟ್ಟಿಸುವ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ನಾವು ಯಾವ ಶಿಕ್ಷಕರನ್ನು ಎಲ್ಲಿಯೂ ಅಧಿಕೃತವಾಗಿ ನಿಯೋಜಿಸಿಲ್ಲ. ಜಿಪಂ ಸಿಇಒ ಹಾಗೂ ಇಒ ಅವರ ಸೂಚನೆ ಮೇರೆಗೆ ಶಾಲಾ ಅವಧಿ ಬಿಟ್ಟು ಉಳಿದ ಅವಧಿ ಹಳ್ಳಿಗೆ ಹೋಗಿ ಜನರ ಮನವೊಲಿಸಲು, ಶೌಚಖಾನೆ ನಿರ್ಮಾಣದ ಮೇಲುಸ್ತುವಾರಿ ವಹಿಸಲು ಸೂಚಿಸಿದ್ದೇವೆ.
 ●ಸಿ. ಶಿವಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.