ಆನ್‌ಲೈನ್‌ನಲ್ಲಿ ಮಾಹಿತಿ ಅಪ್‌ಡೇಟ್‌ ಮಾಡಲು ಶಿಕ್ಷಕರ ಪರದಾಟ


Team Udayavani, Dec 2, 2017, 8:43 AM IST

02-10.jpg

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಭಾವಚಿತ್ರ ಸಹಿತ ಶೈಕ್ಷಣಿಕ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ಅಪ್‌ಡೇಟ್‌ ಮಾಡಲು ಶಿಕ್ಷಕರು ಪರದಾಡುತ್ತಿದ್ದಾರೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಒಂದರಿಂದ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳ ಮಾಹಿತಿ ಆನ್‌ಲೈನ್‌ನಲ್ಲಿ ಕ್ರೋಢೀ ಕರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲೇ ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್‌ ವ್ಯವಸ್ಥೆ(ಎಸ್‌ಎಟಿಎಸ್‌) ಜಾರಿಗೆ ತಂದಿದೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮಾಹಿತಿಯನ್ನು ಈ ವ್ಯವಸ್ಥೆಯ ಮೂಲಕವೇ ಆನ್‌ಲೈನ್‌ ಮಾಡಲಾಗುತ್ತಿದೆ. ಸರ್ಕಾರಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳ ಮಾಹಿತಿಯನ್ನು ಮುಖ್ಯ ಶಿಕ್ಷಕರು ಸಹಿತವಾಗಿ ಆಯಾ ವಿಷಯ ಶಿಕ್ಷಕರು ಎಸ್‌ಎಟಿಎಸ್‌ನಲ್ಲಿ ಅಪ್‌ಡೇಟ್‌ ಮಾಡಬೇಕು. ಆದರೆ, ಶಿಕ್ಷಕರಿಗೆ ಅಪ್‌ಡೇಟ್‌ ಮಾಡಲು ಸಾಧ್ಯವಾಗುತ್ತಿಲ್ಲ. ನಗರ ಪ್ರದೇಶದ ಶಾಲೆಯ ಶಿಕ್ಷಕರಿಗೂ ಸರ್ವರ್‌ ಸಿಗುತ್ತಿಲ್ಲ. ಇನ್ನು ಗ್ರಾಮೀಣ ಪ್ರದೇಶದ ಶಿಕ್ಷಕರಂತೂ ವಿದ್ಯಾರ್ಥಿಗಳ ಮಾಹಿತಿ ಅಪ್‌
ಡೇಟ್‌ಗೆ ಎಲ್ಲಿಲ್ಲದ ಸಾಹಸ ಮಾಡುತ್ತಿದ್ದಾರೆ.

ವಿದ್ಯಾರ್ಥಿಯ ಭಾವಚಿತ್ರ, ಜಾತಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಯ ಮಾಹಿತಿ, ಪಾಲಕರು ವಿವರ, ವಿಶಿಷ್ಟಚೇತನ ವಿದ್ಯಾರ್ಥಿಗಳ ಮಾಹಿತಿ, ಪಠ್ಯ ಮತ್ತು ಪಠ್ಯೇತರ ಚಟುವಟಕೆಯ ಸಾಧನೆ ಸೇರಿ ಒಬ್ಬ ವಿದ್ಯಾರ್ಥಿಯ ಸುಮಾರು 15 ಅಂಶಗಳನ್ನು ಆನ್‌ಲೈನ್‌ನಲ್ಲಿ ಅಪ್‌ ಡೇಟ್‌ ಮಾಡಬೇಕು. ಒಬ್ಬ ವಿದ್ಯಾರ್ಥಿಯ ಮಾಹಿತಿ ಅಪ್‌ಡೇಟ್‌ಗೆ ಕನಿಷ್ಠ 10ರಿಂದ 15 ನಿಮಿಷ
ಬೇಕಾಗುತ್ತದೆ. ಸರ್ವರ್‌ ಸರಿ ಇಲ್ಲದಿರುವುದರಿಂದ ಶಿಕ್ಷಕರಿಗೇ ದಿನ ಪೂರ್ತಿ ಇದೇ ಕೆಲಸವಾಗಿಬಿಟ್ಟಿದೆ ಎಂದು ಚಿತ್ರದುರ್ಗ ಮೂಲಕ ಶಿಕ್ಷಕರೊಬ್ಬರು ಸಮಸ್ಯೆ ವಿವರಿಸಿದರು. ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಯ ಪ್ರವೇಶಾತಿ, ಪ್ರೌಢಶಾಲೆಯ ಪ್ರವೇಶಾತಿ
ಯನ್ನು ಪ್ರತ್ಯೇಕವಾಗಿ ಅಪ್‌ಡೇಟ್‌ ಮಾಡಬೇಕು. ಬೆಂಗಳೂರು ನಗರ ಹಾಗೂ ಜಿಲ್ಲಾ ಕೇಂದ್ರದ ಕೆಲವು ಶಾಲೆಗಳಲ್ಲಿ ಕಂಪ್ಯೂಟರ್‌ ಹಾಗೂ ಇಂಟರ್‌ನೆಟ್‌ ಚೆನ್ನಾಗಿದೆ. ಇಂತಹ ಶಾಲೆಯ ಶಿಕ್ಷಕರೇ ಸರ್ವರ್‌ ಸಮಸ್ಯೆಯಿಂದ ವಿದ್ಯಾರ್ಥಿಗಳ ಮಾಹಿತಿ ಅಪ್‌ ಲೋಡ್‌ ಮಾಡಲಾಗದೇ ಗೋಳಾಡುತ್ತಿದ್ದಾರೆ. ಇನ್ನು ಗ್ರಾಮೀಣ ಪ್ರದೇಶದ ಶಿಕ್ಷಕರಂತೂ ತಮ್ಮ ಮೊಬೈಲ್‌ ನಲ್ಲೇ ಅಪ್‌ಲೋಡ್‌ ಮಾಡುವ ಸಾಹಸಕ್ಕೆ ಇಳಿದಿದ್ದಾರೆ ಎಂದು ಬೆಂಗಳೂರಿನ ಶಿಕ್ಷಕರೊಬ್ಬರು ಮಾಹಿತಿ ನೀಡಿದರು.

ಡಿ.12 ಡೆಡ್‌ಲೈನ್‌: ಪ್ರಸ್ತಕ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಸ್ಟೂಡೆಂಟ್‌ ಅಚೀವ್‌ಮೆಂಟ್‌ ಟ್ರ್ಯಾಕಿಂಗ್‌ ಸಿಸ್ಟಮ್‌ ನಲ್ಲಿ ಅಪ್‌ಲೋಡ್‌ ಮಾಡಲು ಡಿ.12 ಕೊನೆಯ ದಿನವಾಗಿದೆ.

ಮಾರ್ಕ್ಸ್ಕಾರ್ಡ್‌ ಸಮಸ್ಯೆ : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮಾಹಿತಿಯನ್ನು ಭಾವಚಿತ್ರ, ಸಹಿ ಹಾಗೂ ಜಾತಿ ಸಮೇತ ಆನ್‌ಲೈನ್‌ ಮೂಲಕ ಪಡೆಯುತ್ತಿದ್ದಾರೆ. ಸರ್ವರ್‌ ಸರಿಯಾಗಿ ಕೆಲಸ ಮಾಡದೇ ಇರುವುದರಿಂದ ಶಿಕ್ಷಕರಿಗೆ ತಲೆನೋವಾಗಿದೆ.

ಸಿಆರ್‌ಪಿಗಳಿಗೆ ಟ್ಯಾಬ್ಲೆಟ್‌
ವಿದ್ಯಾರ್ಥಿಗಳ ಟ್ರ್ಯಾಕ್‌ ರೆಕಾರ್ಡ್‌ ದಾಖಲಿಸಲು ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಿಗೆ 12 ಸಾವಿರ ರೂ. ಮೌಲ್ಯದ ಗುಣಮಟ್ಟದ ಟ್ಯಾಬ್‌ ಒದಗಿಸಲು ಇಲಾಖೆಯಿಂದ ತೀರ್ಮಾನ ತೆಗೆದುಕೊಂಡಿದೆ. ಸಿಆರ್‌ಪಿ ವ್ಯಾಪ್ತಿಯಲ್ಲಿ 15ರಿಂದ 30 ಶಾಲೆಗಳು ಇರುತ್ತದೆ. ಟ್ಯಾಬ್‌ ಮೂಲಕ ತಮ್ಮ ವ್ಯಾಪ್ತಿಯ ಎಲ್ಲಾ ಶಾಲೆಯ ಮಕ್ಕಳ ಹಾಜರಾತಿಯನ್ನು ಪ್ರತಿ ತಿಂಗಳು ಅಪ್‌ ಡೇಟ್‌ ಮಾಡಲಿದ್ದಾರೆ. ಬಿಸಿಯೂಟ, ಶೂ, ಸಾಕ್ಸ್‌, ಹಾಲು, ಸಮವಸ್ತ್ರ ವಿತರಣೆ, ಸೈಕಲ್‌ ವಿತರಣೆ, ಪಠ್ಯಪುಸ್ತಕ ವಿತರಣೆ ಸೇರಿ ಸರ್ಕಾರದ ಯೋಜನೆಯ ಅನುಷ್ಠಾನದ ಮಾಹಿತಿ ಆನ್‌ಲೈನ್‌ನಲ್ಲೇ ಅಂಕಿಅಂಶ ಸಹಿತವಾಗಿ ಅಪ್‌ಡೇಟ್‌ ಮಾಡಲು ಸೂಚಿಸಲಾಗಿದೆ.

ಸ್ಟೂಡೆಂಟ್‌ ಅಚಿವ್‌ಮೆಂಟ್‌ ಟ್ರ್ಯಾಕಿಂಗ್‌ ಸಿಸ್ಟಂನಲ್ಲಿ ವಿದ್ಯಾರ್ಥಿಗಳ ಮಾಹಿತಿ ಅಪ್‌ಡೇಟ್‌ಗೆ ಸರ್ವರ್‌ ಸಮಸ್ಯೆ ಇರುವುದು ನಿಜ. ಸಮಸ್ಯೆ ಸರಿಪಡಿಸಲು ಬೇಕಾದ ಎಲ್ಲಾ ರೀತಿಯ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮಾಹಿತಿ ಅಪ್‌ಡೇಟ್‌ಗೆ ಡಿ.12 ಕೊನೆಯ ದಿನ. 
 ●ವಿ.ಸುಮಂಗಳಾ, ಎಸ್ಸೆಸ್ಸೆಲ್ಸಿ ಬೋರ್ಡ್‌ ನಿರ್ದೇಶಕಿ

ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.