ಆನ್‌ಲೈನ್‌ನಲ್ಲಿ ಮಾಹಿತಿ ಅಪ್‌ಡೇಟ್‌ ಮಾಡಲು ಶಿಕ್ಷಕರ ಪರದಾಟ


Team Udayavani, Dec 2, 2017, 8:43 AM IST

02-10.jpg

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಭಾವಚಿತ್ರ ಸಹಿತ ಶೈಕ್ಷಣಿಕ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ಅಪ್‌ಡೇಟ್‌ ಮಾಡಲು ಶಿಕ್ಷಕರು ಪರದಾಡುತ್ತಿದ್ದಾರೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಒಂದರಿಂದ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳ ಮಾಹಿತಿ ಆನ್‌ಲೈನ್‌ನಲ್ಲಿ ಕ್ರೋಢೀ ಕರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲೇ ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್‌ ವ್ಯವಸ್ಥೆ(ಎಸ್‌ಎಟಿಎಸ್‌) ಜಾರಿಗೆ ತಂದಿದೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮಾಹಿತಿಯನ್ನು ಈ ವ್ಯವಸ್ಥೆಯ ಮೂಲಕವೇ ಆನ್‌ಲೈನ್‌ ಮಾಡಲಾಗುತ್ತಿದೆ. ಸರ್ಕಾರಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳ ಮಾಹಿತಿಯನ್ನು ಮುಖ್ಯ ಶಿಕ್ಷಕರು ಸಹಿತವಾಗಿ ಆಯಾ ವಿಷಯ ಶಿಕ್ಷಕರು ಎಸ್‌ಎಟಿಎಸ್‌ನಲ್ಲಿ ಅಪ್‌ಡೇಟ್‌ ಮಾಡಬೇಕು. ಆದರೆ, ಶಿಕ್ಷಕರಿಗೆ ಅಪ್‌ಡೇಟ್‌ ಮಾಡಲು ಸಾಧ್ಯವಾಗುತ್ತಿಲ್ಲ. ನಗರ ಪ್ರದೇಶದ ಶಾಲೆಯ ಶಿಕ್ಷಕರಿಗೂ ಸರ್ವರ್‌ ಸಿಗುತ್ತಿಲ್ಲ. ಇನ್ನು ಗ್ರಾಮೀಣ ಪ್ರದೇಶದ ಶಿಕ್ಷಕರಂತೂ ವಿದ್ಯಾರ್ಥಿಗಳ ಮಾಹಿತಿ ಅಪ್‌
ಡೇಟ್‌ಗೆ ಎಲ್ಲಿಲ್ಲದ ಸಾಹಸ ಮಾಡುತ್ತಿದ್ದಾರೆ.

ವಿದ್ಯಾರ್ಥಿಯ ಭಾವಚಿತ್ರ, ಜಾತಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಯ ಮಾಹಿತಿ, ಪಾಲಕರು ವಿವರ, ವಿಶಿಷ್ಟಚೇತನ ವಿದ್ಯಾರ್ಥಿಗಳ ಮಾಹಿತಿ, ಪಠ್ಯ ಮತ್ತು ಪಠ್ಯೇತರ ಚಟುವಟಕೆಯ ಸಾಧನೆ ಸೇರಿ ಒಬ್ಬ ವಿದ್ಯಾರ್ಥಿಯ ಸುಮಾರು 15 ಅಂಶಗಳನ್ನು ಆನ್‌ಲೈನ್‌ನಲ್ಲಿ ಅಪ್‌ ಡೇಟ್‌ ಮಾಡಬೇಕು. ಒಬ್ಬ ವಿದ್ಯಾರ್ಥಿಯ ಮಾಹಿತಿ ಅಪ್‌ಡೇಟ್‌ಗೆ ಕನಿಷ್ಠ 10ರಿಂದ 15 ನಿಮಿಷ
ಬೇಕಾಗುತ್ತದೆ. ಸರ್ವರ್‌ ಸರಿ ಇಲ್ಲದಿರುವುದರಿಂದ ಶಿಕ್ಷಕರಿಗೇ ದಿನ ಪೂರ್ತಿ ಇದೇ ಕೆಲಸವಾಗಿಬಿಟ್ಟಿದೆ ಎಂದು ಚಿತ್ರದುರ್ಗ ಮೂಲಕ ಶಿಕ್ಷಕರೊಬ್ಬರು ಸಮಸ್ಯೆ ವಿವರಿಸಿದರು. ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಯ ಪ್ರವೇಶಾತಿ, ಪ್ರೌಢಶಾಲೆಯ ಪ್ರವೇಶಾತಿ
ಯನ್ನು ಪ್ರತ್ಯೇಕವಾಗಿ ಅಪ್‌ಡೇಟ್‌ ಮಾಡಬೇಕು. ಬೆಂಗಳೂರು ನಗರ ಹಾಗೂ ಜಿಲ್ಲಾ ಕೇಂದ್ರದ ಕೆಲವು ಶಾಲೆಗಳಲ್ಲಿ ಕಂಪ್ಯೂಟರ್‌ ಹಾಗೂ ಇಂಟರ್‌ನೆಟ್‌ ಚೆನ್ನಾಗಿದೆ. ಇಂತಹ ಶಾಲೆಯ ಶಿಕ್ಷಕರೇ ಸರ್ವರ್‌ ಸಮಸ್ಯೆಯಿಂದ ವಿದ್ಯಾರ್ಥಿಗಳ ಮಾಹಿತಿ ಅಪ್‌ ಲೋಡ್‌ ಮಾಡಲಾಗದೇ ಗೋಳಾಡುತ್ತಿದ್ದಾರೆ. ಇನ್ನು ಗ್ರಾಮೀಣ ಪ್ರದೇಶದ ಶಿಕ್ಷಕರಂತೂ ತಮ್ಮ ಮೊಬೈಲ್‌ ನಲ್ಲೇ ಅಪ್‌ಲೋಡ್‌ ಮಾಡುವ ಸಾಹಸಕ್ಕೆ ಇಳಿದಿದ್ದಾರೆ ಎಂದು ಬೆಂಗಳೂರಿನ ಶಿಕ್ಷಕರೊಬ್ಬರು ಮಾಹಿತಿ ನೀಡಿದರು.

ಡಿ.12 ಡೆಡ್‌ಲೈನ್‌: ಪ್ರಸ್ತಕ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಸ್ಟೂಡೆಂಟ್‌ ಅಚೀವ್‌ಮೆಂಟ್‌ ಟ್ರ್ಯಾಕಿಂಗ್‌ ಸಿಸ್ಟಮ್‌ ನಲ್ಲಿ ಅಪ್‌ಲೋಡ್‌ ಮಾಡಲು ಡಿ.12 ಕೊನೆಯ ದಿನವಾಗಿದೆ.

ಮಾರ್ಕ್ಸ್ಕಾರ್ಡ್‌ ಸಮಸ್ಯೆ : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮಾಹಿತಿಯನ್ನು ಭಾವಚಿತ್ರ, ಸಹಿ ಹಾಗೂ ಜಾತಿ ಸಮೇತ ಆನ್‌ಲೈನ್‌ ಮೂಲಕ ಪಡೆಯುತ್ತಿದ್ದಾರೆ. ಸರ್ವರ್‌ ಸರಿಯಾಗಿ ಕೆಲಸ ಮಾಡದೇ ಇರುವುದರಿಂದ ಶಿಕ್ಷಕರಿಗೆ ತಲೆನೋವಾಗಿದೆ.

ಸಿಆರ್‌ಪಿಗಳಿಗೆ ಟ್ಯಾಬ್ಲೆಟ್‌
ವಿದ್ಯಾರ್ಥಿಗಳ ಟ್ರ್ಯಾಕ್‌ ರೆಕಾರ್ಡ್‌ ದಾಖಲಿಸಲು ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಿಗೆ 12 ಸಾವಿರ ರೂ. ಮೌಲ್ಯದ ಗುಣಮಟ್ಟದ ಟ್ಯಾಬ್‌ ಒದಗಿಸಲು ಇಲಾಖೆಯಿಂದ ತೀರ್ಮಾನ ತೆಗೆದುಕೊಂಡಿದೆ. ಸಿಆರ್‌ಪಿ ವ್ಯಾಪ್ತಿಯಲ್ಲಿ 15ರಿಂದ 30 ಶಾಲೆಗಳು ಇರುತ್ತದೆ. ಟ್ಯಾಬ್‌ ಮೂಲಕ ತಮ್ಮ ವ್ಯಾಪ್ತಿಯ ಎಲ್ಲಾ ಶಾಲೆಯ ಮಕ್ಕಳ ಹಾಜರಾತಿಯನ್ನು ಪ್ರತಿ ತಿಂಗಳು ಅಪ್‌ ಡೇಟ್‌ ಮಾಡಲಿದ್ದಾರೆ. ಬಿಸಿಯೂಟ, ಶೂ, ಸಾಕ್ಸ್‌, ಹಾಲು, ಸಮವಸ್ತ್ರ ವಿತರಣೆ, ಸೈಕಲ್‌ ವಿತರಣೆ, ಪಠ್ಯಪುಸ್ತಕ ವಿತರಣೆ ಸೇರಿ ಸರ್ಕಾರದ ಯೋಜನೆಯ ಅನುಷ್ಠಾನದ ಮಾಹಿತಿ ಆನ್‌ಲೈನ್‌ನಲ್ಲೇ ಅಂಕಿಅಂಶ ಸಹಿತವಾಗಿ ಅಪ್‌ಡೇಟ್‌ ಮಾಡಲು ಸೂಚಿಸಲಾಗಿದೆ.

ಸ್ಟೂಡೆಂಟ್‌ ಅಚಿವ್‌ಮೆಂಟ್‌ ಟ್ರ್ಯಾಕಿಂಗ್‌ ಸಿಸ್ಟಂನಲ್ಲಿ ವಿದ್ಯಾರ್ಥಿಗಳ ಮಾಹಿತಿ ಅಪ್‌ಡೇಟ್‌ಗೆ ಸರ್ವರ್‌ ಸಮಸ್ಯೆ ಇರುವುದು ನಿಜ. ಸಮಸ್ಯೆ ಸರಿಪಡಿಸಲು ಬೇಕಾದ ಎಲ್ಲಾ ರೀತಿಯ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮಾಹಿತಿ ಅಪ್‌ಡೇಟ್‌ಗೆ ಡಿ.12 ಕೊನೆಯ ದಿನ. 
 ●ವಿ.ಸುಮಂಗಳಾ, ಎಸ್ಸೆಸ್ಸೆಲ್ಸಿ ಬೋರ್ಡ್‌ ನಿರ್ದೇಶಕಿ

ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.