ಸುದ್ದಿಗೋಷ್ಠಿಯಲ್ಲಿ ವರದಿಗಾರನ ಮೇಲೆ ಬಿಜೆಪಿ ನಾಯಕರ ಗೂಂಡಾಗಿರಿ
Team Udayavani, Dec 2, 2017, 4:19 PM IST
ತುಮಕೂರು: ಇಲ್ಲಿ ನಡೆಯುತ್ತಿದ್ದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತನೊಬ್ಬನ ಮೇಲೆ ಬಿಜೆಪಿ ಮುಖಂಡರಿಬ್ಬರು ಹಲ್ಲೆ ನಡೆಸಿ ಬಟ್ಟೆ ಹರಿದು ಹಾಕಿ ಗೂಂಡಾಗಿರಿ ಮೆರೆದ ಘಟನೆ ಶನಿವಾರ ನಡೆದಿದೆ.
ಅಕ್ರಮ ಕಲ್ಲು ಗಣಿಗಾರಿಗೆಯ ಬಗ್ಗೆ ವರದಿ ಮಾಡಿದ ಖಾಸಗಿ ವಾಹಿನಿಯ ವರದಿಗಾರ ವಾಗೀಶ್ ಎನ್ನುವವರ ಮೇಲೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಬ್ಬಾಕ ರವಿ ಮತ್ತು ಪಾಲಿಕೆ ಸದಸ್ಯ ಬಾವಿಕಟ್ಟೆ ನಾಗಣ್ಣ ಎನ್ನುವವರು ಏಕಾಏಕಿ ಎರಗಿ ಹಲ್ಲೆ ನಡೆಸಿ ಬಟ್ಟೆಹರಿದು ಹಾಕಿದ್ದಾರೆ.
ಈ ಸಂಬಂಧ ತುಮಕೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ನಡೆಸುವುದಾಗಿ ತುಮಕೂರು ಎಸ್ಪಿ ದಿವ್ಯಾ ಗೋಪಿನಾಥ್ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ.
ಹಲ್ಲೆ ನಡೆದ ವೇಳೆ ವಾಗೀಶ್ ಒಬ್ಬರೆ ಇದ್ದು ಅಸಹಾಯಕರಾಗಿದ್ದರು, ಬೇರೆ ಯಾವ ಚಾನಲ್ನ ಪತ್ರಕರ್ತರು ಸ್ಥಳದಲ್ಲಿ ಇರಲಿಲ್ಲ ಎನ್ನಲಾಗಿದೆ. ನಿರಂತರವಾಗಿ ವಾಗೀಶ್ಗೆ ಬೆದರಿಕೆ ಹಾಕಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ