ದಲಿತರ ಪರ ಕಾಂಗ್ರೆಸ್ ಬದ್ಧತೆ ಎಚ್ಡಿಕೆ ಸರ್ಟಿಫಿಕೇಟ್ ಬೇಕಿಲ್ಲ
Team Udayavani, Dec 3, 2017, 6:30 AM IST
ಬೆಂಗಳೂರು: ದಲಿತರು ಹಾಗೂ ಅಲ್ಪ ಸಂಖ್ಯಾಕರ ಕುರಿತ ಕಾಂಗ್ರೆಸ್ ಬದ್ಧತೆ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಟಿಫಿಕೇಟ್ ಬೇಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ರಾಹುಲ್ ಗಾಂಧಿ ಅವರಿಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸೂಚಕರಾಗಿ ಸಹಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್ ಪಕ್ಷ ದಲಿತರು ಹಾಗೂ ಅಲ್ಪ ಸಂಖ್ಯಾಕರು ಮತ್ತು ಹಿಂದುಳಿದವರ ಏಳಿಗೆಗೆ ಶ್ರಮಿಸುತ್ತಿದೆ ಎಂದು ಹೇಳಿದರು. ರಾಜ್ಯದಲ್ಲಿ ದಲಿತರು ಮತ್ತು ಅಲ್ಪ ಸಂಖ್ಯಾಕರಿಗೆ ಉತ್ತಮ ಶಿಕ್ಷಣ ನೀಡುತ್ತಿರುವುದರಿಂದಲೇ ದಲಿತರ ಶೈಕ್ಷಣಿಕ ಮಟ್ಟ ಶೇಕಡಾ 68ಕ್ಕೆ ಏರಿದೆ. ಕಾಂಗ್ರೆಸ್ ಪಕ್ಷ ಬಡವರು ಮತ್ತು ಅಲ್ಪ ಸಂಖ್ಯಾಕರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ. ಯಾರು ಏನು ಬೇಕಾದರೂ ಹೇಳಿಕೊಳ್ಳಬಹುದು ಎಂದರು.
ಸಿದ್ದರಾಮಯ್ಯ ಆಪರೇಷನ್ ಕಮಲ ಮಾಡಲು ಬಿಜೆಪಿಯವರಿಗೆ ಸಹಕಾರ ನೀಡಿದ್ದರು ಹಾಗೂ ಖರ್ಗೆ ಮತ್ತು ಪರಮೇಶ್ವರ್ ಅವರನ್ನು ತುಳಿದು ಮೇಲೆ ಬಂದಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ್, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲು ಏನೇನು ಮಾಡಿದರು ಎನ್ನುವುದನ್ನು ಅವರು ನೆನಪಿಸಿಕೊಳ್ಳಲಿ ಎಂದು “ಟಾಂಗ್’ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ