ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳಲ್ಲಿ ತಳಮಳ


Team Udayavani, Dec 10, 2017, 6:20 AM IST

BJP_symbol.jpg

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದರೂ ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್‌ ಯಾರಿಗೆ ಎಂಬ ಮುನ್ಸೂಚನೆಯೂ ಸಿಗದ ಕಾರಣ ಟಿಕೆಟ್‌ ಆಕಾಂಕ್ಷಿಗಳಲ್ಲಿ ತಳಮಳ ಶುರುವಾಗಿದೆ.

ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಬಿಡುಗಡೆ ಮಾಡುವುದು ವಿಳಂಬವಾದರೂ ಬಹುತೇಕ ಕ್ಷೇತ್ರಗಳಲ್ಲಿ ಇಂಥವರಿಗೇ ಟಿಕೆಟ್‌ ಎಂದು ಹೇಳಿ ಕೆಲಸ ಆರಂಭಿಸುವಂತೆ ಚುನಾವಣೆಗೆ 5-6 ತಿಂಗಳು ಇರುವಾಗಲೇ ಸೂಚನೆ ನೀಡಲಾಗುತ್ತದೆ. ಆದರೆ, ಈ ಬಾರಿ ಬಹುತೇಕ ಹಾಲಿ ಶಾಸಕರಿಗೆ ಮತ್ತು 2008ರಲ್ಲಿ ಗೆದ್ದು 2013ರಲ್ಲಿ ಸೋತಿದ್ದ ಸುಮಾರು 15-20 ಮಂದಿಗೆ ಮಾತ್ರ ಟಿಕೆಟ್‌ ಖಾತರಿಯಾಗಿದೆ. ಹೀಗಾಗಿ ಚುನಾವಣಾ ಸಿದ್ಧತೆ ಮಾಡಿಕೊಳ್ಳುವುದು ಹೇಗೆ ಎಂಬ ಆತಂಕ ಆಕಾಂಕ್ಷಿಗಳಲ್ಲಿ ಕಾಣಿಸಿಕೊಂಡಿದೆ.

ಈ ಮಧ್ಯೆ ಪರಿವರ್ತನಾ ಯಾತ್ರೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಒಂದೆರಡು ಕ್ಷೇತ್ರಗಳಲ್ಲಿ ಇಂಥವರೇ ಮುಂದಿನ ಅಭ್ಯರ್ಥಿ ಎಂದು ಘೋಷಿಸಿರುವುದರಿಂದ ಪಕ್ಷದಲ್ಲಿ ಗೊಂದಲ ಸೃಷ್ಟಿಯಾಗಿದ್ದು, ಹೀಗಾಗಿ ಪಕ್ಷದ ವರಿಷ್ಠರು ಯಾರಿಗೂ ಟಿಕೆಟ್‌ ಭರವಸೆ ನೀಡದಂತೆ ಸೂಚಿಸಿದ್ದಾರೆ. ಗುಜರಾತ್‌ ಚುನಾವಣೆ ಬಳಿಕವೇ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

2013ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 40 ಸ್ಥಾನ ಗೆದ್ದಿದ್ದರೆ ಬಿಜೆಪಿಯಿಂದ ಸಿಡಿದು ಹೋಗಿದ್ದ ಕೆಜೆಪಿ ಮತ್ತು ಬಿಎಸ್‌ಆರ್‌ ಕಾಂಗ್ರೆಸ್‌ ಒಟ್ಟಾಗಿ 7 ಸ್ಥಾನ ಗೆದ್ದಿತ್ತು. ಇದೀಗ ಮತ್ತೆ ಆ ಎರಡೂ ಪಕ್ಷಗಳು ಬಿಜೆಪಿ ಜತೆ ವಿಲೀನವಾಗಿದೆ. ಈ ಪೈಕಿ ಕೆಜೆಪಿಯ ಒಬ್ಬ ಶಾಸಕ ಹೊರತುಪಡಿಸಿ ಉಳಿದ 6 ಶಾಸಕರು ಬಿಜೆಪಿ ಜತೆಗಿದ್ದು, ಪಕ್ಷದ ಬಲ 46 ಆಗಿದೆ. ಈ ಪೈಕಿ ಬಹುತೇಕರಿಗೆ ಟಿಕೆಟ್‌ ಖಾತರಿಯಾಗಿದೆ.

ಮುಗಿಯದ ಬಿಜೆಪಿ-ಕೆಜೆಪಿ ಗದ್ದಲ: ಪ್ರಸ್ತುತ ಬಿಜೆಪಿಯೊಂದಿಗೆ ಕೆಜೆಪಿ ವಿಲೀನಗೊಂಡಿದ್ದರೂ ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಬಿಜೆಪಿ-ಕೆಜೆಪಿ ಗೊಂದಲ ಮುಂದುವರಿದಿದೆ. ಟಿಕೆಟ್‌ ಹಂಚಿಕೆ ವೇಳೆ ಯಡಿಯೂರಪ್ಪ ಅವರು ಕಳೆದ ಬಾರಿ ತಮ್ಮೊಂದಿಗೆ ಕೆಜೆಪಿಗೆ ಬಂದವರಿಗೆ ಆದ್ಯತೆ ನೀಡುತ್ತಿದ್ದಾರೆಂಬ ಆರೋಪ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಸೋತವರಿಂದ ಕೇಳಿಬಂದಿದೆ. ಈಗಾಗಲೇ ಬಿಎಸ್‌ವೈ  ಒಂದೆರಡು ಕಡೆ ತಮ್ಮೊಂದಿಗೆ ಕೆಜೆಪಿಯಲ್ಲಿದ್ದವರಿಗೆ ಟಿಕೆಟ್‌ ಘೋಷಣೆ ಮಾಡಿದ್ದು, ಈ ಬಗ್ಗೆ  ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಹೀಗಾಗಿ ಒಂದೊಮ್ಮೆ ಯಡಿಯೂರಪ್ಪ ಅವರಿಗೆ ಟಿಕೆಟ್‌ ಹಂಚಿಕೆ ಅಧಿಕಾರ ನೀಡಿದರೆ ಆಗ ಅವರೊಂದಿಗೆ ಕೆಜೆಪಿಯಲ್ಲಿದ್ದವರಿಗೆ ಆದ್ಯತೆ ನೀಡುವ ಸಾಧ್ಯತೆಯಿದ್ದು, ಆಗ ಪಕ್ಷದಲ್ಲಿ ಮತ್ತೆ ಅಸಮಾಧಾನ ಹೊಗೆಯಾಡುತ್ತದೆ. ಇದು ಚುನಾವಣೆಯಲ್ಲಿ ಪ್ರತಿಕೂಲ ಪರಿಣಾಮ ಬೀರಲಿದೆ ಎಂಬ ದೂರನ್ನು ರಾಜ್ಯದ ಬಿಜೆಪಿ ಮುಖಂಡರು ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್‌ ಜಾವಡೇಕರ್‌ ಮೂಲಕ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರಿಗೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಕಾಂಕ್ಷಿಗಳ ಸಂಖ್ಯೆ 2ಕ್ಕಿಂತ ಹೆಚ್ಚಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತ ಸಮೀಕ್ಷಾ ವರದಿ ಆಧರಿಸಿ ತಮ್ಮೊಂದಿಗೆ ಚರ್ಚಿಸದೆ ಯಾವುದೇ ನಿರ್ಧಾರ ಕೈಗೊಳ್ಳದಂತೆ ಅಮಿತ್‌ ಶಾ ಸೂಚಿಸಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್‌ ಖಾತರಿಯಾಗಿದೆ. ಉಳಿದಂತೆ ಶಿವಮೊಗ್ಗದಲ್ಲಿ ಕೆ.ಎಸ್‌.ಈಶ್ವರಪ್ಪ, ಬೆಳಗಾವಿ ದಕ್ಷಿಣದಲ್ಲಿ ಅಭಯ್‌ ಪಾಟೀಲ್‌, ಬೈಲಹೊಂಗಲದಲ್ಲಿ ಜಗದೀಶ್‌ ಮೆಟಗುಡ್ಡ, ತೇರದಾಳದಲ್ಲಿ ಸಿದ್ದು ಸವದಿ, ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ, ಅಫ‌ಜಲಪುರದಲ್ಲಿ ಕಳೆದ ಬಾರಿ ಕೆಜೆಪಿಯಿಂದ ಸ್ಪರ್ಧಿಸಿದ್ದ ಎಂ.ವೈ.ಪಾಟೀಲ್‌, ಸುರಪುರದಲ್ಲಿ ರಾಜೂಗೌಡ, ಕನಕಗಿರಿಯಲ್ಲಿ ಕೆಜೆಪಿಯಿಂದ ಸೋತಿದ್ದ ಬಸವರಾಜ ದಡೇಸೂಗೂರು, ಕೊಪ್ಪಳದಲ್ಲಿ ಕರಡಿ ಸಂಗಣ್ಣ, ನರಗುಂದದಲ್ಲಿ ಸಿ.ಸಿ.ಪಾಟೀಲ್‌, ಶಿರಹಟ್ಟಿಯಲ್ಲಿ ರಾಮಪ್ಪ ಲಮಾಣಿ, ಹಾನಗಲ್‌ನಲ್ಲಿ ಸಿ.ಎಂ.ಉದಾಸಿ, ಬೀಳಗಿ ಅಥವಾ ಜಮಖಂಡಿಯಲ್ಲಿ ಮುರುಗೇಶ್‌ ನಿರಾಣಿ ಅವರಿಗೆ ಟಿಕೆಟ್‌ ಬಹುತೇಕ ಖಾತರಿ ಎಂದು ಹೇಳಲಾಗಿದೆ.

ಪೈಪೋಟಿ ತೀವ್ರ: ಉಳಿದಂತೆ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಕಾಂಕ್ಷಿಗಳ ಸಂಖ್ಯೆ ಎರಡಕ್ಕಿಂತ ಹೆಚ್ಚಾಗಿದ್ದು, ಈ ಕ್ಷೇತ್ರಗಳಲ್ಲಿ ಯಾರ ಹೆಸರನ್ನು ಅಂತಿಮಗೊಳಿಸಬೇಕು ಎಂಬ ಬಗ್ಗೆ ಸಮೀಕ್ಷೆ ವರದಿ ಆಧರಿಸಿ ಡಿಸೆಂಬರ್‌ ಅಂತ್ಯದ ವೇಳೆ ಚರ್ಚೆ ಆರಂಭವಾಗಲಿದೆ. ಬೇರೆ ಬೇರೆಯವರಿಂದ ಮೂರು ಸಮೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಇದರಲ್ಲಿ ಎರಡು ಸಮೀಕ್ಷೆಗಳಲ್ಲಿ ಯಾರ ಹೆಸರು ಮೊದಲು ಬರುತ್ತದೋ ಅವರಿಗೆ ಟಿಕೆಟ್‌ ಸಿಗಲಿದೆ ಎಂದು ಹೇಳಲಾಗುತ್ತಿದೆ.

– ಪ್ರದೀಪ್‌ ಕುಮಾರ್‌ ಎಂ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.