ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಟೂಲ್ಕಿಟ್
Team Udayavani, Dec 11, 2017, 7:35 AM IST
ಬೆಂಗಳೂರು: ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಡಗದ ವಿದ್ಯಾರ್ಥಿಗಳಿಗೆ ಕಿಂಡ್ಲೆà(ಇ-ರಿಡರ್), ವೈ-ಫೈ ಡಾಂಗಲ್ ಹಾಗೂ
32 ಜಿಬಿ ಪೆನ್ಡ್ರೈವ್ ಸಹಿತವಾದ ಲ್ಯಾಬೋರೇಟರಿ ಟೂಲ್ಕಿಟ್ ನೀಡಲು ಸರ್ಕಾರ ನಿರ್ಧರಿಸಿದೆ.
ಕಾಲೇಜು ಶಿಕ್ಷಣ ಇಲಾಖೆ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಎಲ್ಲಾ ವಿದ್ಯಾರ್ಥಿಗಳಿಗೂ ಲ್ಯಾಪ್ಟಾಪ್
ನೀಡುವ ಯೋಜನೆ ಜಾರಿಯಲ್ಲಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ನಡೆದಿರುವ ಅವ್ಯವಹಾರದಿಂದ ತನಿಖೆಯನ್ನು ಸದನ ಸಮಿತಿಗೆ ಒಪ್ಪಿಸಲಾಗಿದೆ. ಈ ಮಧ್ಯೆ ತಾಂತ್ರಿಕ ಶಿಕ್ಷಣ ಇಲಾಖೆ ಎಸ್ಇಎಸ್ಪಿ ಹಾಗೂ ಟಿಎಸ್ಪಿ ಯೋಜನೆಯಡಿ ಕುಟುಂಬ ಆದಾಯ 5 ಲಕ್ಷದೊಳಗಿರುವ ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಬೋರೇಟರಿ ಟೂಲ್ಕಿಟ್ ನೀಡುವ ಯೋಜನೆ ಸಿದ್ಧಪಡಿಸಿದೆ.
ತಾಂತ್ರಿಕ ಶಿಕ್ಷಣ ಇಲಾಖೆಯ ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜಿನ ಎಲ್ಲಾ ವಿಭಾಗದ ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ 4ಜಿಬಿ ಸ್ಟೋರೇಜ್ ಸಾಮರ್ಥ್ಯದ 6 ಇಂಚ್ ಟಚ್ ಸ್ಕ್ರೀನ್ ಕಿಂಡ್ಲೆà (ಇ-ರೀಡರ್), 32 ಜಿಬಿ ಒಟಿಜಿ ಪೆನ್ಡ್ರೈವ್, ಸಿಮ್ ಹೊಂದಿರುವ 4ಜಿ ವೈ-ಫೈ ಡಾಂಗಲ್, ಡ್ರಾಯಿಂಗ್ ಬೋರ್ಡ್, ಡ್ರಾಯಿಂಗ್ ಇನ್ಸುಮೆಂಟ್ ಇತ್ಯಾದಿ ಸಾಮಗ್ರಿಗಳನ್ನು 6000-6500 ರೂ. ಮೌಲ್ಯದಲ್ಲಿ ನೀಡಲಾಗುತ್ತದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಯಾವ ಮಾದರಿಯ ಟೂಲ್ಕಿಟ್ ನೀಡಬೇಕು ಎಂಬುದನ್ನು ನಿರ್ಧರಿಸಲು ತಜ್ಞರ ಸಮಿತಿ ರಚಿಸಲಾಗಿದೆ. ಇಲಾಖೆಯ ಹಿರಿಯ ಅಧಿಕಾರಿಗಳು, ತಾಂತ್ರಿಕ ತಜ್ಞರು ಈ ಸಮಿತಿಯಲ್ಲಿದ್ದು, ಸಮಿತಿಯ ಶಿಫಾರಸಿನಂತೆ ಟೂಲ್ಕಿಟ್ ವಿತರಣೆ ನಡೆಯಲಿದೆ.
ಪ್ರಾಂಶುಪಾಲರಿಂದ ಮಾಹಿತಿ: ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪರಿಶಿಷ್ಟ ಜಾತಿ
ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಎಷ್ಟಿದ್ದಾರೆ ಎಂಬುದರ ಮಾಹಿತಿ ನೀಡುವಂತೆ ಎಲ್ಲಾ ಕಾಲೇಜಿನ
ಪ್ರಾಂಶುಪಾಲರಿಗೂ ನಿರ್ದೇಶಿಸಲಾಗಿದೆ. ತರಗತಿವಾರು ಅರ್ಹ ವಿದ್ಯಾರ್ಥಿಗಳ ಮಾಹಿತಿಯನ್ನು ನಿಗದಿತ ದಿನಾಂಕದೊಳಗೆ ನೀಡಲು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ