ರವಿ ಬೆಳಗೆರೆ ನ್ಯಾಯಾಂಗ ಬಂಧನಕ್ಕೆ


Team Udayavani, Dec 12, 2017, 6:10 AM IST

11BNP-(18).jpg

ಬೆಂಗಳೂರು: ಸಹೋದ್ಯೋಗಿ ಸುನೀಲ್‌ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಕೊಟ್ಟ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ “ಹಾಯ್‌ ಬೆಂಗಳೂರು’ ವಾರ ಪತ್ರಿಕೆಯ ಸಂಪಾದಕ ರವಿಬೆಳಗೆರೆಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸೋಮವಾರಕ್ಕೆ ಸಿಸಿಬಿ ಪೊಲೀಸ್‌ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಬೆಳಗ್ಗೆ 11.30ರ ಸುಮಾರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ, ಮಧ್ಯಾಹ್ನ 12.30ರ ಸುಮಾರಿಗೆ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ರವಿ ಬೆಳಗೆರೆಯನ್ನ ಹಾಜರು ಪಡಿಸಲಾಗಿತ್ತು.ಈ ಬಗ್ಗೆ  ವಿಚಾರಣೆ ನಡೆಸಿದ ನ್ಯಾ.ಜಗದೀಶ್‌ ರವಿ ಬೆಳಗೆರೆಗೆ ಡಿ.24ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.

ಅಕ್ರಮ ಶಸ್ತ್ರಾಸ್ತ್ರ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ವಿಜಯಪುರ ಜಿಲ್ಲೆಯ ಶಶಿಧರ್‌ ಮುಂಡೆವಾಡಿಯು ರವಿ ಬೆಳಗೆರೆ ಸುಪಾರಿ ಕೊಟ್ಟಿರುವ ಬಗ್ಗೆ ನೀಡಿದ ಹೇಳಿಕೆಯನ್ನಾಧರಿಸಿ ಶುಕ್ರವಾರ(ಡಿ.8)ಸಿಸಿಬಿ ಎಸಿಪಿ ಸುಬ್ರಹ್ಮಣ್ಯ ನೇತೃತ್ವದ ತಂಡ ರವಿ ಬೆಳಗೆರೆಯನ್ನು ಬಂಧಿಸಿ, ನಾಲ್ಕು ದಿನಗಳ ಕಾಲ ವಶಕ್ಕೆ ಪಡೆದಿತ್ತು.ಸೋಮವಾರ ಆರೋಪಿ ಬೆಳಗೆರೆಯನ್ನ ಕೋರ್ಟ್‌ ಗೆ ಹಾಜರುಪಡಿಸಿದಾಗ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಯಿತು.

ಆರಂಭದಲ್ಲಿ  ರವಿ ಬೆಳಗೆರೆ ಪರ ವಕೀಲ ದಿವಾಕರ್‌ ಅರ್ಧಗಂಟೆ ತಡವಾಗಿ ಬಂದಿದ್ದರಿಂದ ವಿಚಾರಣೆಯನ್ನು ಮಧ್ಯಾಹ್ನ 1 ಗಂಟೆಗೆ ಮುಂದೂಡಲಾಯಿತು. ಬಳಿಕ ವಿಚಾರಣೆ ಆರಂಭವಾಗುತ್ತಿದ್ದಂತೆ ಸಿಸಿಬಿ ಪರ ವಕೀಲರು ಆರೋಪಿ ರವಿಬೆಳಗೆರೆ ಪ್ರಭಾವಿ ವ್ಯಕ್ತಿಯಾಗಿರುವುದರಿಂದ ನ್ಯಾಯಾಂಗ ಬಂಧನಕ್ಕೊಪ್ಪಿಸುವಂತೆ ಮನವಿ ಮಾಡಿದರು. ಜತೆಗೆ ಆರೋಪಿ ಪರ ವಕೀಲರು ಜಾಮೀನು ಅರ್ಜಿ ಸಹ ಸಲ್ಲಿಸಿರಲಿಲ್ಲ. ಈ ಸಂಬಂಧ ನ್ಯಾ.ಜಗದೀಶ್‌ ಅವರು ಆರೋಪಿ ಬೆಳಗೆರೆಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಆದೇಶಿಸಿದರು.

ಸೂಕ್ತ ಚಿಕಿತ್ಸೆಗೆ ಆದೇಶ
ಇದೇ ವೇಳೆ ಆರೋಪಿ ರವಿ ಬೆಳಗೆರೆ ಪರ ವಕೀಲ ದಿವಾಕರ್‌, ರವಿ ಬೆಳೆಗೆರೆ ಮಧುಮೇಹ, ರಕ್ತದೊತ್ತಡ ಸೇರಿದಂತೆ ಹಲವು ಕಾಯಿಲೆಗಳಿಂದ ಬಳಲುತ್ತಿದ್ದು, ಸುಮಾರು 100 ಪುಟ ವೈದ್ಯಕೀಯ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ರವಿಬೆಳಗೆರೆ ದಿನಕ್ಕೆ 30ಕ್ಕೂ ಅಧಿಕ ಮಾತ್ರೆಗಳನ್ನು ಸೇವಿಸುತ್ತಾರೆ. ಹೀಗಾಗಿ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯನ್ನು ಸೂಚಿಸಬೇಕು ಎಂದು ಮನವಿ ಮಾಡಿದರು.

ಮನವಿ ತಿರಸ್ಕರಿಸಿದ ನ್ಯಾ.ಜಗದೀಶ್‌, ಇಂತಹ ಪ್ರಕರಣದಲ್ಲಿ ಆ ರೀತಿ ಆದೇಶ ನೀಡಲು ಸಾಧ್ಯವಿಲ್ಲ. ನ್ಯಾಯಾಲಯಕ್ಕೆ ಸಲ್ಲಿಸಿರುವ ಎಲ್ಲ ದಾಖಲೆಗಳನ್ನು ಜೈಲಿನ ಮುಖ್ಯಅಧೀಕ್ಷಕರಿಗೆ ಸಲ್ಲಿಸಿ ಅಲ್ಲಿಯೇ ಸೂಕ್ತ ಚಿಕಿತ್ಸೆ ಕೊಡುತ್ತಾರೆ. ಒಂದು ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅನಿವಾರ್ಯವಾದರೆ, ಜೈಲಿನ ಅಧಿಕಾರಿಗಳೇ ದಾಖಲಿಸುತ್ತಾರೆ ಎಂದು ಆದೇಶಿಸಿದರು.

ಬುಧವಾರ ಜಾಮೀನು ಅರ್ಜಿ ಸಲ್ಲಿಕೆ
ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ರವಿ ಬೆಳಗೆರೆ ಪರ ವಕೀಲ ದಿವಾಕರ್‌, ನಮಗೆ ಸಿಕ್ಕಿರುವ ಮಾಹಿತಿ ಹಾಗೂ ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ಗಮನಿಸಿದರೆ, ಇದೊಂದು ದೊಡ್ಡ ಮಟ್ಟದ ಷಡ್ಯಂತ್ರ ಎಂಬುದು ಮೇಲ್ನೋಟಕ್ಕೆ ಕಾಣುತ್ತಿದೆ. ಹೀಗಾಗಿ ಸಮರ್ಥ ದಾಖಲೆಗಳ ಜತೆ ಜಾಮೀನು ಅರ್ಜಿ ಸಲ್ಲಿಸುತ್ತೇವೆ. ಜತೆಗೆ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ಕೊಲೆ ಯತ್ನ ಪ್ರಕರಣದ ಜಾಮೀನು ಅರ್ಜಿ ಸಲ್ಲಿಸಲು ಬರುವುದಿಲ್ಲ. ಹೀಗಾಗಿ ಬುಧವಾರ ಸೆಷನ್ಸ್‌ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುತ್ತೇವೆ ಎಂದರು.

ರವಿ ಬೆಳಗೆರೆ ಕೈದಿ ನಂಬರ್‌ 12785
ರವಿ ಬೆಳಗೆರೆಗೆ ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.ಕಳೆದ ನಾಲ್ಕು ದಿನಗಳಿಂದ ಸಿಸಿಬಿ ಪೊಲೀಸರ ವಿಚಾರಣೆ ಸಂದರ್ಭದಲ್ಲಿ ತೀವ್ರ ಅಸ್ವಸ್ಥಗೊಂಡಿದ್ದ ರವಿ ಬೆಳಗೆರೆಯನ್ನು ನ್ಯಾಯಾಲಯ ಆದೇಶದನ್ವಯ ಕೇಂದ್ರ ಕಾರಾಗೃಹಕ್ಕೆ ಸೋಮವಾರ ಕಳುಹಿಸಲಾಗಿದೆ. ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಅವರಿಗೆ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಪ್ರತ್ಯೇಕ ವಾರ್ಡ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಮಧ್ಯಾಹ್ನ 3 ಗಂಟೆ ಸುಮಾರಿಗೆ ಜೈಲಿಗೆ ಕರೆದೊಯ್ದ ಸಿಸಿಬಿ ಅಧಿಕಾರಿಗಳು ರವಿ ಬೆಳಗೆರೆ ಅವರನ್ನು ಜೈಲಿನ ಅಧಿಕಾರಿಗಳಿಗೆ ಒಪ್ಪಿಸಿ, ಅವರ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿದರು. ನಂತರ ಜೈಲಿನ ನಿಯಮದಂತೆ 12785ನೇ ವಿಚಾರಾಣಾಧೀನ ಕೈದಿ ಸಂಖ್ಯೆ ಕೊಟ್ಟು ಸಮವಸ್ತ್ರ ನೀಡಲಾಯಿತು. ಅವರ ಹೆಸರನ್ನು ನೋಂದಣಿ ಪುಸ್ತಕದಲ್ಲಿ ಬರೆದುಕೊಳ್ಳಲಾಯಿತು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ ರವಿ ಬೆಳಗೆರೆಯವರನ್ನು ಜೈಲಿನೊಳಗೆ ಕರೆದೊಯ್ಯುತ್ತಿದ್ದಂತೆ ಅವರನ್ನು ಕಾಣಲು ಕೆಲ ಕೈದಿಗಳು ಮುಗಿಬಿದ್ದರು. ನಮ್ಮ ಬಗ್ಗೆ ರವಿಬೆಳಗೆರೆ ಪತ್ರಿಕೆಯಲ್ಲಿ ಬರೆದಿದ್ದಾರೆ. ಅವರಿಗೆ ಅನಾರೋಗ್ಯವಾಗಿದೆ ನಾವು ಅವರ ಸೇವೆ ಮಾಡುತ್ತೇವೆ ಎಂದು ಜೈಲಿನ ಅಧಿಕಾರಿಗಳ ಬಳಿ ಕೆಲವರು ಕೇಳಿಕೊಂಡರು. ಆದರೆ, ಇದಕ್ಕೆ ಅವಕಾಶ ನಿರಾಕರಿಸಲಾಯಿತು ಎಂದು ತಿಳಿದು ಬಂದಿದೆ.

ಸಿಎಂಗೆ ಮನವಿ ಸಲ್ಲಿಸಿದ ಸುನಿಲ್‌
ಈ ಮಧ್ಯೆ ತಮ್ಮ ಕೊಲೆಗೆ ಸುಪಾರಿ ನೀಡಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಪತ್ರಕರ್ತ ಸುನೀಲ್‌ ಹೆಗ್ಗರವಳ್ಳಿ ತಮಗೆ ರಕ್ಷಣೆ ನೀಡುವಂತೆ ವಿಧಾನಸೌಧಕ್ಕೆ ಆಗಮಿಸಿ ಸಿಎಂ ಸಿದ್ದರಾಮಯ್ಯಅವರನ್ನು ಭೇಟಿ ಮಾಡಿದರು. ರವಿ ಬೆಳಗೆರೆ ಪ್ರಭಾವಿ ವ್ಯಕ್ತಿಯಾಗಿದ್ದು, ಭೂಗತ ಲೋಕದ ನಂಟಿದೆ. ಹೀಗಾಗಿ ಅವರು ಜೈಲಲ್ಲಿದ್ದುಕೊಂಡೇ ಅಥವ ಹೊರಗೆ ಬಂದಲ್ಲಿ ನನ್ನ ಜೀವಕ್ಕೆ ಅಪಾಯವನ್ನುಂಟು ಮಾಡುವ ಸಾಧ್ಯತೆಯಿದೆ. ನನಗೆ ವಯಸ್ಸಾದ ತಂದೆ -ತಾಯಿ, ಮಡದಿ ಮಕ್ಕಳಿದ್ದಾರೆ. ಸಾಕಷ್ಟು ಜನ ಗನ್‌ ಮ್ಯಾನ್‌ ಇಟ್ಟುಕೊಳ್ಳುವ ಸಾಮರ್ಥ್ಯವೂ ಇಲ್ಲ. ಹೀಗಾಗಿ ಪೊಲೀಸ್‌ ರಕ್ಷಣೆ ನೀಡುವಂತೆ ಸುನಿಲ್‌ ಮನವಿ ಸಲ್ಲಿಸಿದರು.

ವಿಜಯಪುರದಲ್ಲಿ ಪತ್ರಕರ್ತ ಮಳಗೊಂಡ ವಿಚಾರಣೆ 
ವಿಜಯಪುರ:
ಪತ್ರಕರ್ತ ಸುನೀಲ್‌ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪದಡಿ ಜೈಲು ಸೇರಿರುವ ಪತ್ರಕರ್ತ ರವಿ ಬೆಳೆಗೆರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಗೆ ಆಗಮಿಸಿರುವ ಬೆಂಗಳೂರು ನಗರ ಅಪರಾಧ ವಿಭಾಗದ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಮೂರು ದಿನಗಳ ಹಿಂದೆಯೇ ಜಿಲ್ಲೆಗೆ ಆಗಮಿಸಿರುವ ಸಿಸಿಬಿ ಪೊಲೀಸರು, ಸುನೀಲ್‌ ಹತ್ಯೆಗೆ ಸುಪಾರಿ ಪಡೆದಿರುವ ಆರೋಪ ಎದುರಿಸುತ್ತಿರುವ ಶಶಿಧರ ಮುಂಡೇವಾಡನ ಸಂಪರ್ಕ ಜಾಲ ಬೇಧಿಸಲು ಹಲವರ ವಿಚಾರಣೆ ನಡೆಸಿದ್ದಾರೆ.

ಇದರ ಮಧ್ಯೆ ಸೋಮವಾರ ನಗರದ ಹೋಟೆಲ್‌ ಒಂದಕ್ಕೆ ಸ್ಥಳೀಯ ಪತ್ರಿಕೆಯ ಸಂಪಾದಕ ಟಿ.ಕೆ. ಮಳಗೊಂಡ ಅವರನ್ನು ಕರೆಸಿಕೊಂಡು ಸುಮಾರು 5 ಗಂಟೆ ವಿಚಾರಣೆ ನಡೆಸಿದ್ದಾರೆ. ಸುನೀಲ ಹೆಗ್ಗರವಳ್ಳಿ ಹತ್ಯೆಗೆ ರವಿ ಬೆಳಗೆರೆ ಅವರಿಂದ ಸುಪಾರಿ ಪಡೆದಿರುವ ಆರೋಪ ಎದುರಿಸುತ್ತಿರುವ ಶಶಿಧರ ಜೊತೆ ಪತ್ರಕರ್ತ ಟಿ.ವಿ. ಮಳಗೊಂಡ ಸಂಪರ್ಕ ಹೊಂದಿದ್ದರೆನ್ನಲಾಗಿದೆ. ಅಲ್ಲದೇ ಅಪರಾಧ ಕೃತ್ಯಗಳಲ್ಲಿ ಶಶಿಧರ ಜತೆ ಕೈ ಜೋಡಿಸಿರುವ ಆರೋಪ ಎದುರಿಸುತ್ತಿರುವ ಆತನ ಅಳಿಯ ವಿಜು ಬಡಿಗೇರಗಾಗಿ ಶೋಧ ನಡೆಸಿದ್ದಾರೆ.

ರವಿ ಬೆಳಗೆರೆ ಅವರು ವಿಜಯಪುರ ಜಿಲ್ಲೆಯ ಸಿಂದಗಿ, ಇಂಡಿ ತಾಲೂಕಿನಲ್ಲಿ ನಡೆದ ಹತ್ಯೆ ಪ್ರಕರಣಗಳಿಗೆ “ಭೀಮಾ ತೀರದ ಹಂತಕರು’ ಎಂದು ವ್ಯಾಖ್ಯಾನಿಸಿದ್ದರು. ಈ ವೇಳೆ ಭೀಮಾ ತೀರದ ಅಪರಾಧ ಕೃತ್ಯಗಳ ವರದಿಗಾಗಿ ರವಿ ಬೆಳಗೆರೆ ಜಿಲ್ಲೆಗೆ ಬಂದಾಗ ಟಿ.ಕೆ.ಮಳಗೊಂಡ ಅವರನ್ನೇ ಸಂಪರ್ಕಿಸುತ್ತಿದ್ದರು. ಇತ್ತೀಚೆಗೆ ಹಲವು ದೃಶ್ಯ ಮಾಧ್ಯಮಗಳಿಗೂ ಹೇಳಿಕೆ ನೀಡಿರುವ ಪತ್ರಕರ್ತ ಮಳಗೊಂಡ, ಭೀಮಾ ತೀರದ ರಕ್ತ ಚರಿತ್ರೆಯ ಕುರಿತು ವಿವರಗಳನ್ನು ಹಂಚಿಕೊಂಡಿದ್ದರು. ಹೀಗಾಗಿ ರವಿ ಬೆಳಗೆರೆ, ಭೀಮಾ ತೀರದಲ್ಲಿ ಶಾರ್ಪ್‌ ಶೂಟರ್‌ ಎನಿಸಿಕೊಂಡಿರುವ ಶಶಿಧರ ನಂಬರ್‌ ತಮ್ಮ ಬಳಿ ಇಲ್ಲದ ಕಾರಣ ತಮ್ಮೊಂದಿಗೆ ಸಂಪರ್ಕದಲ್ಲಿರುವ ಮಳಗೊಂಡ ಅವರನ್ನು ಸಂಪರ್ಕಿಸಿ ಶಶಿಧರ ಮೊಬೈಲ್‌ ನಂಬರ್‌ ಕೊಡುವಂತೆ ಕೇಳಿದ್ದರು ಎನ್ನಲಾಗಿದೆ. ರವಿ ಬೆಳೆಗೆರೆಗೆ ನಿಮ್ಮ ನಂಬರ್‌ ಕೊಡಬಹುದೇ ಎಂದು ಮುಂಡೇವಾಡನನ್ನು ಸಂಪರ್ಕಿಸಿ ಆತನ ಸಮ್ಮತಿಯ ಬಳಿಕವೇ ಬೆಳಗೆರೆಗೆ ಮಳಗೊಂಡ ಅವರು ಮೊಬೈಲ್‌ ನಂಬರ್‌ ನೀಡಿದ್ದರು ಎನ್ನಲಾಗಿದೆ.

ಶಶಿಧರ ಮುಂಡೇವಾಡನ ಅಳಿಯ ವಿಜು ಬಡಿಗೇರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿಸಿಬಿ ಪೊಲೀಸರು ಜಿಲ್ಲೆಯ ಇಂಡಿ, ಸಿಂದಗಿ, ಚಡಚಣ ತಾಲೂಕಿನ ಹಲವು ಪ್ರದೇಶಗಳಲ್ಲಿ ಶೋಧ ನಡೆಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.