ಹೊನ್ನಾವರ ಮತ್ತೆ ಉದ್ವಿಗ್ನ


Team Udayavani, Dec 15, 2017, 6:00 AM IST

Honnavar-1.jpg

ಹೊನ್ನಾವರ: ವಾರದಿಂದ ಹೊತ್ತಿ ಉರಿದಿದ್ದ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಗುರುವಾರ ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮಾಗೋಡ ಸಮೀಪದ ಕುಚ್ಚಡಿ ಬಳಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ, ಕಟ್ಟಡವೊಂದಕ್ಕೆ ಬೆಂಕಿ ಹಚ್ಚಿದ್ದಾರೆ.

ಹೊನ್ನಾವರ ನಗರದಿಂದ 35 ಕಿಮೀ ದೂರ ಶರಾವತಿ ಎಡದಂಡೆಯಲ್ಲಿರುವ ಮಾಗೋಡ ಕೊಡ್ಲಗದ್ದೆಯಿಂದ ಮುಂಜಾನೆ 7 ಗಂಟೆಗೆ ಸುಮಾರಿಗೆ 8ನೇ ತರಗತಿಯ ವಿದ್ಯಾರ್ಥಿನಿ ಕಾವ್ಯಾ ಶೇಖರ ನಾಯ್ಕ ಶಾಲೆಗೆ ಹೊರಟಿದ್ದಳು. 2 ಕಿಮೀ ದೂರ ಸಾಗುವಷ್ಟರಲ್ಲಿ ರಸ್ತೆಗೆ ಹೊಂದಿದ ಕಾಡಿನಲ್ಲಿ ಗಿಡಗಳು ಅಲ್ಲಾಡಿದಂತಾಗಿದೆ. ಸೊಪ್ಪು ಕತ್ತರಿಸುತ್ತಿರಬೇಕು ಎಂದುಕೊಳ್ಳುತ್ತಿದ್ದಂತೆ ಮರೆಯಿಂದ ಇಬ್ಬರು ಹಿಂದಿನಿಂದ ಬಂದು ಮುಖಕ್ಕೆ ಬಟ್ಟೆ ಹಾಕಿ ಕೈ ಹಿಡಿದುಕೊಂಡಿದ್ದಾರೆ. 

ತಪ್ಪಿಸಿಕೊಳ್ಳಲು ಕೊಸರಾಡಿದಾಗ ಕೈಗೆ ಹರಿತವಾದ ಆಯುಧದಿಂದ ಗಾಯ ಮಾಡಿದ್ದಾರೆ. ಹಿಂದಿನಿಂದ ಬೈಕ್‌ ಶಬ್ದ ಕೇಳಿದಾಗ ಕೈ ಬಿಟ್ಟು ಓಡಿ ಹೋಗಿದ್ದಾರೆ. ನಂತರ ಓಡುತ್ತಲೇ ಸಂಬಂಧಿಕರ ಮನೆಗೆ ಬಂದು ವಿಷಯ ತಿಳಿಸಿದಾಗ ಪೊಲೀಸರಿಗೆ ಸಂದೇಶ ನೀಡಿ ಬಾಲಕಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ಹರಡುತ್ತಿದ್ದಂತೆ ಮತ್ತೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕಲ್ಲು ತೂರಾಟ, ನಡೆಸಿ ಪ್ರತಿಭಟನೆ ನಡೆಸಲಾಗಿದೆ. ಮಾಗೋಡ ಅರಣ್ಯ ಪ್ರದೇಶಗಳಲ್ಲಿನ ಹಸಿ ಮರಗಳನ್ನು ಧರೆಗುರುಳಿಸಲಾಗಿದೆ. ಸ್ವಯಂ ಘೋಷಿತ ಬಂದ್‌ ಮುಂದುವರೆದಿದೆ. ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

62 ಜನರಿಗೆ ಮಧ್ಯಂತರ ಜಾಮೀನು
ಶಿರಸಿ:
ಪರೇಶ್‌ ಮೇಸ್ತ ಕೊಲೆ ಪ್ರಕರಣದ ಬಳಿಕ ಶಿರಸಿಯಲ್ಲಿ ನಡೆದ ಬಂದ್‌ ಹಾಗೂ ನಂತರದ ಘಟನೆಗಳಿಗೆ ಸಂಬಂಧಿ ಸಿದಂತೆ ಬಂಧಿ ಸಿ ಧಾರವಾಡ ಕಾರಾಗೃಹಕ್ಕೆ ಕಳಿಸಲಾಗಿದ್ದ 62 ಜನರಿಗೆ ಮಧ್ಯಂತರ ಜಾಮೀನು ಲಭಿಸಿದೆ. ಬಂಧಿ ತರಾಗಿದ್ದ 62 ಜನರಿಗೆ ಶಿರಸಿ 1ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶ ಶಾಂತವೀರ ಶಿವಪ್ಪ ಗುರುವಾರ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ನ್ಯಾಯವಾದಿ ಸದಾನಂದ ಭಟ್ಟ, 34 ಹಿರಿಯ ವಕೀಲರ ಸಹಕಾರದೊಂದಿಗೆ ಒಟ್ಟು 150ಕ್ಕೂ ಹೆಚ್ಚು ವಕೀಲರ ಜೊತೆಗೂಡಿ ಜಾಮೀನು ಮನವಿ ಸಲ್ಲಿಸಿ, ಮಧ್ಯಂತರ ಜಾಮೀನಿಗೆ ಮನವಿ ಮಾಡಿದ್ದೆವು. ಹಿರಿಯ ವಕೀಲರ ವಾದದೊಂದಿಗೆ ನಡೆದ ವಿಚಾರಣೆಯಲ್ಲಿ ಮಧ್ಯಂತರ ಜಾಮೀನು ದೊರೆಕಿದೆ ಎಂದರು.

62 ಜನರನ್ನು ಧಾರವಾಡ ಜೈಲಿಗೆ ಕಳುಹಿಸಿದ್ದು, 4 ಜನರನ್ನು ಬಾಲಾಪರಾಧ ಪ್ರಕರಣದಲ್ಲಿ ಕಾರವಾರಕ್ಕೆ ಕಳುಹಿಸಿದ್ದರು. 62 ಜನರಿಗೆ 307 ಕಲಂ ಅಡಿ ಪ್ರಕರಣ ದಾಖಲಿಸಲಾಗಿತ್ತು. ಇವರಿಗೆ ಮಧ್ಯಂತರ ಜಾಮೀನು ದೊರೆತಿದೆ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.