ಪ್ರಭಾಕರ್ ಭಟ್ಗೆ ತಾಕತ್ತಿದ್ದರೆ ನನ್ನ ವಿರುದ್ಧ ಸ್ಪರ್ಧಿಸಲಿ !
Team Udayavani, Dec 15, 2017, 2:02 PM IST
ವಿರಾಜಪೇಟೆ: ಸಚಿವ ರಮಾನಾಥ ರೈ ಅವರು ಆರ್ಎಸ್ಎಸ್ ಮುಖಂಡ ಪ್ರಭಾಕರ್ ಭಟ್ ವಿರುದ್ಧ ಕಿಡಿ ಕಾರಿದ್ದು, ‘ತಾಕತ್ತಿದ್ದರೆ ನನ್ನ ವಿರುದ್ಧ ಸ್ಪರ್ಧಿಸಲಿ, ಠೇವಣಿ ಉಳಿಸಿಕೊಳ್ಳಲಿ’ ಎಂದು ಸವಾಲು ಹಾಕಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಲ್ಲಡ್ಕ ಶಾಲೆಗೆ ಕೊಲ್ಲೂರು ದೇವಾಲಯದ ವತಿಯಿಂದ ನೀಡಲಾಗುತ್ತಿದ್ದ ಅನುದಾನ ಸ್ಥಗಿತ ಗೊಳಿಸಲು ಮುಖ್ಯಮಂತ್ರಿಗಳಿಗೆ ಪತ್ರ ಬರೆದ ವಿಚಾರ ಪ್ರಶ್ನಿಸಿದಾಗ ಕೆಂಡಾಮಂಡಲವಾಗಿದ್ದಾರೆ.
‘ಪ್ರಭಾಕರ ಭಟ್ ಅವರು ದಕ್ಷಿಣ ಕನ್ನಡದಲ್ಲಿ ನನ್ನ ವಿರುದ್ಧ ನಿರಂತರ ಹೋರಾಟ ಮಾಡುತ್ತಿದ್ದಾರೆ, ಆದರೆ ಅಲ್ಲಿನ ಜನ ನನ್ನೊಂದಿಗೆ ಇದ್ದಾರೆ’ಎಂದರು.
‘ಸರ್ಕಾರದ ನಿಯಮದಂತೆ ದೇವಸ್ಥಾನದ ಹಣ ದೇವಸ್ಥಾನಕ್ಕೇ ಖರ್ಚಾಗಬೇಕು. ಭಟ್ ದೇವಸ್ಥಾನದ ಹಣ ಪಡಯಲು ನನ್ನ ವಿರುದ್ಧ ಆರೋಪ ಮಾಡಿದ್ದಾರೆ. ತಾಕತ್ತಿದ್ದರೆ ಅವರು ನನ್ನ ವಿರುದ್ಧ ಸ್ಪರ್ಧಿಸಲಿ, ಅವರಿಗೆ ಠೇವಣಿಯೂ ಸಿಗುವುದಿಲ್ಲ’ ಎಂದರು.
2 ದಿನಗಳ ಹಿಂದೆ ಬಿಜೆಪಿ ಮುಖಂಡ ಹರಿ ಕೃಷ್ಣ ಬಂಟ್ವಾಳ್ ಅವರು ರಮನಾಥ ರೈ ಅವರು ಮುಖ್ಯಮಂತ್ರಿಗಳಿಗೆ ಅನುದಾನ ಸ್ಥಗಿತಗೊಳಿಸಲು ಕೋರಿ ಬರೆದಿದ್ದರು ಎನ್ನಲಾದ ಪತ್ರದ ಪ್ರತಿಯನ್ನು ಬಹಿರಂಗಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ