ಅನಂತ್ಕುಮಾರ್ ಕೇಂದ್ರ ಸಚಿವರಾಗಲು ಅನ್ಫಿಟ್
Team Udayavani, Dec 16, 2017, 9:05 AM IST
ಬೆಂಗಳೂರು: ಫೇಸ್ಬುಕ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಪರಾಕಿ ಸಾಕಾ, ಇನ್ನೂ ಬೇಕಾ ಎಂದು ಹೇಳಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ಕಿಡಿಕಾರಿರುವ ಗೃಹ ಸಚಿವ ರಾಮಲಿಂಗಾರೆಡ್ಡಿ, ಅನಂತಕುಮಾರ್ ಹೆಗಡೆ ಅವರು
ಸಚಿವರಾಗಲು ಅನ್ಫಿಟ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಕಾಸಸೌಧದಲ್ಲಿ ಶುಕ್ರವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಗಲಭೆ ಆಧರಿಸಿ ತಾವು ಕೇಂದ್ರ ಸಚಿವ ಎಂಬುದನ್ನೇ ಮರೆತು ಅನಂತಕುಮಾರ್ ಹೆಗಡೆ ಹೇಳಿಕೆ ನೀಡಿದ್ದಾರೆ. ಮುಂದಿದೆ ಮಾರಿ ಹಬ್ಬ ಎಂದರೆ ಏನು? ಅವರು ಕೇಂದ್ರದಲ್ಲಿ ಮಂತ್ರಿ ಆಗಿದ್ದು ಗಲಭೆ ಮಾಡಿಸಲೆಂದೇ? ಗಲಾಟೆ ಮಾಡಿಸಿದರೆ ಪೊಲೀಸರು ಸುಮ್ಮನಿರುತ್ತಾರೆಯೇ ಎಂದು ಪ್ರಶ್ನಿಸಿದರು.
ಅನಂತಕುಮಾರ್ ಹೆಗಡೆ ಮಂತ್ರಿಯಾಗಲೂ ಅನ್ ಫಿಟ್. ಅಂಥವರನ್ನು ಕೇಂದ್ರದಲ್ಲಿ ಮಂತ್ರಿ ಮಾಡಿದ್ದಾರೆ. ಗಲಭೆಗೆ ಪ್ರಚೋದನೆ ನೀಡುತ್ತಿರುವ ಅವರಿಗೆ ಈಗ ನೀಡಿರುವ ಖಾತೆಯನ್ನು ತೆಗೆದು ವಿಷ ಗಾಳಿ ಬಿತ್ತುವ ಸಚಿವ ಎಂದೋ, ಸಾಮರಸ್ಯ ಕೆಡಿಸುವ ಮಂತ್ರಿ ಎಂದೋ ಹುದ್ದೆ ಕೊಡಲಿ ಎಂದು ವ್ಯಂಗ್ಯವಾಡಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮತ್ತು ಶಿರಸಿಯಲ್ಲಿ ಗಲಭೆ ನಡೆದ ಬಳಿಕ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರು ಫೇಸ್ಬುಕ್ನಲ್ಲಿ, “ಸಾಕ ಬೇಕಾ ತಪರಾಕಿ ಸಿದ್ಧರಾಮಯ್ಯನವರೇ!! ನಿಂಬಾಳ್ಕರ್, ರಾಮಲಿಂಗಾರೆಡ್ಡಿ ಹಾಗೂ ಕೆಂಪಯ್ಯನಂಥ ಜನರಿದ್ದರೆ ಮುಂದಿದೆ ನೋಡಿ ಇನ್ನು ಶಿರಸಿಯ ದೊಡ್ಡ ಮಾರಿಕಾಂಬ ಹಬ್ಬ!’ ಎಂಬ ಹೇಳಿಕೆ ನೀಡಿದ್ದಕ್ಕೆ ಅವರು ಈ ಪ್ರತಿಕ್ರಿಯೆ ನೀಡಿದರು.
ಬಿಜೆಪಿಯವರು ರಣಹದ್ದುಗಳು: ರಣಹದ್ದುಗಳು ಯಾವುದಾದರೂ ಹೆಣ ಬಿದ್ದರೆ ಕಾಯುತ್ತಿರುತ್ತವೆ. ಅದೇ ರೀತಿ ಬಿಜೆಪಿಯವರು ರಣಹದ್ದುಗಳಿದ್ದಂತೆ. ಗಲಭೆ ಸೃಷ್ಟಿಸಲು ಕಾಯುತ್ತಿದ್ದಾರೆ. ಹಾಗೆಂದು ಎಲ್ಲಾ ಬಿಜೆಪಿಯವರು ಹೀಗೆ ಎಂದು ಹೇಳುವುದಿಲ್ಲ. ಗಲಾಟೆ
ಮಾಡಿಸುವವರು ಕೆಲವರು ಮಾತ್ರ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ