ಕಾಡಾನೆ ದಾಳಿಗೆ ಮತ್ತೂಬ್ಬ ರೈತ ಬಲಿ
Team Udayavani, Dec 18, 2017, 7:55 AM IST
ಚಿತ್ರದುರ್ಗ/ದಾವಣಗೆರೆ: ದಾಂಧಲೆ ನಡೆಸಿ 15ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ್ದ ಆನೆ ಶುಕ್ರವಾರ ಸಂಜೆ ಮತ್ತೂಬ್ಬ
ರೈತನನ್ನು ಬಲಿ ಪಡೆದಿದೆ. ಹೊಳಲ್ಕೆರೆ ತಾಲೂಕಿನ ತಾಳಿಕಟ್ಟೆಯ ಗಾಳೆಪ್ಪ (45) ದಾಳಿಗೆ ಬಲಿಯಾದವ. ಶುಕ್ರವಾರ ಕೂಲಿ ಕೆಲಸಕ್ಕೆ ಹೋಗಿದ್ದ ಇವರು ರಾತ್ರಿ ಮನೆಗೆ ವಾಪಸ್ ಬಂದಿರಲಿಲ್ಲ. ಗಾಬರಿಗೊಂಡ ಮನೆಯವರು ಗಾಳೆಪ್ಪ ಕೆಲಸಕ್ಕೆ ತೆರಳಿದ್ದ ಮೆಕ್ಕೆಜೋಳದ ಜಮೀನಿನ ಸುತ್ತಮುತ್ತ ಶನಿವಾರ ಬೆಳಗ್ಗೆ ಹುಡುಕಾಟ ನಡೆಸಿದಾಗ ಶವ ಪತ್ತೆಯಾಗಿದೆ. ಕಾಡಾನೆ ಕಾಲಿನಿಂದ ತುಳಿದು ಕೊಂದಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗ್ರಾಮಸ್ಥರು ದೌಡಾಯಿಸಿದರು.
ಶುಕ್ರವಾರ ದಾವಣಗೆರೆ ಜಿಲ್ಲೆ ಚನ್ನಗಿರಿಯ ಬೆಟ್ಟಕಡೂರಿನ ಮೂಲಕ ಹೊಳಲ್ಕೆರೆ ತಾಲೂಕಿನ ತಾಳಿಕಟ್ಟೆ ಗ್ರಾಮದ ಕಡೆ ಬಂದ
ಆನೆ ಹೊಲದಲ್ಲಿ ಓಡಾಡಿ ಬೆಳೆ ನಾಶಪಡಿಸಿದ್ದಲ್ಲದೆ, ಅದರ ಉಪಟಳದಿಂದ ಏಳು ಮಂದಿ ಗಂಭೀರ ಗಾಯಗೊಂಡು ಆಸ್ಪತ್ರೆ
ಸೇರಿದ್ದರು. ಮತ್ತೆ ಶುಕ್ರವಾರ ಸಂಜೆ ಮೆಕ್ಕೆಜೋಳದ ಹೊಲದಲ್ಲಿ ಪ್ರತ್ಯಕ್ಷವಾಗಿ ರೈತನನ್ನು ಕೊಂದು ಶವವನ್ನು ಪೊದೆಯಲ್ಲಿ ಎಸೆದು
ಹೋಗಿದೆ. ಹೀಗಾಗಿ ಶನಿವಾರ ಬೆಳಗ್ಗೆ ರೈತನ ಶವ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಆಪರೇಷನ್ ಉಬ್ರಾಣಿ: ಈ ಕುರಿತು ಪ್ರತಿಕ್ರಿಯಿಸಿರುವ ಭದ್ರಾವತಿ ಡಿಎಫ್ಓ ಟಿ.ಬಾಲಚಂದ್ರ, ಆನೆಗಳನ್ನು ಸೆರೆಹಿಡಿದು,ಅರಣ್ಯ ಪ್ರದೇಶಕ್ಕೆ ಸಾಗಿಸಲು ಭಾನುವಾರ ಆಪರೇಷನ್ ಉಬ್ರಾಣಿ ಹೆಸರಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗುವುದು. 130 ಜನ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ತಂಡ, 25 ಮಾವುತರು ಸೇರಿ ಕಾರ್ಯಾಚರಣೆ ನಡೆಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್