ಹೆಲಿಕಾಪ್ಟರ್ಗಾಗಿ ಒಂದು ಗಂಟೆ ಕಾದ ಸಿಎಂ
Team Udayavani, Dec 18, 2017, 6:05 AM IST
ಕಲಬುರಗಿ: ಹೆಲಿಕಾಪ್ಟರ್ಗೆ ಸಕಾಲಕ್ಕೆ ಇಂಧನ ಬಾರದಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಒಂದು ಗಂಟೆಗೂ ಹೆಚ್ಚು ಕಾಲ ಕಾಯಬೇಕಾಯಿತು.ಬೆಳಗ್ಗೆ 11ಕ್ಕೆ ಮಹಿಳಾ ಕೈಗಾರಿಕಾ ಪಾರ್ಕ್ ಹಾಗೂ ಎಚ್ಕೆಇ ಸಂಸ್ಥೆ ಸಭಾಂಗಣ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಬಳಿಕ ಅವರು ಹೆಲಿಕಾಪ್ಟರ್ ಮೂಲಕ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣಕ್ಕೆ ತೆರಳಬೇಕಿತ್ತು. ಆದರೆ, ಹೆಲಿಕಾಪ್ಟರ್ಗೆ ಇಂಧನ ಇರದಿದ್ದರಿಂದ ನಗರದ ಐವಾನ್ ಶಾಹಿ ಅತಿಥಿಗೃಹದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಸುಮ್ಮನೆ ಕೂರಬೇಕಾಯಿತು.
ಹೆಲಿಕಾಪ್ಟರ್ಗೆ ತುಂಬಿಸುವ ಇಂಧನವನ್ನು ತೋರಣಗಲ್ಲಿನಿಂದ ವಾಹನದಲ್ಲಿ ಶನಿವಾರ ರಾತ್ರಿಯೇ ಕಳುಹಿಸಿಕೊಡಲಾಗಿತ್ತು. ಆದರೆ, ನಗರಕ್ಕೆ ಬರುವುದು ತಡವಾಯಿತು. ಕೊನೆಗೆ ಬೀದರ ಏರ್ಬೇಸ್ನಿಂದ ಇಂಧನ ತರಿಸಲಾಯಿತು. ಮಧ್ಯಾಹ್ನ 12:28ಕ್ಕೆ ಸಿಎಂ ಹುಣಸಗಿಗೆ ತೆರಳಿದರು.
ಇದರಿಂದ ಬೇಸರಗೊಂಡ ಸಿಎಂ, “ನೀವೆಲ್ಲಾ ಬೆಳಗ್ಗೆಯಿಂದ ಏನು ಮಾಡಿದ್ದೀರಿ? ಮೊದಲೇ ವಿಚಾರಣೆ ಮಾಡಬೇಕಿತ್ತು. ಹೀಗೆ ಲೋಪ ಮಾಡಿದರೆ ಹೇಗೆ’ ಎಂದು ಪ್ರಾದೇಶಿಕ ಆಯುಕ್ತ, ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?