ಹೆಲಿಕಾಪ್ಟರ್ಗಾಗಿ ಒಂದು ಗಂಟೆ ಕಾದ ಸಿಎಂ
Team Udayavani, Dec 18, 2017, 6:05 AM IST
ಕಲಬುರಗಿ: ಹೆಲಿಕಾಪ್ಟರ್ಗೆ ಸಕಾಲಕ್ಕೆ ಇಂಧನ ಬಾರದಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಒಂದು ಗಂಟೆಗೂ ಹೆಚ್ಚು ಕಾಲ ಕಾಯಬೇಕಾಯಿತು.ಬೆಳಗ್ಗೆ 11ಕ್ಕೆ ಮಹಿಳಾ ಕೈಗಾರಿಕಾ ಪಾರ್ಕ್ ಹಾಗೂ ಎಚ್ಕೆಇ ಸಂಸ್ಥೆ ಸಭಾಂಗಣ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಬಳಿಕ ಅವರು ಹೆಲಿಕಾಪ್ಟರ್ ಮೂಲಕ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣಕ್ಕೆ ತೆರಳಬೇಕಿತ್ತು. ಆದರೆ, ಹೆಲಿಕಾಪ್ಟರ್ಗೆ ಇಂಧನ ಇರದಿದ್ದರಿಂದ ನಗರದ ಐವಾನ್ ಶಾಹಿ ಅತಿಥಿಗೃಹದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಸುಮ್ಮನೆ ಕೂರಬೇಕಾಯಿತು.
ಹೆಲಿಕಾಪ್ಟರ್ಗೆ ತುಂಬಿಸುವ ಇಂಧನವನ್ನು ತೋರಣಗಲ್ಲಿನಿಂದ ವಾಹನದಲ್ಲಿ ಶನಿವಾರ ರಾತ್ರಿಯೇ ಕಳುಹಿಸಿಕೊಡಲಾಗಿತ್ತು. ಆದರೆ, ನಗರಕ್ಕೆ ಬರುವುದು ತಡವಾಯಿತು. ಕೊನೆಗೆ ಬೀದರ ಏರ್ಬೇಸ್ನಿಂದ ಇಂಧನ ತರಿಸಲಾಯಿತು. ಮಧ್ಯಾಹ್ನ 12:28ಕ್ಕೆ ಸಿಎಂ ಹುಣಸಗಿಗೆ ತೆರಳಿದರು.
ಇದರಿಂದ ಬೇಸರಗೊಂಡ ಸಿಎಂ, “ನೀವೆಲ್ಲಾ ಬೆಳಗ್ಗೆಯಿಂದ ಏನು ಮಾಡಿದ್ದೀರಿ? ಮೊದಲೇ ವಿಚಾರಣೆ ಮಾಡಬೇಕಿತ್ತು. ಹೀಗೆ ಲೋಪ ಮಾಡಿದರೆ ಹೇಗೆ’ ಎಂದು ಪ್ರಾದೇಶಿಕ ಆಯುಕ್ತ, ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ