ಮೈಸೂರಿಲ್ಲೂ ಲವ್ ಜಿಹಾದ್ ?: ಸುಂದರ ಯುವತಿ ನಾಪತ್ತೆ
Team Udayavani, Dec 19, 2017, 11:38 AM IST
ಶಿವಮೊಗ್ಗ: ಜಿಲ್ಲೆಯ ಜಯನಗರ ಠಾಣೆಯಲ್ಲಿ ಲವ್ ಜಿಹಾದ್ ಪ್ರಕರಣವೊಂದು ದಾಖಲಾಗಿದ್ದು, ಮುಸ್ಲಿಂ ಯುವಕನೊಬ್ಬನನ್ನು ವಿವಾಹವಾಗಿ ನಾಪತ್ತೆಯಾಗಿರುವ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ.
ಅನುಷಾ ಹೆಗಡೆ ಎಂಬ ಬಿಇ ವ್ಯಾಸಂಗ ಮಾಡುತ್ತಿದ್ದಾಕೆ ಜಾವೀದ್ ಖಾನ್ ಎಂಬಾತನೊಂದಿಗೆ ಪೋಷಕರ ವಿರೋಧದ ನಡುವೆಯೂ ವಿವಾಹವಾಗಿದ್ದಳು.
ಶಿವಮೊಗ್ಗ ಮೂಲದ ಸಂಗೀತ ವಿದ್ವಾನ್ ಓರ್ವರ ಪುತ್ರಿ ಅನುಷಾ ಮೈಸೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವೇಳೆ ಜಾವೀದ್ನ ಬಲೆಗೆ ಬಿದ್ದಿದ್ದಳು .
ಅನುಷಾ ಪೋಷಕರ ವಿರೋಧದ ನಡೆವೆಯೂ ಜಾವೀದ್ನನ್ನು ವಿವಾಹವಾಗಿದ್ದು, ಆ ಬಳಿಕ ಕೆಲ ದಿನಗಳ ಬಳಿಕ ಮನೆಗೆ ವಾಪಾಸಾಗಿ ತಾನು ಅನುಭವಿಸುತ್ತಿದ್ದ ಚಿತ್ರ ಹಿಂಸೆ ಬಗ್ಗೆ ಹೇಳಿಕೊಂಡಿದ್ದಾಳೆ. ನನ್ನನ್ನು ಜಾವೀದ್ ಗೃಹ ಬಂಧನದಲ್ಲಿರಿಸಿ ಹಿಂಸಿಸುತ್ತಿದ್ದಾನೆ. ಆತನ 2 ಹೆಂಡತಿಯ ಮಗುವಿನ ಕೆಲಸವನ್ನೂ ಮಾಡಿಸಿಕೊಳ್ಳುತ್ತಿದ್ದಾನೆ ಎಂದು ನೋವು ತೋಡಿಕೊಂಡಿರುವುದಾಗಿ ಪೋಷಕರು ಪೊಲೀಸರ ಬಳಿ ಹೇಳಿದ್ದಾರೆ.
ಇದೀಗ ಆಕೆ ಮತ್ತೆ ಜಾವೀದ್ನೊಂದಿಗೆ ತೆರಳಿದ್ದು ಆತ ಆಕೆಯ ಬ್ರೈನ್ ವಾಷ್ ಮಾಡಿದ್ದಾನೆ. ಈಗಾಗಲೇ ಆತನಿಗೆ 2 ಮದುವೆಯಾಗಿದೆ ಎಂದು ಪೋಷಕರು ದೂರಿನಲ್ಲಿ ಹೇಳಿಕೊಂಡಿದ್ದಾರೆ.
ಮಗಳ ಅಂತಧರ್ಮೀಯ ವಿವಾದದಿಂದ ತೀವ್ರವಾಗಿ ನೊಂದಿದ್ದ ಪೋಷಕರು ಇದೀಗ ಮಗಳು ನಾಪತ್ತೆಯಾಗಿರುವುದರಿಂದ ಇನ್ನಷ್ಟು ಕಂಗಾಲಾಗಿದ್ದಾರೆ.
ಅನುಷಾ ಪೋಷಕರು 12 ವರ್ಷದ ಹಿಂದೆ ಮೈಸೂರಿಗೆ ಬಂದು ನೆಲೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ