ಚಿಕ್ಕಮಗಳೂರು ನಗರ ಬಂದ್ಗೆ ಮಿಶ್ರ ಪ್ರತಿಕ್ರಿಯೆ;ಲಾಠಿ ಚಾರ್ಜ್
Team Udayavani, Dec 22, 2017, 9:54 AM IST
ಚಿಕ್ಕಮಗಳೂರು: ವಿಜಯಪುರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಕೊಲೆ ಮಾಡಿರುವುದನ್ನು ಖಂಡಿಸಿ ಶುಕ್ರವಾರ ದಲಿತ-ಪ್ರಗತಿಪರ ಹಾಗೂ ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿರುವ ನಗರ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಪ್ರತಿಭಟನಾ ನಿರತರು ನಗರದ ಹೃದಯ ಭಾಗದಲ್ಲಿ ಟಯರ್ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.
ಪ್ರತಿಭಟನೆ ನಡೆಸುತ್ತಿದ್ದ ಕರವೇ (ಸ್ವಾಭಿಮಾನಿ ಬಣ) ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿ ಚದುರಿಸಿದ್ದಾರೆ.
ಶಾಲಾ ಕಾಲೇಜುಗಳು ಎಂದಿನಂತೆ ತೆರೆದಿವೆ, ವಾಹನ ಸಂಚಾರವೂ ಎಂದಿನಂತೆ ಇದೆ. ಕೆಲ ಅಂಗಡಿ ಗಳು ಬಾಗಿಲು ತೆರೆದಿಲ್ಲ,ಇನ್ನೂ ಕೆಲ ಅಂಗಡಿಗಳು ತೆರೆದಿರುವುದು ಕಂಡು ಬಂದಿದೆ.
ಶಾಂತಿಯುತ ಪ್ರತಿಭಟನೆಗೆ ಜಿಲ್ಲಾಧಿಕಾರಿ ಶ್ರೀರಂಗಯ್ಯ ಅವರು ಅನುಮತಿ ನೀಡಿದ್ದಾರೆ.
ಎಸ್ಪಿ ಅಣ್ಣಾ ಮಲೈ ಅವರು ಒತ್ತಾಯ ಪೂರ್ವಕ ಬಂದ್ ಮಾಡಿಸಿದ್ದಲ್ಲಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಂಗಡಿಗಳನ್ನು ತೆರೆಯಬಹುದು ನಾವು ಭದ್ರತೆ ನೀಡುವುದಾಗಿ ಮಾಲೀಕರಿಗೆ ಅಭಯ ನೀಡಿದ್ದಾರೆ.
ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ