ಮಠಕ್ಕೆ ರಾಜೀನಾಮೆ ಕೊಟ್ಟು ಶಕ್ತಿ ತೋರಿಸಿ


Team Udayavani, Dec 25, 2017, 6:20 AM IST

Dingaleshwar-Swamiji.jpg

ಗದಗ: ಪ್ರತ್ಯೇಕ ಧರ್ಮದ ಹೆಸರಿನಲ್ಲಿ ಕೆಲ ಮಠಾಧೀಶರೇ ಜನರ, ಭಕ್ತರ ಹಾದಿ ತಪ್ಪಿಸುತ್ತಿದ್ದಾರೆ. ಮಠದಲ್ಲೂ ರಾಜಕಾರಣ ಶುರುವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಅಂಥ ಮಠಾಧೀಶರು ಮಠದ ಸ್ಥಾನಮಾನಗಳಿಗೆ ರಾಜೀನಾಮೆ ನೀಡಿ ಧರ್ಮದ ತಾಕತ್‌ ತೋರಿಸಲಿ ನೋಡೋಣ ಎಂದು ಬಾಲೇಹೊಸೂರಿನ ದಿಂಗಾಲೇಶ್ವರ ಶ್ರೀಗಳು ಸವಾಲು ಹಾಕಿದರು.

ನಗರದಲ್ಲಿ ಭಾನುವಾರ ನಡೆದ ವೀರಶೈವ-ಲಿಂಗಾಯತ ಧರ್ಮ ಜನಜಾಗೃತಿ ಸಮಾವೇಶದಲ್ಲಿ ಆಶೀರ್ವಚನ ನೀಡಿದ ಅವರು, ನಿಮ್ಮ ಹಣೆಬಹರಕ್ಕೆ ಕೊಪ್ಪಳದಲ್ಲಿ 500 ಜನರನ್ನು ಸೇರಿಸಲಾಗಲಿಲ್ಲ. ಕೆಲವರು ಹಾನಗಲ್‌ ಕುಮಾರಸ್ವಾಮಿಯವರನ್ನು ನಿಂದಿಸುವ ಕೆಲಸ ಮಾಡುತ್ತಿದ್ದಾರೆ. ಮುಂದೊಂದು ದಿನ ಜನ ನಿಮ್ಮನ್ನ ನಾಯಿಗೆ ಹೊಡದಂಗ ಹೊಡಿತಾರ ಎಂದು ಹೇಳುತ್ತಿದ್ದಾರೆ. ನಾಯಿ ನಿಯತ್ತಿನ ಪ್ರಾಣಿ. ನೀವು ಅದಕ್ಕಿಂತಲೂ ಕಡೆ ಎಂದು ಕತ್ತೆಗೆ ಹೋಲಿಸಿದರು.

ಪ್ರತ್ಯೇಕ ಧರ್ಮದ ಬಣದಲ್ಲಿ ಕಾಣಿಸಿಕೊಂಡಿರುವ ಕೆಲ ಮಠಾಧೀಶರಿಗೆ ಮಠದಿಂದ ಹೊರಗೆ ಹಾಕುವ ಬೆದರಿಕೆ ರಾಜಕಾರಣಿಗಳಿಂದ ಇದೆ. ಅದಕ್ಕೆ ಅವರೊಂದಿಗೆ ಗುರುತಿಸಿಕೊಂಡಿದ್ದೇವೆ ಎಂದು ತಮ್ಮ ಬಳಿ ಹೇಳಿಕೊಂಡಿದ್ದಾರೆ. ಅವರನ್ನು ಎದುರಿಸಿ ಬಂದರೆ ನಾವು
ನಮ್ಮ ಮಠಗಳನ್ನು ನಿಮಗೆ ಬಿಟ್ಟು ಕೊಡುತ್ತೇವೆ ಬನ್ನಿ ಎಂದು ಆಹ್ವಾನಿಸಿದರು.

ಲಿಂಗಾಯತ ಅಂತ ಹೊರಟವರೆಲ್ಲ ವೀರಶೈವ-ಲಿಂಗಾಯತ ಧರ್ಮಕ್ಕೆ ಈ ಹಿಂದೆ ಸಹಿ ಹಾಕಿದವರು,ಕೇಳಿದರೆ ಆಗಿನ್ನೂ ನಮಗೆ ತಿಳಿವಳಿಕೆ ಇರಲಿಲ್ಲ. ಈಗ ಬಂದಿದೆ ಎನ್ನುತ್ತಾರೆ. ಮುಂದೊಂದು ದಿನ ಆವತ್ತು ತಿಳಿವಳಿಕೆ ಇರಲಿಲ್ಲ. ಅದಕ್ಕೆ ಲಿಂಗಾಯತ ಪ್ರತ್ಯೇಕ ಧರ್ಮ ಅಂತ ಹೋಗಿದ್ದೆವು ಎನ್ನುವ ಕಾಲ ಬರುತ್ತದೆ ಎಂದು ಸಚಿವ ಎಂ.ಬಿ. ಪಾಟೀಲ ಕುರಿತು ವ್ಯಂಗ್ಯವಾಡಿದರು.

ಧರ್ಮ ಕಲಹಕ್ಕೆ ರಾಜನೇ ಕಾರಣ: ಸಿದ್ದಲಿಂಗ ಸ್ವಾಮಿ
ಗದಗ:
ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಂಗಾಯತ ಪ್ರತ್ಯೇಕ ಧರ್ಮದ ಹೆಸರಿನಲ್ಲಿ ಕೆಲ ನಾಯಿಗಳನ್ನ ಛೂ ಬಿಟ್ಟು ಕಚ್ಚಿಸುವ
ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಕಲಬುರಗಿ ಆಂದೋಲದ ಸಿದ್ದಲಿಂಗ ಸ್ವಾಮಿಗಳು ಆಕ್ರೋಶ ವ್ಯಕ್ತಪಡಿಸಿದರು. 

ವೀರಶೈವ-ಲಿಂಗಾಯತ ಧರ್ಮ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು,ಬೊಗಳುವ ನಾಯಿಗಳಿಗೆ ನಾವು ಬೆದರಲ್ಲ. ಅಂಥ ಈಡಿಯಟ್ಸ್‌ಗಳಿಂದ ಧರ್ಮ ಒಡೆಯಲು ಸಾಧ್ಯವಿಲ್ಲ ಎಂದರು. ರಾಜ್ಯದಲ್ಲಿ ತಲೆದೋರಿರುವ ಈ ಧರ್ಮ ಕಲಹಕ್ಕೆ ರಾಜನೇ ಕಾರಣ.

ಮುಖ್ಯಮಂತ್ರಿಗಳೇ ಮುಂದಾಗಿ ಕೆಲವರ ಮೂಲಕ ಧರ್ಮ ಇಬ್ಭಾಗದ ಕೆಲಸ ಮಾಡುತ್ತಿದ್ದಾರೆ. ಧರ್ಮ ವಿಭಜನೆ ಮಾಡಿ
ಮುಂಬರುವ ಚುನಾವಣೆಯಲ್ಲಿ ಮತ ಗಳಿಸುವ ಸಂಚು ರೂಪಿಸಿದ್ದಾರೆ. ನಿಮ್ಮಪ್ಪನಾಣೆಗೂ ಮುಂದೆ ನೀವು ಅಧಿಕಾರಕ್ಕೆ ಬರಲ್ಲ ಎಂದು ಭಾವಾವೇಶಕ್ಕೊಳಗಾದರು. ವೀರಶೈವ ಲಿಂಗಾಯತ ಪ್ರತ್ಯೇಕವಲ್ಲ ಎಂದ ವಿಜಯಪುರದ ಪ್ರಕಾಶ ಸ್ವಾಮಿಗಳಿಗೆ ಬೆದರಿಕೆ ಹಾಕುವ ಹೀನ ಕೃತ್ಯ ಎಸಗಿದ ಸಚಿವ ಎಂ.ಬಿ. ಪಾಟೀಲ ಯಾರು,ಎಂಥವರು ಎಂಬುದು ಜನರಿಗೆ ಗೊತ್ತಿದೆ. ಸಚಿವರು ಉದ್ಧಟತನ ತೋರುವ ಮೂಲಕ ಸ್ವಾಮಿಗಳಿಗೆ, ಸಮಾಜಕ್ಕೆ ಮೋಸ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅದರ ಫಲ ಉಣ್ಣುತ್ತಾರೆ ಎಂದು ಸೂಕ್ಷ್ಮವಾಗಿ ಹೇಳಿದರು. 

ಗದಗನಲ್ಲಿ ರಾವಣರಂಥ ರಾಕ್ಷಸರಿದ್ದಾರೆ. ಕೋಮು ಸೌಹಾರ್ದತೆ ಹೆಸರಿನಲ್ಲಿ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಅದು ಹೇಗೆ ಪ್ರಶಸ್ತಿ ಬಂತು ಎಂಬುದು ಅವರಿಗೆ ಗೊತ್ತು ಎಂದು ಡಾ|ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳನ್ನು ಟೀಕಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.