ಮಹದಾಯಿಗಾಗಿ ನರಗುಂದ ಮತ್ತೆ ಬಂದ್
Team Udayavani, Jan 4, 2018, 6:25 AM IST
ನರಗುಂದ: ಮಹದಾಯಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗೋವಾದಲ್ಲಿನ ಕಾಂಗ್ರೆಸ್ ನಿಲುವು ಖಂಡಿಸಿ ಬುಧವಾರ ಬಿಜೆಪಿ ಕರೆ ನೀಡಿದ್ದ ನರಗುಂದ ಬಂದ್ಗೆ ಉತ್ತಮ ಸ್ಪಂದನೆ ದೊರೆಯಿತು.
ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ಬಂದ್ ಮಾಡಿದ್ದರಿಂದ ಬಸ್ ಸಂಚಾರ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಶಾಲಾ- ಕಾಲೇಜುಗಳು ಅಘೋಷಿತ ರಜೆ ಎದುರಿಸಬೇಕಾಯಿತು. ಬ್ಯಾಂಕ್ ಹಾಗೂ ಸರ್ಕಾರಿ ಕಚೇರಿಗಳಿಗೆ ಆಗಮಿಸಬೇಕಿದ್ದ ಸಿಬ್ಬಂದಿ ಬಸ್ ಸೌಲಭ್ಯವಿಲ್ಲದೆ ತೊಂದರೆ ಅನುಭವಿಸಬೇಕಾಯಿತು. ವ್ಯಾಪಾರಸ್ಥರ ಬೆಂಬಲದಿಂದಾಗಿ ಪಟ್ಟಣದ ಎಲ್ಲ ಅಂಗಡಿ ಮುಂಗಟ್ಟು ಸ್ಥಗಿತಗೊಂಡಿದ್ದವು. ಪಟ್ಟಣದ ಎಲ್ಲ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು.
ಇದೇ ವೇಳೆ, ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಮಲಪ್ರಭಾ, ಮಹದಾಯಿ ಕೇಂದ್ರ ಒಕ್ಕೂಟ ಸಮಿತಿಯವರು ಬುಧವಾರ ಹುಬ್ಬಳ್ಳಿ ಹೊರವಲಯದ ಗಬ್ಬೂರ ಬೈಪಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ ನಂ.4ರಲ್ಲಿ ರಸ್ತೆತಡೆ ನಡೆಸಿ ಪ್ರತಿಭಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA