ದೀಪಕ್‌ ಶವ ಗೌಪ್ಯವಾಗಿ ಮನೆಗೆ; ಗ್ರಾಮಸ್ಥರ ಆಕ್ರೋಶ 


Team Udayavani, Jan 4, 2018, 9:22 AM IST

23.jpg

ಮಂಗಳೂರು: ಸುರತ್ಕಲ್‌ ಸಮೀಪದ ಕಾಟಿಪಳ್ಳದ ಕೈಕಂಬದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್‌ ರಾವ್‌ ಅವರ ಶವವನ್ನು ಗುರುವಾರ  ಪೊಲೀಸರು ಗೌಪ್ಯವಾಗಿ ಮನೆಗೆ ರವಾನಿಸಿದ್ದು ಹಿಂದೂ ಸಂಘಟನೆಗಳು, ಬಿಜೆಪಿ ಮತ್ತು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. 

ಎಜೆ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿ ಇಡಲಾಗಿದ್ದ ಶವವನ್ನು ಹಿಂಬಾಗಿಲಿನಿಂದ ಗೌಪ್ಯವಾಗಿ  ಮನೆಗೆ ರವಾನಿಸಲಾಯಿತು. ಆದರೆ ಮನೆಯ ಎದುರು ಜಮಾಯಿಸಿದ್ದ ಸಾವಿರಾರು ಮಂದಿ ಅಂಬುಲೆನ್ಸ್‌ ತಡೆದು ಶವವನ್ನು ಆಸ್ಪತ್ರೆಗೆ ವಾಪಾಸ್‌ ತೆಗೆದುಕೊಂಡು ಹೋಗುವಂತೆ ಪಟ್ಟು ಹಿಡಿದರು. ಈ ವೇಳೆ ಪೊಲೀಸ್‌ ಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ತೀವ್ರ ವಾಗ್ವಾದ ಉಂಟಾಯಿತು.

 

ಆಸ್ಪತ್ರೆಯ ಮುಂದು ಹಾರಮತ್ತು ಹೂವಿನಿಂದ ಅಲಂಕರಿಸಿದ್ದ ವಾಹನದೊಂದಿಗೆ ಶವಯಾತ್ರೆ ನಡೆಸಲು ಸಜ್ಜಾಗಿದ್ದ ಸಾವಿರಾರು ಹಿಂದೂ ಸಂಘಟನೆಯ ಕಾರ್ಯಕರ್ತರು ಪೊಲೀಸರ ಕ್ರಮದ ವಿರುದ್ಧ ಕೆಂಡ ಕಾರಿದ್ದಾರೆ. 

ಮೆರವಣಿಗೆ ನಡೆಸಲು ಅವಕಾವ ನೀಡದೆ ಇರುವುದು ಹಿಂದೂ ವಿರೋಧಿ ನೀತಿಯಾಗಿದೆ . ಕಾಂಗ್ರೆಸ್‌ ಸರ್ಕಾರದ ಆದೇಶದಂತೆ ಕಾನೂನನ್ನೂ ಮೀರಿ ಪೊಲೀಸರು ನಡೆದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. 

ಬುಧವಾರ ಮಧ್ಯಾಹ್ನ ದೀಪಕ್‌ ರಾವ್‌ (28) ಅವರನ್ನು ದುಷ್ಕರ್ಮಿಗಳು ಮಾರಕಾಯುಧಗಳಿಂದ ಕಡಿದು ಕೊಲೆ ಮಾಡಿದ್ದರು. ಸಿನಿಮೀಯ ಶೈಲಿಯಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಘಟನೆ ನಡೆದಮೂರೂವರೆ ತಾಸುಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿಪೊಲೀಸರು ಯಶಸ್ವಿಯಾಗಿದ್ದಾರೆ. ಮೂಲ್ಕಿಯ ನೌಷಾದ್‌,ರಿಜ್ವಾನ್‌, ಪಿಂಕಿ ನವಾಜ್‌ ಮತ್ತು ನಿರ್ಷಾನ್‌ ಬಂಧಿತರು. 

 ಸುರತ್ಕಲ್‌ ಪರಿಸರದಲ್ಲಿ ವ್ಯಾಪಕ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಮಂಗಳೂರು ಕಮಿಷನರೇಟ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಜಾರಿ  ಮಾಡಲಾಗಿದೆ.  ಹೆಚ್ಚುವರಿ ಪಡೆಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. 

ಸುರತ್ಕಲ್‌ ಪರಿಸರದಲ್ಲಿ ಅಘೋಷಿತ ಬಂದ್‌ ವಾತಾವರಣ ನಿರ್ಮಾಣವಾಗಿದ್ದು, ರಸ್ತೆಗಳಲ್ಲಿ ವಾಹನ ಸಂಚಾರ ವಿರಳವಾಗಿದೆ. 


ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.