ಸಂವಿಧಾನ ಬದಲಿಸಲು ಸಾಧ್ಯವಿಲ್ಲ: ಅಣ್ಣಾ ಹಜಾರೆ
Team Udayavani, Jan 6, 2018, 6:10 AM IST
ಬೆಳಗಾವಿ: “ಡಾ.ಬಾಬಾಸಾಹೇಬ ಅಂಬೇಡ್ಕರ್ ದೇಶಕ್ಕೆ ನೀಡಿರುವ ಸಂವಿಧಾನ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನ ನಮ್ಮ ದೇಶದ ಆಸ್ತಿ. ಅದನ್ನು ಬದಲಿಸಬೇಕೆಂದು ಹೇಳಿದ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ತಲೆ ತೋರಿಸಬೇಕಾಗಿದೆ. ಭ್ರಷ್ಟಾಚಾರ ಮುಕ್ತ ಭಾರತ ಎಂದು ಹೇಳಲಾಗುತ್ತಿದೆಯೇ ಹೊರತು ಯಾವುದೇ ಕಾರ್ಯಗಳನ್ನು ಸರ್ಕಾರಗಳು ಮಾಡಿಲ್ಲ ಎಂದು ಟೀಕಿಸಿದರು.
ಮಾ.23ರಿಂದ ದೆಹಲಿಯಲ್ಲಿ ಭ್ರಷ್ಟಾಚಾರ ವಿರುದ್ಧ ನಡೆಯುವ ಆಂದೋಲನಕ್ಕೆ ಸ್ಥಳ ನೀಡುವಂತೆ ಪ್ರಧಾನಿಗೆ ಎರಡು ಬಾರಿ ಪತ್ರ ಬರೆಯಲಾಗಿದೆ. ಆದರೆ ಇದುವರೆಗೆ ಉತ್ತರ ಬಂದಿಲ್ಲ. ಜಾಗ ನೀಡದಿದ್ದರೆ ಜೈಲಿನಲ್ಲಿ ಆಂದೋಲನ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ಗೂ ನನಗೂ ಯಾವುದೇ ಸಂಬಂಧವಿಲ್ಲ. ಯಾವಾಗ ರಾಜಕೀಯಕ್ಕೆ ಸೇರಿದರೋ ಅಂದಿನಿಂದ ಅವರೊಂದಿಗೆ ಯಾವುದೇ ಸಂಬಂಧ ಇಟ್ಟುಕೊಂಡಿಲ್ಲ ಎಂದು ಅಣ್ಣಾ ಹಜಾರೆ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ