ವೀರಶೈವ ಮಹಾಸಭೆಗೆ ಲಿಂಗಾಯತ ಸೇರ್ಪಡೆ?


Team Udayavani, Jan 6, 2018, 6:00 AM IST

lingayat.jpg

ಬೆಂಗಳೂರು: ಶತಮಾನದ ಹಿಂದೆ ಆರಂಭವಾಗಿದ್ದ ವೀರಶೈವ ಮಹಾಸಭೆಯನ್ನು “ವೀರಶೈವ ಲಿಂಗಾಯತ ಮಹಾಸಭೆ’ ಎಂದು ಬದಲಾವಣೆ ಮಾಡಬೇಕೆಂಬ ಬೇಡಿಕೆಗೆ ಮನ್ನಣೆ ದೊರೆಯುವುದೇ ಎಂಬ ಪ್ರಶ್ನೆ ಈಗ ಉದ್ಭವವಾಗಿದೆ.

ವೀರಶೈವ ಮಹಾಸಭೆಗೆ ಲಿಂಗಾಯತ ಪದ ಸೇರಿಸಬೇಕೆಂದು ದಶಕಗಳಿಂದಲೂ ಬೇಡಿಕೆ ಇತ್ತು. ಈ ಬಗ್ಗೆ ವೀರಶೈವ ಮಹಾಸಭೆಯಲ್ಲಿ ಹಲವು ಬಾರಿ ಚರ್ಚೆಯಾಗಿದೆ. ಆದರೆ, ಅಂತಿಮ ತೀರ್ಮಾನ ಕೈಗೊಂಡಿಲ್ಲ. ಭಾನುವಾರ ನಡೆಯುವ ವೀರಶೈವ ಮಹಾಸಭೆಯ ಸಾಮಾನ್ಯ ಸಭೆಯ ಅಜೆಂಡಾದಲ್ಲಿ ಮಹಾಸಭೆಗೆ ವೀರಶೈವದ ಜತೆಗೆ ಲಿಂಗಾಯತ ಪದ ಸೇರಿಸುವ ಕುರಿತಂತೆಯೂ ವಿಷಯ ಸೇರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವೀರಶೈವರು ಮತ್ತು ಲಿಂಗಾಯತರು ಒಂದೇ ಎಂದುಕೊಂಡ ಸಂದರ್ಭದಲ್ಲಿ, ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ವೀರಶೈವರನ್ನೇ ಗ್ರಾಮೀಣ ಭಾಗದಲ್ಲಿ ಲಿಂಗಾಯತರು ಎನ್ನುತ್ತಾರೆಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ಧಾರವಾಡ, ಬೆಳಗಾವಿ ಜಿಲ್ಲಾ ಘಟಕದ ಮುಖಂಡರು ಮಹಾಸಭೆಗೆ “ವೀರಶೈವ ಲಿಂಗಾಯತ ಮಹಾಸಭೆ’ ಎಂದು ಮರು ನಾಮಕರಣ ಮಾಡಬೇಕೆಂದು 2007ರಲ್ಲಿ ಮನವಿ ಮಾಡಿದ್ದರು.

ಸಮಿತಿ ರಚನೆ: ಲಿಂಗಾಯತ ಮುಖಂಡರ ಬೇಡಿಕೆ ಹಿನ್ನೆಲೆಯಲ್ಲಿ ಮಹಾಸಭೆಗೆ ಮರು ನಾಮಕರಣ ಮಾಡುವ ಕುರಿತಂತೆ ಎನ್‌. ತಿಪ್ಪಣ್ಣ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. 2 ವರ್ಷಗಳ ನಂತರ ಸಮಿತಿ ವರದಿ ನೀಡಿದ್ದು, ಮಹಾಸಭೆಗೆ “ವೀರಶೈವ ಲಿಂಗಾಯತ ಮಹಾಸಭೆ’ ಎಂದು ಮರು ನಾಮಕರಣ ಮಾಡುವಂತೆ ಶಿಫಾರಸು ಮಾಡಿದೆ.

ಅದರಂತೆ ಬೆಂಗಳೂರಿನಲ್ಲಿರುವ ಮಹಾಸಭೆಯ ಭವನಕ್ಕೆ ವೀರಶೈವ ಲಿಂಗಾಯತ ಭವನ ಎಂದು ಮರು ನಾಮಕರಣ ಮಾಡಲಾಗಿದೆ. ಅಲ್ಲದೇ ವೀರಶೈವ ಮಹಾಸಭೆ ವೆಬ್‌ಸೈಟ್‌ ಅನ್ನೂ ವೀರಶೈವ ಲಿಂಗಾಯತ ಎಂದು ಬದಲಾಯಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ, ಪ್ರಮುಖವಾಗಿ ಸ‌ಂಘದ ಬೈಲಾ ಪ್ರಕಾರ ಮಹಾಸಭೆಯ ಹೆಸರು ಬದಲಾಯಿಸುವ ಬಗ್ಗೆ ಯಾವುದೇ ತೀರ್ಮಾನ ಆಗದೇ  ಮುಂದೂಡುತ್ತ ಬರಲಾಗುತ್ತಿತ್ತು.

ಹೆಸರು ಬದಲಾವಣೆ ಅಜೆಂಡಾ: ಭಾನುವಾರ ನಡೆಯುವ ವಾರ್ಷಿಕ ಸಾಮಾನ್ಯ ಸಭೆಯ ನಂತರ 15 ವರ್ಷಗಳ ನಂತರ ವಿಶೇಷ ಸಾಮಾನ್ಯ ಸಭೆಯನ್ನು ಪ್ರತ್ಯೇಕವಾಗಿ ನಡೆಸಲು ಮಹಾಸಭೆ ನಿರ್ಧರಿಸಿದೆ. ಸಾಮಾನ್ಯ ಸಭೆಗೆ ಸುಮಾರು 16 ಸಾವಿರ ಸದಸ್ಯರಿದ್ದು, ಎಲ್ಲರಿಗೂ ಆಹ್ವಾನಿಸಲಾಗಿದೆ. ಆ ಸಭೆಯಲ್ಲಿ ಪ್ರಮುಖವಾಗಿ ಮಹಾಸಭೆಗೆ ನಡೆಯುವ ಚುನಾವಣೆ ನಿಯಮಗಳ ಬದಲಾವಣೆ ಮಾಡುವ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ. ಆದರೆ, ಸಭೆಯಲ್ಲಿ ಪ್ರಮುಖವಾಗಿ ಮಹಾಸಭೆಯ ಹೆಸರು ಬದಲಾಯಿಸಬೇಕೇ ಅಥವಾ ಈಗಿರುವ ಹೆಸರನ್ನೇ ಮುಂದುವರಿಸಬೇಕೆ ಎಂಬ ಕುರಿತು ಚರ್ಚೆ ನಡೆಯಲಿದೆ.

ಮಹಾಸಭೆ ಒಲವು: ಇದುವರೆಗೂ ಲಿಂಗಾಯತ ಹೆಸರು ಸೇರಿಸಲು ಹಿಂದೇಟು ಹಾಕುತ್ತಿದ್ದ ವೀರಶೈವ ಮಹಾಸಭೆ ಸಂಘಕ್ಕೆ ವೀರಶೈವ ಲಿಂಗಾಯತ ಮಹಾಸಭೆ ಎಂದು ಮರು ನಾಮಕರಣ ಮಾಡಲು ಒಲವು ತೋರಿದೆ ಎನ್ನಲಾಗಿದೆ. ಆದರೆ, ಲಿಂಗಾಯತ ಪ್ರತ್ಯೇಕ ಹೋರಾಟಗಾರರು ವೀರಶೈವರಿಗೂ ಲಿಂಗಾಯತರಿಗೂ ಯಾವುದೇ ಸಂಬಂಧವಿಲ್ಲ ಎಂಬ ವಾದ ಮಾಡುತ್ತಿರುವುದರಿಂದ ಸದ್ಯ ಯಾವುದೇ ತೀರ್ಮಾನ ತೆಗೆದುಕೊಂಡರೂ ಲಿಂಗಾಯತ ಹೋರಾಟಗಾರರಿಗೆ ಮಣಿದ ಹಾಗಾಗುತ್ತದೆಂಬ ಮಾತು ಮಹಾಸಭೆಯ ಮುಖಂಡರಲ್ಲಿ ಕೇಳಿ ಬರುತ್ತಿದೆ. ಹೀಗಾಗಿ ಸದ್ಯಕ್ಕೆ ಹೆಸರು ಬದಲಾವಣೆ ಮಾಡಬಾರದೆಂಬ ವಾದವೂ ಕೇಳಿ ಬರುತ್ತಿದೆ.

ಲಿಂಗಾಯತ ಮುಖಂಡರ ಗೈರು?:
ವೀರಶೈವರಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಹೋರಾಟ ನಡೆಸುತ್ತಿರುವ ಲಿಂಗಾಯತ ಮುಖಂಡರು ಮಹಾಸಭೆಯ ಸಾಮಾನ್ಯ ಸಭೆಯಿಂದ ದೂರ ಉಳಿಯುವ ಸಾಧ್ಯತೆಯಿದೆ.

ಭಾನುವಾರ ಮಹಾಸಭೆಯ ಸಾಮಾನ್ಯ ಸಭೆ ನಡೆಯಲಿದೆ. ಎಲ್ಲ ಸದಸ್ಯರಿಗೂ ಅಧಿಕೃತ ಆಹ್ವಾನ ಕಳುಹಿಸಲಾಗಿದೆ. ಅನೇಕ ವಿಷಯಗಳ ಚರ್ಚೆ ಹಾಗೂ ಬೈಲಾ ತಿದ್ದುಪಡಿ ಕುರಿತು ಚರ್ಚಿಸಲಾಗುತ್ತದೆ. ಮಹಾಸಭೆಯ ಹೆಸರು ಬದಲಾಯಿಸುವ ಕುರಿತಂತೆಯೂ ವಿಶೇಷ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.
– ರೇಣುಕಾ ಪ್ರಸಾದ್‌, ವೀರಶೈವ ಮಹಾಸಭೆ ಪ್ರಧಾನ ಕಾರ್ಯದರ್ಶಿ

– ಶಂಕರ ಪಾಗೋಜಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.