ಕಂದಕ ಸೃಷ್ಟಿಸುವ ಕೆಲಸ ಮಾಡಬೇಡಿ: ಶ್ರೀಶೈಲ ಶ್ರೀ


Team Udayavani, Jan 10, 2018, 10:17 AM IST

10-10.jpg

ವಿಜಯಪುರ: ವೀರಶೈವ ಹಾಗೂ ಲಿಂಗಾಯತರನ್ನು ಬೇರ್ಪಡಿಸಲು ಯಾರಿಂದಲೂ ಸಾಧ್ಯವಿಲ್ಲ. ವೀರಶೈವ ಹಾಗೂ ಲಿಂಗಾಯತರಲ್ಲಿ ಒಡಕು ಹಾಗೂ ಕಂದಕ ಸೃಷ್ಟಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ಶ್ರೀಶೈಲ ಜಗದ್ಗುರು ಡಾ| ಚನ್ನಸಿದ್ಧರಾಮ ಪಂಡಿತಾರಾಧ್ಯ
ಶಿವಾಚಾರ್ಯ ಭಗವತ್ಪಾದರು ಹೇಳಿದರು.

ತಾಲೂಕಿನ ಬಬಲೇಶ್ವರ ಬೃಹನ್ಮಠದ ಆವರಣದಲ್ಲಿ ಜರುಗಿದ ಹಾಗಲ್‌ ಕುಮಾರ ಶಿವಯೋಗಿಗಳ 150ನೇ ಜಯಂತ್ಯುತ್ಸವ ಹಾಗೂ ವೀರಶೈವ-ಲಿಂಗಾಯತ ಸಮನ್ವಯ ಜನಜಾಗೃತಿ  ಸಮಾವೇಶದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಮುಂಚೂಣಿಯ  ಲ್ಲಿರುವ ವ್ಯಕ್ತಿಗಳು ವೀರಶೈವ ಬೇರೆ, ಲಿಂಗಾಯತ ಬೇರೆ ಎಂದು ಒಂದು ಕಡೆ, ಇನ್ನೊಂದು ಕಡೆ ವೀರಶೈವ ಎನ್ನುವುದು ಲಿಂಗಾಯತ ಧರ್ಮದ 99 ಉಪಪಂಗಡಗಳಲ್ಲಿ ಒಂದು ಎಂದು ಹೇಳುವ ಮೂಲಕಗೊಂದಲ ಸೃಷ್ಟಿಸುತ್ತಿದ್ದಾರೆ. ಮೊದಲು ಅವರಲ್ಲಿ ಈ ಸ್ಪಷ್ಟತೆ ಇಲ್ಲ ಎಂದರು. 

ವೀರಶೈವ-ಲಿಂಗಾಯತ ಒಂದೇ, ಎಂದೆಂದಿಗೂ ಒಂದೇ, ಲಿಂಗಾಯತ-ವೀರಶೈವ ಒಂದು-ವಿಶ್ವವೇ ನಮ್ಮ ಬಂಧು ಎಂದರು. ಬಬಲೇಶ್ವರ ಬೃಹನ್ಮಠದ ಡಾ| ಮಹಾದೇವ ಶಿವಾಚಾರ್ಯರು ಪ್ರಾಸ್ತಾವಿಕ ಮಾತನಾಡಿದರು. ಜಾಲಹಳ್ಳಿಯ ಜಯ ಶಾಂತಲಿಂಗೇಶ್ವರ ಸ್ವಾಮಿಗಳು ಸೇರಿದಂತೆ ಹಲವಾರು ಮಠಾಧೀಶರು ಭಾಗವಹಿಸಿದ್ದರು.

ವಚನ ಸಾಹಿತ್ಯಕ್ಕೆ ಉನ್ನತ ಗೌರವ: ಉಜ್ಜಯಿನಿ ಶ್ರೀ
ವಿಜಯಪುರ: ಬಹಳಷ್ಟು ಜನರು ವಚನಗಳು ತಮ್ಮ ಆಸ್ತಿ ಎಂಬಂತೆ ಹಾಗೂ ಪಂಚ ಪೀಠಗಳಿಗೂ-  ವಚನಗಳಿಗೂ ಸಂಬಂಧವಿಲ್ಲ ಎಂಬಂತೆ ಮಾತನಾಡುತ್ತಿದ್ದಾರೆ. ಬಸವಾದಿ ಶರಣರು ಹಾಗೂ ವಚನ ಸಾಹಿತ್ಯಕ್ಕೆ ಪಂಚಾಚಾರ್ಯರು ಉನ್ನತ ಗೌರವ ನೀಡಿದ್ದಾರೆ ಎಂದು ಉಜ್ಜಯಿನಿ ಜಗದ್ಗುರು
ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು.

ವೀರಶೈವ-ಲಿಂಗಾಯತ ಸಮನ್ವಯದ ಜನ ಜಾಗೃತಿ ಸಮಾವೇಶದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿ, ಬಸವಣ್ಣನವರ ಮೇಲೆ ವಾಗೀಶ ಪಂಡಿತಾರಾಧ್ಯ ಶ್ರೀಗಳು ಉನ್ನತ ಸಂಶೋಧನೆ ಕೈಗೊಂಡಿದ್ದಾರೆ. ಈ ವಿಷಯವನ್ನು ಪ್ರತ್ಯೇಕವಾದಿಗಳು ಅರ್ಥ ಮಾಡಿಕೊಳ್ಳಬೇಕು ಎಂದರು. ಆಚರಣೆಯಿಂದ ವೀರಶೈವ, ಅನುಸರಣೆಯಿಂದ ಲಿಂಗಾಯತರಾಗಬೇಕು. ಯಾರನ್ನು ನಾವು ನಾಯಕರನ್ನಾಗಿಸಬೇಕು, ಯಾರನ್ನು ಒಪ್ಪಿಕೊಳ್ಳಬೇಕು ಎಂಬುದು ಆಲೋಚಿಸಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮಗೆ ಕೊಟ್ಟ ಅಸ್ತ್ರ ಬಳಸಬೇಕು ಎಂದು ಕರೆ ನೀಡಿದರು.

ವೀರಶೈವ ಎನ್ನುವುದು ಧರ್ಮ, ಲಿಂಗಾಯತ ಎನ್ನುವುದು ಆಚರಣೆ. ಉದಾಹರಣೆ ಮೂಲಕ ವಿಶ್ಲೇಷಿಸುವುದಾದರೆ, ಇಸ್ಲಾಂ ಎನ್ನುವುದು ಧರ್ಮ, ನಮಾಜ್‌, ಹಜ್‌ ಹಾಗೂ ರೋಜಾ, ಜಕಾತ್‌ ಎನ್ನುವುದು ಆ ಧರ್ಮದ ಆಚರಣೆಗಳು. ಆಚರಣೆಗಳು ಎಂದ ಮಾತ್ರಕ್ಕೆ ನಮಾಜ್‌ ಎನ್ನುವುದು ಧರ್ಮವಾಗುವುದಿಲ್ಲ. ನಮಾಜ್‌ ಅನ್ನುವುದು ಧರ್ಮ ಎಂದು ಅವರು ಒಪ್ಪುವುದಿಲ್ಲ. ಅದರಂತೆ ವೀರಶೈವ ಎನ್ನುವುದು ಧರ್ಮ, ಲಿಂಗಾಯತ ಎನ್ನುವುದು ಆಚರಣೆ.
 ●ಡಾ| ಚಂದ್ರಶೇಖರ ಶಿವಾಚಾರ್ಯರು, ಕಾಶಿ ಜಗದ್ಗುರು 

ಟಾಪ್ ನ್ಯೂಸ್

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.