ಮೋದಿ ಸ್ವಂತ ದುಡ್ಡಲ್ಲಿ ಓಡಾಡ್ತಾರಾ? ಪ್ರತಿಪಕ್ಷಗಳಿಗೆ ಗುದ್ದು


Team Udayavani, Jan 10, 2018, 10:27 AM IST

10-11.jpg

ಮಡಿಕೇರಿ/ಉಡುಪಿ: “ನರೇಂದ್ರ ಮೋದಿ ವಿದೇಶಗಳನ್ನು ಯಾರ ಹಣದಲ್ಲಿ ಸುತ್ತುತ್ತಿದ್ದಾರೆ? ಅವರು ಸ್ವಂತ ದುಡ್ಡಲ್ಲಿ ಓಡಾಡ್ತಾರಾ? ನಾವು ಕೂಡ ಸರಕಾರಿ ಕಾರ್ಯಕ್ರಮಕ್ಕೆ ಓಡಾಟ ಮಾಡುತ್ತಿದ್ದೇವೆ’. ಸರ್ಕಾರದ ಹಣದಲ್ಲಿ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂಬ ಪ್ರತಿಪಕ್ಷಗಳ ಟೀಕೆಗೆ ಸಿಎಂ
ಸಿದ್ದರಾಮಯ್ಯ ನೀಡಿದ ಉತ್ತರವಿದು.

ಉಡುಪಿಯಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಅಮಿತ್‌ ಶಾ ಗೌಪ್ಯ ಸಭೆ ಮಾಡಲಿ. ನಾವು ಸೂಕ್ತ ಸಮಯದಲ್ಲಿ ನಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ಅಮಿತ್‌ ಶಾಗೆ ಸೋಲಿನ ಭಯ ಆರಂಭವಾಗಿದೆ. ಉಪಚುನಾವಣೆಯಲ್ಲೇ ರಾಜ್ಯದ ಫ‌ಲಿತಾಂಶದ ದಿಕ್ಸೂಚಿ ಗೊತ್ತಾಗಿದೆ. ಶಾರ ಯಾವ ತಂತ್ರ, ರಣತಂತ್ರವೂ ನಡೆಯುವುದಿಲ್ಲ. ಕರ್ನಾಟಕದ ಮತದಾರರು ಕಾಂಗ್ರೆಸ್‌ ಪಕ್ಷವನ್ನೇ ಗೆಲ್ಲಿಸುತ್ತಾರೆ ಎಂದರು.

ನಾವು ಏನು ಎಂಬುದನ್ನು ಚುನಾವಣೆ ವೇಳೆ ತೋರಿಸುತ್ತೇವೆ ಎಂದು ದೇವೇಗೌಡರು ಹೇಳುತ್ತಿದ್ದಾರಲ್ಲ ಎಂದು ಪ್ರಶ್ನಿಸಿದಾಗ, “ಗೌಡರನ್ನು ಬಹಳ ವರ್ಷಗಳಿಂದ ನೋಡಿದ್ದೇನೆ. ಪದೇಪದೆ ತೋರಿ ಸೋದಕ್ಕೆ ಏನಿದೆ? ಅವರ ಜತೆಗಿದ್ದೂ ಬಹಳ ನೋಡಿದ್ದೇನೆ? ವಿರೋಧ ಪಕ್ಷದಲ್ಲಿದ್ದೂ ನೋಡಿದ್ದೇನೆ’ ಎಂದು ಸಿದ್ದರಾಮಯ್ಯ ಕುಟುಕಿದರು.

ರಾಜ್ಯದ ಹಣಕಾಸು ಸ್ಥಿತಿ ಉತ್ತಮ: ಬಳಿಕ ಮಡಿಕೇರಿಯಲ್ಲಿ ನಡೆದ ಸರಕಾರದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಣಕಾಸಿನ ಸ್ಥಿತಿ ಉತ್ತಮವಾಗಿದೆ. 2012-13ನೇ ಸಾಲಿನಲ್ಲಿ 98 ಸಾವಿರ ಕೋಟಿ ರೂ.ಗಳ ಬಜೆಟ್‌ನ್ನು ಮಂಡಿಸಲಾಗಿತ್ತು. ಈ ಮೊತ್ತ 2017-18ನೇ ಸಾಲಿನ ಬಜೆಟ್‌ನಲ್ಲಿ 1.86 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ. ಪ್ರಸ್ತುತ ಫೆಬ್ರವರಿಯಲ್ಲಿ ಮಂಡಿಸಲಿರುವ ಬಜೆಟ್‌ ಮೊತ್ತ 2.56 ಲಕ್ಷ ಕೋಟಿ ರೂ. ಗಳಾಗಿದ್ದು, ಎಲ್ಲಾ ಪ್ರಗತಿ ಕಾರ್ಯಕ್ರಮಗಳ ನಡುವೆಯೂ ಆರ್ಥಿಕ ಸ್ಥಿತಿ ಸುಭದ್ರವಾಗಿದೆ. ಆದರೆ, ರಾಜ್ಯದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಅರಿವಿಲ್ಲದ ಅಜ್ಞಾನಿಗಳು ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಟೀಕೆ ಮಾಡುತ್ತಿದ್ದಾರೆ. ಒಂದು ರಾಜ್ಯ ಅಭ್ಯುದಯವಾಗಬೇಕಾದರೆ ಸಾಲ ಮಾಡುವ ಅನಿವಾರ್ಯತೆ ಉಂಟಾಗುತ್ತದೆ. ಅಷ್ಟಕ್ಕೂ, ಮಧ್ಯಪ್ರದೇಶ, ಗುಜರಾತ್‌ ಸೇರಿದಂತೆ ಬೇರೆ ರಾಜ್ಯಗಳ ಮೇಲೆ, ದೇಶದ ಮೇಲೆ ಸಾಲ ಇಲ್ಲವೆ ಎಂದು ಪ್ರಶ್ನಿಸಿದರು.

ನನ್ನ ಆಡಳಿತ ತೃಪ್ತಿ ತಂದಿದೆ: “ಮಾಜಿ ಸಿಎಂ ದೇವರಾಜ ಅರಸು ಅವರ ನಂತರ ಮುಖ್ಯಮಂತ್ರಿ ಅಧಿಕಾರಾವಧಿಯನ್ನು 5 ವರ್ಷ ಪೂರ್ಣಗೊಳಿ  ಸುವ ಅವಕಾಶ ನನಗೆ ಸಿಕ್ಕಿದ್ದು, ನನ್ನ ಆಡಳಿತ ತೃಪ್ತಿ ತಂದಿದೆ. ಪ್ರತಿಯೊಬ್ಬರಿಗೂ ಎರಡು ಹೊತ್ತು ಊಟ ಮಾಡುವ ಹಕ್ಕಿದೆ. ಹಸಿವು ಮುಕ್ತ ಕರ್ನಾಟಕ ನಿರ್ಮಿಸಬೇಕೆನ್ನುವ ಉದ್ದೇಶದಿಂದ ಅನ್ನಭಾಗ್ಯ ಯೋಜನೆಗೆ ಆದ್ಯತೆ ನೀಡಲಾುತು. ಪ್ರತಿ ಕುಟುಂಬಕ್ಕೆ 7 ಕೆ.ಜಿ.ಅಕ್ಕಿಯನ್ನು ಉಚಿತ ವಾಗಿ ನೀಡುವ ಯೋಜನೆ ದೇಶದ ಇತರ ಯಾವುದೇ ರಾಜ್ಯಗಳಲ್ಲೂ ಇಲ್ಲ’ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಟ್ವಿಟರ್‌ ಹೇಳಿಕೆಗೆ ಪ್ರತಿಕ್ರಿಯಿಸಿ, ಆಹಾರ ಪದ್ಧತಿ ವಿಚಾರದಲ್ಲಿ ಯಾರೂ, ಯಾರನ್ನೂ ಪ್ರಶ್ನಿಸುವಂತಿಲ್ಲ. ಏನು ತಿನ್ನಬೇಕು, ಯಾವ ಬಟ್ಟೆ ತೊಡಬೇಕು ಎನ್ನುವ ಬಗ್ಗೆ ಇನ್ನೊಬ್ಬರ ಸಲಹೆಯ ಅಗತ್ಯವಿಲ್ಲ ಎಂದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.