ರಾಜ್ಯ ಸರ್ಕಾರಕ್ಕೆ ಶಾ ಮಾತಿನೇಟು
Team Udayavani, Jan 11, 2018, 6:00 AM IST
ಹೊಳಲ್ಕೆರೆ(ಚಿತ್ರದುರ್ಗ): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತೆ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ರಾಜ್ಯದಲ್ಲಿ ಹಿಂದೂ ವಿರೋಧಿ ಮತ್ತು ಭ್ರಷ್ಟ ಆಡಳಿತ ನಡೆಸುತ್ತಿರುವ ಈ ಸರ್ಕಾರದ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ. ಆ ಮೂಲಕ ಕಾಂಗ್ರೆಸ್ ಮುಕ್ತ ಭಾರತಕ್ಕೆ ಅಂತಿಮ ವೇದಿಕೆ ಸಿದ್ಧವಾಗಲಿದೆ ಎಂದು ಹೇಳಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯುತ್ತಿರುವ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ 69 ದಿನಗಳನ್ನು ಪೂರೈಸುತ್ತಿದ್ದು, ಸುಮಾರು 8000 ಕಿ.ಮೀ. ಸಂಚರಿಸಿ 174 ವಿಧಾನಸಭಾ ಕ್ಷೇತ್ರಗಳಲ್ಲಿ ಸಮಾವೇಶ ನಡೆಸಲಾಗಿದೆ. ಎಲ್ಲೆಡೆ ಯುವಕರು, ಮಹಿಳೆಯರು, ರೈತರು ರಾಜ್ಯ ಸರ್ಕಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಸಿಡಿದೇಳಲು ಸಿದ್ಧರಾಗಿದ್ದಾರೆ. ಇದನ್ನು ನೋಡಿದಾಗ ಸರ್ಕಾರ ಪತನಕ್ಕೆ ಕ್ಷಣಗಣನೆ ಆರಂಭವಾಗಿರುವುದು ಸ್ಪಷ್ಟವಾಗಿದೆ ಎಂದರು.
ರಾಜ್ಯ ಬಿಜೆಪಿ ಹಮ್ಮಿಕೊಂಡರುವ ಪರಿವರ್ತನಾ ಯಾತ್ರೆ ಅಂಗವಾಗಿ ಹೊಳಲ್ಕೆರೆಯಲ್ಲಿ ಬುಧವಾರ ನಡೆದ ಬೃಹತ್ ಸಮಾವೇಶದಲ್ಲಿ ಅವರು ಮಾತನಾಡಿದರು. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 14ನೇ ಹಣಕಾಸು ಆಯೋಗದ ಮೂಲಕ ಕರ್ನಾಟಕಕ್ಕೆ 2,19,506 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಅಲ್ಲದೆ, ಇತರೆ ಯೋಜನೆಗಳ ಮೂಲಕ ಹೆಚ್ಚುವರಿಯಾಗಿ ನೀಡಿರುವ 79 ಸಾವಿರ ಕೋಟಿ ರೂ. ಸೇರಿ ಒಟ್ಟಾರೆ 3 ಲಕ್ಷ ಕೋಟಿ ರೂ. ಬಂದಿದೆ. ಆದರೆ, ಈ ಹಣದಲ್ಲಿ ಬಹುಪಾಲನ್ನು ಭ್ರಷ್ಟಾಚಾರಕ್ಕೆ ಬಳಸಿಕೊಂಡ ರಾಜ್ಯ ಸರ್ಕಾರ ಜನರಿಗೆ ಯೋಜನೆಗಳನ್ನು ತಲುಪಿಸಲಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ