ಹಿಂದುತ್ವ ಪ್ರತಿಪಾದಕರನ್ನು ಉಗ್ರರು ಎಂದಿದ್ದೇನೆ


Team Udayavani, Jan 12, 2018, 6:20 AM IST

Ban12011806Medn.jpg

ಮೈಸೂರು/ಹನೂರು: “ಆರ್‌ಎಸ್‌ಎಸ್‌, ಬಿಜೆಪಿ ಮತ್ತು ಭಜರಂಗದಳದವರನ್ನು ನಾನು ಉಗ್ರಗಾಮಿಗಳು ಎಂದು
ಕರೆದಿಲ್ಲ. ಹಿಂದುತ್ವ ಪ್ರತಿಪಾದಕರನ್ನು ಉಗ್ರವಾದಿಗಳು ಎಂದು ಹೇಳಿದ್ದೇನೆ’ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಚಾಮರಾಜನಗರದಲ್ಲಿ ಬುಧವಾರಮಾತನಾಡಿದ್ದ ಅವರು, ಆರ್‌ಎಸ್‌ಎಸ್‌, ಬಿಜೆಪಿ ಮತ್ತು ಭಜರಂಗ ದಳದವರು ಒಂದು ರೀತಿಯಲ್ಲಿ ಉಗ್ರಸಂಘಟನೆಗಳಿದ್ದಂತೆ ಎಂದಿದ್ದರು. ಇದು ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಗುರುವಾರ ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, “ಆರ್‌ಎಸ್‌ಎಸ್‌, ಬಿಜೆಪಿ ಮತ್ತು ಭಜರಂಗ ದಳದವರನ್ನು ನಾನು ಉಗ್ರಗಾಮಿಗಳು ಎಂದು ಕರೆದಿಲ್ಲ.
ಹಿಂದುತ್ವ ಪ್ರತಿಪಾದಕರನ್ನು ಉಗ್ರವಾದಿಗಳು ಎಂದು ಹೇಳಿದ್ದೇನೆ’ ಎನ್ನುವ ಮೂಲಕ ತಮ್ಮ ಹೇಳಿಕೆಗೆ ಉಲ್ಟಾ ಹೊಡೆದರು.

ಜತೆಗೆ, “ಹೆಣದ ಮೇಲೆ ರಾಜಕೀಯ ಮಾಡುವವರನ್ನು ಏನೆಂದು ಕರೆಯಬೇಕು? ಸಾವಿನ ಮನೆಯಲ್ಲಿ ರಾಜಕಾರಣ
ಮಾಡುತ್ತಿರುವವರು ಯಾರು? ಅವರನ್ನು ಉಗ್ರಗಾಮಿಗಳು ಎನ್ನದೆ ಮತ್ತೇನೆಂದು ಹೇಳಬೇಕು? ಯಾರು ಉಗ್ರ ಚಟುವಟಿಕೆಯಲ್ಲಿ ತೊಡಗಿರುತ್ತಾರೋ ಅವರು ಉಗ್ರರಲ್ಲದೇ ಬೇರೇನು?’ ಎಂದು ಪ್ರಶ್ನಿಸುವ ಮೂಲಕ ತಮ್ಮ ಹೇಳಿಕೆಗೆ ಸಮರ್ಥನೆ ನೀಡಿದರು. ರಾಜ್ಯದಲ್ಲಿ ಪಿಎಫ್ಐ, ಎಸ್‌ಡಿಪಿಐ ಮಾತ್ರವಲ್ಲದೆ ಕೋಮು ಸಾಮರಸ್ಯವನ್ನು ಹಾಳು ಮಾಡುವ ಪ್ರತಿಯೊಂದು ಸಂಘಟನೆಗಳ ವಿರುದಟಛಿವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ನಾವೂ ಹಿಂದುಗಳು: “ನಾವೂ ಕೂಡ ಹಿಂದುಗಳೆ. ನಾವು ಮನುಷ್ಯತ್ವ ಇರುವ ಹಿಂದುಗಳು, ಅವರು ಮನುಷ್ಯತ್ವ ಇಲ್ಲದಿರುವ ಹಿಂದುಗಳು. ಬಿಜೆಪಿಯವರು ಕೋಮು ಭಾವನೆ ಕೆರಳಿಸುವ ಮೂಲಕ ಮತಗಳ ಧೃವೀಕರಣಕ್ಕೆ ಮುಂದಾಗಿದ್ದು, ಇದರಿಂದ ಅವರಿಗೆ ಲಾಭವಾಗಲಿದೆ ಎಂದು ಭಾವಿಸಿದ್ದಾರೆ. ಆದರೆ, ಇದರಿಂದ ಅವರಿಗೆ ಯಾವುದೇ ಲಾಭವಾಗುವುದಿಲ್ಲ. ಬದಲಿಗೆ ಅವರಿಗೆ ಅದು ಮುಳುವಾಗಲಿದೆ’ ಎಂದರು. ಚುನಾವಣೆ ಸಮೀಪಿಸುತ್ತಿದ್ದಂತೆ ಮುಖ್ಯಮಂತ್ರಿಯವರು ದೇವಾಲಯಗಳಿಗೆ ಹೆಚ್ಚು ಸುತ್ತಾಡುತ್ತಿದ್ದಾರೆ ಎಂಬ ಟೀಕೆಗೆ ಪ್ರತಿಕ್ರಿಯಿಸಿ, “ನಾನು ದೇಗುಲಗಳಿಗೆ ತೆರಳುವುದಿಲ್ಲ ಎಂದು ಎಲ್ಲಿಯೂ ಹೇಳಿಲ್ಲ. ದೇವಾಲಯಗಳಿಗೆ ತೆರಳುತ್ತೇನೆ. ಆದರೆ ಕಡಿಮೆ. ಪ್ರವಾಸದ ಸಂದರ್ಭಗಳಲ್ಲಿ ದೇವಾಲಯಗಳಿಗೆ ಭೇಟಿ ನೀಡುತ್ತೇನೆ’ ಎಂದರು.

ಮಾದಪ್ಪನಿಗೆ ಸಿಎಂ
ವಿಶೇಷ ಪೂಜೆ ಪ್ರಸಿದಟಛಿ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಪಟ್ಟಣದಲ್ಲಿ ನಡೆದ ಸಾಧನಾ ಸಮಾವೇಶದ ಬಳಿಕ ಬುಧವಾರ ತಡರಾತ್ರಿಯೇ ಶ್ರೀಕ್ಷೇತ್ರಕ್ಕೆ ಬಂದು ವಾಸ್ತವ್ಯ ಹೂಡಿದ್ದ ಸಿದ್ದರಾಮಯ್ಯ, ಗುರುವಾರ ಬೆಳಗ್ಗೆ ಮಲೆ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು. ಬಳಿಕ, ಬೆಂಗಳೂರಿನ ಚಾಮರಾಜಪೇಟೆಯ ಮಲೆ ಮಹದೇಶ್ವರ ಟ್ರಸ್ಟ್‌ ನಿರ್ಮಿಸಿದ್ದ ಕನಕ ಭವನ ಮತ್ತು ಕನಕದಾಸರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಕಂಸಾಳೆ ಬಾರಿಸಿ ಹರ್ಷ ವ್ಯಕ್ತಪಡಿಸಿದರು.

ಬೆಳ್ಳಿರಥಕ್ಕೆ ಗದೆ,
ಕಿರೀಟ ಕೊಡ್ತೇನೆ

ಇದೇ ವೇಳೆ, ಮಲೆ ಮಹದೇಶ್ವರ ಬೆಟ್ಟದ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ, ಕ್ಷೇತ್ರದಲ್ಲಿ ಬೆಳ್ಳಿರಥ ನಿರ್ಮಿಸಲು ಒಪ್ಪಿಗೆ ಸೂಚಿಸಿದರು. ರಥ ನಿರ್ಮಾಣಕ್ಕಾಗಿ ಸುಮಾರು 400 ಕೆ.ಜಿ.ಬೆಳ್ಳಿಯ ಅವಶ್ಯಕತೆ ಇದೆ. ಈಗಾಗಲೇ 800 ಕೆ.ಜಿ.ಬೆಳ್ಳಿ ಪ್ರಾಧಿಕಾರದಲ್ಲಿ ಇದೆ. ದಾನಿಗಳು ಬೆಳ್ಳಿ ನೀಡಲು ಮುಂದಾದಲ್ಲಿ ಅದನ್ನೂ ಸ್ವೀಕರಿಸಿ. ತಮಗೆ ಉಡುಗೊರೆಯಾಗಿ ಬಂದಿರುವ ಬೆಳ್ಳಿಗದೆ, ಕಿರೀಟ, ಇನ್ನಿತರ ಬೆಳ್ಳಿ ಪದಾರ್ಥಗಳನ್ನು ನೀಡುತ್ತೇನೆ ಎಂದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.