ಮಹದಾಯಿಗಾಗಿ ರೈತರ ಧರಣಿ
Team Udayavani, Jan 12, 2018, 6:45 AM IST
ಬೆಂಗಳೂರು: ಮಹದಾಯಿ ವಿವಾದ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಬಳಿಗೆ ಸರ್ವ ಪಕ್ಷ ನಿಯೋಗ ಕರೆದು ಕೊಂಡು ಹೋಗುವಂತೆ ಒತ್ತಾಯಿಸಿ ಮಹದಾಯಿ ಹೋರಾಟಗಾರರು ಸಿಎಂ ಮನೆ ಮುಂದೆ ಧರಣಿ ನಡೆಸಿದರು.
ಸಿಎಂ ನಿವಾಸದ ಎದುರು ಧರಣಿಗೆ ಪೋಲಿಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಕುಮಾರಕೃಪಾ ಅತಿಥಿ ಗೃಹದ ಎದುರು ಧರಣಿ ಕುಳಿತರು. ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಇಲ್ಲದ ಕಾರಣ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಧರಣಿ ನಿರತ ರೈತರನ್ನು ಮೈಸೂರಿಗೆ ಕರೆದುಕೊಂಡು ಹೋಗಿ ಸಿಎಂ ಭೇಟಿ ಮಾಡಿಸಿದರು.