ಎಡ-ಬಲ ಹೆಸರಲ್ಲಿ ಬರಹಗಾರರ ದಾರಿ ತಪ್ಪಿಸೋ ಕೆಲ್ಸ: ಭೈರಪ್ಪ ಕಳವಳ


Team Udayavani, Jan 13, 2018, 6:05 AM IST

Ban13011806Medn.jpg

ಬೆಂಗಳೂರು: ವಿಶ್ವವಿದ್ಯಾಲಯಗಳಲ್ಲಿಯೂ ಯುವ ಬರಹಗಾರರನ್ನು ಎಡ-ಬಲ ಹೆಸರಿನಲ್ಲಿ ದಾರಿ ತಪ್ಪಿಸುವ ಕೆಲಸವಾಗುತ್ತಿದ್ದು, ಪುಸ್ತಕ ಬರೆದ ಕೂಡಲೇ ಅದು ಇಂತವರು ಬರೆದ ಪುಸ್ತಕ ಓದಬೇಡಿ, ಇದು ಓದಿ ಎಂದು ಪ್ರಚಾರ ಮಾಡುವ ಪ್ರವೃತ್ತಿ ಆರಂಭವಾಗಿದೆ ಎಂದು ಸಾಹಿತಿ ಡಾ.ಎಸ್‌.ಎಲ್‌.ಭೈರಪ್ಪ ಕಳವಳ ವ್ಯಕ್ತಪಡಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವತಿಯಿಂದ ಗುರುವಾರ ನಗರ ಟೌನ್‌ಹಾಲ್‌ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ನೃಪತುಂಗ ಸಾಹಿತ್ಯ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದ ಅವರು, ವಿದ್ಯಾಲಯದಲ್ಲಿ ಪದ್ಯ ಬರೆಯಲು ಬಳಸಬೇಕಾದ ಭಾಷೆ, ಛಂದಸ್ಸು, ವ್ಯಾಕರಣ ಹೇಳಿಕೊಡುವ ಬದಲು ಎಡ – ಬಲ ಕುರಿತು ಯುವ ಬರಹಗಾರರಿಗೆ ತಿಳಿಸುವುದರಿಂದ ಭವಿಷ್ಯದಲ್ಲಿ ದೊಡ್ಡ ಸಾಹಿತಿಗಳಾಗಬೇಕಾದರು ದಾರಿ ತಪ್ಪುತ್ತಿದ್ದಾರೆ ಎಂದರು.

ಸಾಹಿತ್ಯ ಸಮ್ಮೇಳನಗಳಲ್ಲಿಯೂ ಯುವಬರಹಗಾರರ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದ್ದು, ರಷ್ಯಾದಲ್ಲಿ ಪ್ರತಿಯೊಬ್ಬ ಕೆಲಸಗಾರನೂ ಕೆಲಸದೊಂದಿಗೆ ಸಿದ್ಧಾಂತರ ಪ್ರಚಾರ ಮಾಡುವ ಕೆಲಸ ಮಾಡಬೇಕು ಎಂಬುದು ಕಮ್ಯುನಿಸ್ಟ್‌ ಸಿದ್ದಾಂತವಾಗಿತ್ತು. ಅದರಂತೆ ಸಾಹಿತ್ಯದ ಮೂಲಕ ಸಮಾಜ ಉದ್ಧಾರ ಮಾಡಬೇಕು, ಕ್ರಾಂತಿ ತರಬೇಕು. ಸಾಹಿತ್ಯದ ಮೂಲಕ ಸಮಾಜ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಅವರು ಸಾಹಿತಿಗಳೇ ಅಲ್ಲ ಎಂಬ ಪ್ರವೃತ್ತಿ ಭಾರತಕ್ಕೂ ಆಮದಾಗಿದೆ ಎಂದರು.

ಅದರೆ, ಆರೋಗ್ಯ ಸರಿಯಿಲ್ಲದಿದ್ದರೆ ವೈದ್ಯರ್ಯ ಚಿಕಿತ್ಸೆ ನೀಡುತ್ತಾರೆ, ನೀರಿನ ಸಮಸ್ಯೆಯನ್ನು ಎಂಜಿನಿಯರ್‌ಗಳು ಪರಿಹರಿಸುತ್ತಾರೆ, ಉದ್ಯೋಗ ಸಮಸ್ಯೆಗೆ ಸರ್ಕಾರಗಳು ಕ್ರಮಕೈಗೊಳ್ಳುತ್ತವೆಯೇ ಹೊರತು, ಇವೆಲ್ಲದರ ಕುರಿತು ಕಾದಂಬರಿ ಬರೆಯುವುದರಿಂದ ಸಮಾಜ ಬದಲಾಗುವುದಿಲ್ಲ ಎಂಬುದನ್ನು ಅರಿಯಬೇಕಿದೆ ಎಂದು ಹೇಳಿದರು.

ಸಮ್ಮೇಳನಗಳಲ್ಲಿಯೂ ಎಡ-ಬಲ
ಇಂದು ಸಾಹಿತ್ಯ ಸಮ್ಮೇಳನ ಎಂದರೂ ಎಡ-ಬಲ ಎಂತಾಗಿದ್ದು, ಒಂದು ಪಕ್ಷವನ್ನು ಬೆಂಬಲಿಸುವ ಮತ್ತು ಮತ್ತೂಂದನ್ನು ವಿರೋಧಿಸುವ ಕಾರ್ಯಕ್ರಮದಂತಾಗಿದೆ.  ಈ ಎಲ್ಲ ಗೌಜು-ಗದ್ದಲಗಳ ನಡುವೆಯೂ ತನ್ನ ದಾರಿ ಯಾವುದು, ಏನು ಮಾಡಬೇಕು ಎಂದು ಆರಂಭದ ದೆಸೆಯಲ್ಲಿರುವ ಯುವ ಬರಹಗಾರರಿಗೆ ಗೊಂದಲವಾಗುತ್ತದೆ ಎಂದರು.

1999ರಲ್ಲಿ ಕನಕಪುರದಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಅತ್ಯಂತ ಉತ್ಕೃಷ್ಟವಾದ ನನ್ನ 28 ಪುಟಗಳ ಶುದ್ಧ ಸಾಹಿತ್ಯದ ಗುಣಲಕ್ಷಗಳ ಕುರಿತ ಅಧ್ಯಕ್ಷೀಯ ಭಾಷಣವನ್ನು ಮೊದಲು ಮೆಚ್ಚಿಕೊಂಡು, ನಂತರದಲ್ಲಿ ಅದನ್ನು ಸುಟ್ಟು ಪ್ರಚಾರ ಪಡೆದುಕೊಂಡಿದ್ದರು. ಸಮ್ಮೇಳನದ ಸಮಾರೋಪ ಭಾಷಣದಲ್ಲಿ ಅದಕ್ಕೆ “ಬೆಂಕಿ ಹಾಕುವುದು ಅವರ ಮಾಧ್ಯಮ, ಬರೆಯುವುದು ನನ್ನ ಮಾಧ್ಯಮ’ ಎಂದು ಉತ್ತರ ನೀಡಿದ್ದೆ ಎಂದು ಸ್ಮರಿಸಿದರು.

ನಾನು ಶುದ್ಧ ಸಾಹಿತ್ಯದಲ್ಲಿ ನಂಬಿಕೆ ಇರಿಸಿದ್ದು, ಎಲ್ಲ ಕಲಾ ಪ್ರಕಾರಗಳ ಪೈಕಿ ಸಂಗೀತದಲ್ಲಿ ಅದರಲ್ಲಿಯೂ ಶಾಸ್ತ್ರೀಯ ಸಂಗೀತದಲ್ಲಿ ಮಾತ್ರ ಇಂದಿಗೂ ಶುದ್ಧ ಭಾವನೆ ಜೀವಂತವಾಗಿದೆ. ಅದೇ ಶುದ್ಧತೆಯ ರಸ ಸಾಹಿತ್ಯದಲ್ಲಿ ಬರುವಾಗ ಜೀವನದ ಬೇರೆ ಬೇರೆ ಸಮಸ್ಯೆಗಳು ಸೇರಿ ಪರಿಶುದ್ಧವಾಗುವುದಿಲ್ಲ. ಯುವಕರು ಆ ಪರಿಶುದ್ಧತೆ ಮಟ್ಟವನ್ನು ತಲುಪಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು.

ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ಮಾತನಾಡಿ, ಬಿಎಂಟಿಸಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯುವ ಲೇಖಕರನ್ನು ಉತ್ತೇಜಿಸಲು ಸಾಹಿತ್ಯ ಸಮಾವೇಶಕ್ಕೆ 25 ಲಕ್ಷ ರೂ. ಹಾಗೂ ಕನ್ನಡ ಭವನ ನಿರ್ಮಾಣಕ್ಕಾಗಿ 5 ಕೋಟಿ ರೂ. ನೀಡಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಯುವ ಸಾಹಿತಿಗಳಾದ ಎಸ್‌.ರಾಮಲಿಂಗೇಶ್ವರ, ಡಾ.ಸಿ.ನಂದಿನಿ, ಶಾಂತಿ ಕೆ.ಅಪಣ್ಣ, ಗುರಪ್ಪ ಗಾಣಿಗೇರ ಅವರಿಗೆ ತಲಾ 25 ಸಾವಿರ ರೂ. ನಗದು ಸಹಿತ “ಮಯೂರವರ್ಮ ಸಾಹಿತ್ಯ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ನೃಪತುಂಗ ಸಾಹಿತ್ಯ ಪ್ರಶಸ್ತಿಯು 7 ಲಕ್ಷದ ಒಂದು ರೂಪಾಯಿ ನಗದು ಒಳಗೊಂಡಿದೆ.

ಈ ವೇಳೆ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್‌, ಸಾಹಿತಿ ಪ್ರಧಾನ ಗುರುದತ್‌, ಬಿಎಂಟಿಸಿ ಅಧ್ಯಕ್ಷ ನಾಗರಾಜ್‌ ಯಾದವ್‌, ಉಪಾಧ್ಯಕ್ಷ ಗೋವಿಂದರಾಜು, ಕೇಂದ್ರ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ವ.ಚ.ಚನ್ನೇಗೌಡ ಹಾಜರಿದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.