ಶಿವಮೊಗ್ಗ:ಭೀಕರ ಅಪಘಾತದಲ್ಲಿ ಯುವಕರಿಬ್ಬರ ದುರ್ಮರಣ
Team Udayavani, Jan 17, 2018, 9:33 AM IST
ಶಿವಮೊಗ್ಗ: ಆಯನೂರಿನ ವೀರಣ್ಣನ ಬೆನವಳ್ಳಿ ಬಳಿ ಖಾಸಗಿ ಬಸ್ಸೊಂದು ಢಿಕ್ಕಿಯಾಗಿ ಬೈಕ್ನಲ್ಲಿದ್ದ ಸವಾವರರಿಬ್ಬರು ದಾರುಣವಾಗಿ ಸಾವನ್ನಪ್ಪಿದ ದುರ್ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.
ಮೃತ ದುರ್ದೈವಿಗಳು ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಅಮಿತ್ ಮತ್ತು ಜಾನ್ಸನ್ ಎಂದು ತಿಳಿದು ಬಂದಿದೆ.
ಅಪಘಾತದ ತೀವ್ರತೆಗೆ ಜಾನ್ಸನ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಮಿತ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವ ಬಗ್ಗೆ ವರದಿಯಾಗಿದೆ.
ಅವಘಡ ನಡೆದ ಸ್ಥಳದಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿದ್ದು ಅಪಘಾತ ವಲಯ ಎಂದು ಘೋಷಿಸಲು ಸ್ಥಳೀಯರು ಒತ್ತಾಯಿಸಿದ್ದಾರೆ.
ಕುಂಸಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ