ಮಹದಾಯಿ ವಿವಾದ: ಉಲ್ಟಾ ಹೊಡೆದ ಪರ್ರಿಕ್ಕರ್
Team Udayavani, Jan 19, 2018, 6:55 AM IST
ಪಣಜಿ: ಮಹದಾಯಿ ನದಿಯ 45 ಎಂಎಲ್ಡಿ ನೀರನ್ನು ಗೋವಾದಲ್ಲಿ ಕುಡಿಯಲು ಬಳಸಲಾಗುತ್ತಿದೆ. ಇದನ್ನು ಹೊರತುಪಡಿಸಿ ಕೃಷಿ ಚಟುವಟಿಕೆಗಾಗಿಯೂ ಇದೇ ನೀರನ್ನು ಬಳಸಲಾಗುತ್ತಿದೆ ಎಂದು ಗೋವಾ ಮುಖ್ಯಮಂತ್ರಿ ಮನೋಹರ ಪರ್ರಿಕರ್ ತಿಳಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಓಪಾ ನೀರಿನ ಸಂಸ್ಕರಣಾ ಘಟಕ ಹಾಗೂ ಮೈಸಾಳ ಕುಡಿಯುವ ನೀರಿನ ಸಂಸ್ಕರಣಾ ಘಟಕಕ್ಕೆ ಮಹದಾಯಿ ನೀರನ್ನೇ ಪಡೆಯಲಾಗುತ್ತಿದೆ. ಇದರಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ಗೋವಾದಲ್ಲಿ ಮಹದಾಯಿ ನೀರು ಬಳಕೆಯಾಗುತ್ತಿದೆ. ಇಷ್ಟೇ ಅಲ್ಲದೇ ಕೃಷಿ ಕ್ಷೇತ್ರಕ್ಕೆ ಬಳಕೆ ಮಾಡಲು ಅಲ್ಲಲ್ಲಿ ಬಾಂದಾರ ನಿರ್ಮಿಸಿ ನೀರನ್ನು ಪಡೆಯಲಾಗುತ್ತಿದೆ. ಇದೀಗ ಇನ್ನೂ ಕೆಲವೆಡೆ ಬಾಂದಾರ ನಿರ್ಮಿಸಲು ಯೋಜನೆ ರೂಪಿಸಲಾಗುವುದು ಎಂದರು.
ಮುಖ್ಯಮಂತ್ರಿ ಪರ್ರಿಕರ್ ಕರ್ನಾಟಕಕ್ಕೆ ಪತ್ರ ಬರೆದ ನಂತರ ಮಹದಾಯಿ ನದಿ ನೀರನ್ನು ಕರ್ನಾಟಕಕ್ಕೆ ಬಿಡುವುದು ಅನಿವಾರ್ಯವಾಗಿದೆ ಎಂದು ಮತ್ತೆ ಹೇಳಿಕೆ ನೀಡಿದ್ದರು. ಆದರೆ, ಇದೀಗ ಇವೆಲ್ಲವನ್ನೂ ಬುಡಮೇಲು ಮಾಡುವ ರೀತಿಯಲ್ಲಿ ಉಲ್ಟಾ ಹೊಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!