ಚಿರತೆ ದಾಳಿಗೆ ಮಹಿಳೆ ಬಲಿ
Team Udayavani, Jan 19, 2018, 6:30 AM IST
ರಾಮನಗರ: ಹಸು ಮೇಲೆ ದಾಳಿ ಮಾಡಿದ ಚಿರತೆಗೆ ಪ್ರತಿರೋಧ ಒಡ್ಡಿದ ಮಹಿಳೆಯ ಮೇಲೆ ಎರಗಿದ ಚಿರತೆಯೊಂದು ಆಕೆಯನ್ನು ಬಲಿತೆಗೆದುಕೊಂಡ ಘಟನೆ ತಾಲೂಕಿನ ಚಿಕ್ಕಸೂಲಿಕರೆ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಗ್ರಾಮದ ಪುಟ್ಟಹಲಗಮ್ಮ (40) ಚಿರತೆ ದಾಳಿಗೆ ಬಲಿಯಾಗಿರುವ ಮಹಿಳೆ. ಹಸುಗಳನ್ನು ಮೇಯಿಸಲು ಗ್ರಾಮದ ಬಳಿ ಇರುವ ಅರಣ್ಯ ಪ್ರದೇಶಕ್ಕೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಹಸುವೊಂದರ ಮೇಲೆ ಎರಗಿದ ಚಿರತೆಯನ್ನು ಕಂಡ ಪುಟ್ಟಹಲಗಮ್ಮ ಕೂಗಿಕೊಂಡು ಚಿರತೆಗೆ ಪ್ರತಿರೋಧ ಒಡ್ಡಿದರು. ಇದರಿಂದ ಆಕ್ರೋಶಗೊಂಡ ಚಿರತೆ ಹಸುವನ್ನು ಬಿಟ್ಟು ಪುಟ್ಟಹಲಗಮ್ಮನ ಮೇಲೆ ಎರಗಿತು. ತಕ್ಷಣ ಅಲ್ಲೇ ಇದ್ದ ಈಕೆಯ ಪತಿ ಶಿವಪ್ಪಕಿರುಚಾಡಿದರು. ಕೂಗಾಟ ಕೇಳಿ ಗ್ರಾಮಸ್ಥರು ಆಗಮಿಸಿದರಾದರೂ ಅಷ್ಟರಲ್ಲಾಗಲೆ ಚಿರತೆ ಪುಟ್ಟಹಲಗಮ್ಮ ಅವರ ದೇಹವನ್ನು ಕಚ್ಚಿಕೊಂಡು ಕರಡಿ ಹಳ್ಳದ ಬಳಿಯ ಗವಿಯ ಬಳಿಗೆ ಎಳೆದೊಯ್ದಿತ್ತು. ಬಳಿಕ, ಜನರ ಕೂಗಾಟ ಕೇಳಿ ಚಿರತೆ ದೇಹವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ