ಮಹದಾಯಿ ವಿವಾದ: ಜನವರಿ 27 ಕ್ಕೆ ಸರ್ವ ಪಕ್ಷದ ಸಭೆ
Team Udayavani, Jan 19, 2018, 6:00 AM IST
ಬೆಂಗಳೂರು: ಮಹದಾಯಿ ನದಿ ನೀರಿನ ವಿವಾದ ಕುರಿತು ಚರ್ಚಿಸಲು ಜನವರಿ 27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವ ಪಕ್ಷದ ಮುಖಂಡರ ಸಭೆ ನಡೆಸಲು ತೀರ್ಮಾನಿಸಿದ್ದಾರೆ.
ಮಹದಾಯಿ ವಿವಾದ ನ್ಯಾಯಮಂಡಳಿಯಲ್ಲಿದ್ದು, ನ್ಯಾಯಮಂಡಳಿ ಗೋವಾ, ಮಹಾರಾಷ್ಟ್ರ ಹಾಗೂ ಕರ್ನಾಟಕ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮಾತುಕತೆಯ ಮೂಲಕ ವಿವಾದ ಬಗೆ ಹರಿಸಿಕೊಳ್ಳುವಂತೆ ಸಲಹೆ ನೀಡಿದೆ. ಈ ಹಿನ್ನೆಲೆಯಲ್ಲಿ ಗೋವಾ ಸರ್ಕಾರಕ್ಕೆ ರಾಜ್ಯ ಸರ್ಕಾರ ಮೂರು ಬಾರಿ ಪತ್ರ ಬರೆದರೂ, ಗೋವಾ ಸರ್ಕಾರ ಸೂಕ್ತವಾಗಿ ಸ್ಪಂದಿಸದೇ ಇರುವುದರಿಂದ ರಾಜ್ಯದ ಮುಂದಿನ ನಡೆ ಏನಿರಬೇಕು ಎನ್ನುವ ಕುರಿತಂತೆ ಪ್ರತಿಪಕ್ಷಗಳ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ಮುಖ್ಯಮಂತ್ರಿ ಸಭೆ ಕರೆದಿದ್ದಾರೆ.
ಈಗಾಗಲೇ ಮಹದಾಯಿ ಹೋರಾಟಗಾರರು ಈ ವಿವಾದ ಬಗೆ ಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆಗೆ ರಾಜ್ಯ ಸರ್ಕಾರ ಸರ್ವ ಪಕ್ಷದ ನಿಯೋಗ ತೆಗೆದುಕೊಂಡು ಹೋಗಬೇಕೆಂದು ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹಿಸುವ ಕುರಿತಂತೆಯೂ ಜನವರಿ 27 ರಂದು ನಡೆಯುವ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ