ಸಮುದ್ರಕ್ಕೆ ನೀರು ಪೋಲು ಅನ್ನೋದೇ ದಡ್ಡತನ


Team Udayavani, Jan 21, 2018, 6:20 AM IST

180120kpn96.jpg

ಬೆಂಗಳೂರು: ಕುಡಿಯುವ ನೀರಿನ ಹಾಗೂ ನೀರಾವರಿ ಯೋಜನೆಗಳ ವಿಚಾರ ಬಂದಾಗೆಲ್ಲ “ಸಮುದ್ರಕ್ಕೆ ನೀರು
ಹರಿದು ಪೋಲಾಗುತ್ತದೆ’ ಎಂದು ವಾದಿಸುವುದು ದಡ್ಡತನ. ಜನರಿಗೆ ಇದನ್ನು ಹೇಗೆ ತಿಳಿಸಬೇಕು ಅನ್ನುವುದೇ ಗೊತ್ತಾಗುತ್ತಿಲ್ಲ ಎಂದು ವನ್ಯಜೀವಿ ತಜ್ಞರಾದ ಕೃಪಾಕರ-ಸೇನಾನಿ ಅಭಿಪ್ರಾಯಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ  “ಮನೆಯಂಗಳದಲ್ಲಿ ಮಾತುಕತೆ’ ಸಂವಾದದಲ್ಲಿ ತಮ್ಮ ಮೂರು ದಶಕಗಳ ಕಾಡಿನ ಜೀವನ, ವನ್ಯಜೀವಿಗಳ ಪ್ರಪಂಚ ಹಾಗೂ ಅರಣ್ಯವಾಸಿಗಳ ಜೊತೆಗಿನ ಒಡನಾಟ,ಪರಿಸರ, ಅಂತರ್ಜಲ ಹಾಗೂ ನೀರಿನ ಸಮಸ್ಯೆಗಳ ಬಗ್ಗೆ ತಮಗಿರುವ ಆತಂಕ ತೋಡಿಕೊಂಡರು.

ಸಂವಾದದಲ್ಲಿ ನೇತ್ರಾವತಿ ತಿರುವು ಯೋಜನೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕುಡಿಯುವ ನೀರು ಅಥವಾ ನೀರಾವರಿ ಯೋಜನೆಗಳ ವಿಚಾರ ಬಂದಾಗೆಲ್ಲ, “ಸಮುದ್ರಕ್ಕೆ ಹರಿದು ಪೋಲಾಗುತ್ತಿರುವ’ ನೀರನ್ನು ಬಳಸಿಕೊಳ್ಳಲಾಗುತ್ತದೆ ಎಂಬ ವಾದ ಕೇಳಿ ಬರುತ್ತವೆ. ಸಮುದ್ರಕ್ಕೆ ನೀರು ಹರಿದು ಪೋಲಾಗುತ್ತದೆ ಎಂದು ಹೇಳುವುದಕ್ಕಿಂತ ದಡ್ಡತನ ಮೊತ್ತೂಂದಿಲ್ಲ. ರಾಜಕಾರಣಿಗಳು ಈ ಮಾತು ಹೇಳಲಿ. ಆದರೆ, ರೈತರು,ಚಳವಳಿಗಾರರು, ಯೋಜನೆಯ ಫ‌ಲಾನುಭವಿಗಳು ಅಥವಾ ಬಾಧಿತರಾದವರು ಹೇಳಬಾರದು. ಇದನ್ನು ಅರ್ಥ ಮಾಡಿಸುವುದೇ ಕಷ್ಟವಾಗಿದೆ ಎಂದರು.

ನೀರನ್ನು ಟಿಎಂಸಿಗಳಲ್ಲಿ ಮಾತ್ರ ನೋಡಲಾಗುತ್ತದೆ. ಆದರೆ, ಆ ನೀರಿನ ಮೂಲಕ ಇಡೀ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳಬೇಕು, ನೀರಿನ ಮೂಲಗಳನ್ನು ಗೌರವವಿಸುವುದನ್ನು ನಾವು ಕಲಿಯಬೇಕು ಎಂದು ಸೇನಾನಿ ಉತ್ತರಿಸಿದರು.

ಕಾಡ್ಗಿಚ್ಚಿಗೆ ಮಾನವ ಅಥವಾ ಪ್ರಕೃತಿ ಕಾರಣವೇ ಎಂಬ ಪ್ರಶ್ನೆಗೆ, ದಕ್ಷಿಣ ಭಾರತದಲ್ಲಿ ಸಂಭವಿಸುವ ಕಾಡ್ಗಿಚ್ಚಿಗೆ ನೂರಕ್ಕೆ ನೂರು ಮಾನವ ಕಾರಣ. ಬಂಡೀಪುರದಲ್ಲಿ ನೂರಾರು ವರ್ಷಗಳಿಂದ ವರ್ಷಪೂರ್ತಿ ಹರಿಯುತ್ತಿದ್ದ ಐದು ಪ್ರಮುಖ ಝರಿಗಳು, ಕಳೆದ 10 ವರ್ಷಗಳಿಂದ ಹರಿಯುತ್ತಿಲ್ಲ. ವನ್ಯಜೀವಿ ಸಂಕುಲ, ಅರಣ್ಯ ರಕ್ಷಣೆಗೆ ಶಾಶ್ವತ ಪರಿಹಾರ ದೊರಕಿಸಲು ನಮ್ಮಿಬ್ಬರಿಂದ ಸಾಧ್ಯವಿಲ್ಲ ಎಂದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್‌.ಆರ್‌.ವಿಶುಕುಮಾರ್‌ ಉಪಸ್ಥಿತರಿದ್ದರು.

ಕಾಡು ಜನರೊಂದಿಗೆ ಸಂವೇದನೆ ಕಲಿತೆವು 
“ನಮ್ಮಿಬ್ಬರಿಗೂ ಇದ್ದ ಸಮಾನ ಅನುಕೂಲತೆ ಎಂದರೆ ಇಬ್ಬರ ಮನೆಯಲ್ಲೂ ನಮ್ಮ ಅಭಿರುಚಿಗೆ ಪೂರಕ ವಾತಾವರಣವಿತ್ತು. ಜೀವ ಸಂಕುಲದ ಬಗೆಗಿನ ಕೌತುಕಗಳೊಂದಿಗೆ 30 ವರ್ಷದ ಹಿಂದೆ ಕ್ಯಾಮೆರಾ ಹೊತ್ತು ಕಾಡಿನತ್ತ ಹೊರಟೆವು. ನಾವು ತರಸಗುಪ್ಪೆಗೆ ದೊಡ್ಡ ಬ್ಯಾಗ್‌ ಹೊತ್ತು ಹೋದಾಗ, ಶಾಲಾ ಮಕ್ಕಳು ನಾಟಕದ ಮೇಷ್ಟ್ರು ಎಂದರು. ಹಕ್ಕಿಗಳ ಫೋಟೋ ಸೆರೆ ಹಿಡಿಯಲು ಟೆಂಟ್‌ ಹಾಕಿ ಕುಳಿತಾಗ ಅಜ್ಜಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಹೆಂಗಸು “ಅಯ್ಯೋ ಬೇಟೆಯಾಡಿ ಹೊಟ್ಟೆ ತುಂಬಿಸಿಕೊಳ್ಳುವ ಸ್ಥಿತಿ ಬಂತಲ್ಲ’ ಎಂದು ಮರುಕಪಟ್ಟಿದ್ದರು. ಮದುಮಲೈ ಕಾಡಿಗೆ ಹೋದಾಗ ಕಾಡುವಾಸಿ ಬೊಮ್ಮ, ಚೆನ್ನ ಮತ್ತು ಕೃಷ್ಣನ ಒಡನಾಟದಿಂದ ನಮ್ಮ ದೃಷ್ಟಿಕೋನ ಬದಲಾಯಿತು. ಉತ್ತರ ಕರ್ನಾಟಕ ಭಾಗದಲ್ಲಿ ತೋಳಗಳ ಬಗ್ಗೆ ಅಧ್ಯಯನ ನಡೆಸಲು ಹೋದಾಗ, ಮಕ್ಕಳ ಕಳ್ಳರು, ಜಾನುವಾರು ಕಳ್ಳರು ಎಂದು ಅಲ್ಲಿನ ಜನ ಅನುಮಾನಿಸಿದ್ದರು ಎಂದು ಕೃಪಾಕರ ಸೇನಾನಿ ತಮ್ಮ ಅನುಭವ ಹಂಚಿಕೊಂಡರು.

ಕಂಪನಿಗಳಿಗೆ ಅರಣ್ಯ ಭೂಮಿ
ರಾಜ್ಯದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಣಿಗಾರಿಕೆ ನಿಷೇಧಿಸಿ, ಹುಲಿ ಸಂತತಿಗೆ ಹಾನಿ ಉಂಟಾಗುತ್ತಿದೆ ಎಂದು ಸುತ್ತಲಿನ ಅರಣ್ಯವಾಸಿಗಳಿಗೆ ಒಕ್ಕಲೆಬ್ಬಿಸಲಾಯಿತು. ಆದರೆ, ಮೂರೇ ತಿಂಗಳಲ್ಲಿ ಅಲ್ಲಿ ಅದಾನಿ ಕಂಪನಿಗೆ ಗುತ್ತಿಗೆ ನೀಡಲಾಯಿತು. ಈ ರೀತಿಯ ನಿರ್ಧಾರ ಮತ್ತು ಧೋರಣೆಗಳು ಇರುವಾಗ ಏನನ್ನು ನಿರೀಕ್ಷಿಸಲು ಸಾಧ್ಯ ಎಂದು ಸೇನಾನಿ ಪ್ರಶ್ನಿಸಿದರು.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.