ಸರ್ಕಾರಿ ಶಾಲೆಯಲ್ಲೂ ಎಲ್‌ಕೆಜಿ-ಯುಕೆಜಿ


Team Udayavani, Jan 22, 2018, 10:10 AM IST

22-11.jpg

ಬೆಂಗಳೂರು: ರಾಜ್ಯದ ಬಹುತೇಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಚಿಣ್ಣರ ಕಲರವ ಕೇಳಿಸಲಿದೆ. ಖಾಸಗಿ ಶಾಲೆಯ ಮಾದರಿಯಲ್ಲಿಯೇ ಸರ್ಕಾರಿ ಶಾಲೆಗಳಲ್ಲೂ ಪೂರ್ವ ಪ್ರಾಥಮಿಕ ತರಗತಿಗಳಾದ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ.

 ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಸೆಳೆಯಲು ಈ ಕ್ರಮಕ್ಕೆ ಸರ್ಕಾರ ಮುಂದಾಗಿದ್ದು, ಮೊದಲ ಹಂತದಲ್ಲಿ ರಾಜ್ಯದ ಐದು ಸಾವಿರ
ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಯನ್ನೂ ತೆರೆಯುವ ಪ್ರಸ್ತಾಪ ಸಿದ್ಧಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ
ಸಚಿವ ತನ್ವೀರ್‌ ಸೇಠ್ ಈ ಬಗ್ಗೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ್ದು ಈ ಬಗ್ಗೆ ಪ್ರಸ್ತಾಪ ಸಿದ್ಧಪಡಿಸಲಾಗಿದೆ.
ಫೆಬ್ರವರಿಯಲ್ಲಿ ಮಂಡನೆಯಾಗಲಿರುವ ರಾಜ್ಯ ಬಜೆಟ್‌ನಲ್ಲಿ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ ಇಲಾಖೆಯ ಉನ್ನತ ಮೂಲ “ಉದಯವಾಣಿ’ಗೆ ಸ್ಪಷ್ಟಪಡಿಸಿದೆ. 

ಪೂರ್ವ ಪ್ರಾಥಮಿಕ ಶಾಲೆ ಪ್ರಾರಂಭಿಸುವ ಸಲುವಾಗಿಯೇ ಈವರೆಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸುಪರ್ದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿ ಕೇಂದ್ರಗಳನ್ನು 2018-19ನೇ ಸಾಲಿನಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯೊಳಗೆ ತರಲು ತೀರ್ಮಾನಿಸಲಾಗಿದೆ. ಮುಂದಿನ ದಿನಗಳಲ್ಲಿ ಅಂಗನವಾಡಿ ಕೇಂದ್ರಕ್ಕೆ ಬರುತ್ತಿದ್ದ ಮಕ್ಕಳು ಪೂರ್ವ ಪ್ರಾಥಮಿಕ ಶಾಲೆಗಳಿಗೆ ಬರಲಿದ್ದಾರೆ. ಈ ಅಂಗನವಾಡಿಗಳಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ(ಐಸಿಡಿಎಸ್‌) ಕೆಲಸಗಳು ಮಾತ್ರ ನಡೆಯಲಿವೆ.
ಇಲ್ಲಿನ ಅಂಗನವಾಡಿ ಕಾರ್ಯಕರ್ತರು ಕಲಿಕೆ ಮತ್ತು ಐಸಿಡಿಎಸ್‌ ಎರಡೂ ವಿಭಾಗಗಳಲ್ಲಿ ಕೆಲಸ ಮಾಡಬೇಕಾಗುತ್ತದೆ. ಬಿಸಿಯೂ
ಟಕ್ಕೆ ಅಂಗನವಾಡಿಗೆ ಬರುತ್ತಿದ್ದ ಆಹಾರವನ್ನೇ ಬಳಸಲಾಗುತ್ತದೆ. 

ಐದು ಸಾವಿರ ಪೂರ್ವ ಪ್ರಾಥಮಿಕ ಶಾಲೆ: ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಜತೆಗೆ ಪೂರ್ವ ಪ್ರಾಥಮಿಕ ಶಾಲೆ ಇಲ್ಲದೇ ಇರುವುದು ಇದಕ್ಕೆ ಕಾರಣ ಎಂದು ಶಿಕ್ಷಣ ತಜ್ಞರು ಕೂಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಖಾಸಗಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಇದ್ದೇ ಇರುತ್ತದೆ. ಅಲ್ಲಿ ಪೂರ್ವ ಪ್ರಾಥಮಿಕ ಶಾಲೆಗೆ ಸೇರಿದ ಮಕ್ಕಳು ಎಸ್ಸೆಸ್ಸೆಲ್ಸಿ ಅಥವಾ ಪಿಯುಸಿ ಮುಗಿಯುವ ತನಕ ಅದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಾರೆ. ಸರ್ಕಾರಿ ಶಾಲೆಯಲ್ಲಿ ಈ ವ್ಯವಸ್ಥೆ ಇಲ್ಲ. ಅಂಗನವಾಡಿ ಕೇಂದ್ರಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ವ್ಯಾಪ್ತಿಯೊಳಗೆ ಬರುತ್ತದೆ. ಅಂಗನವಾಡಿ ಸೇರಿದ ಮಕ್ಕಳು ಸರ್ಕಾರಿ ಶಾಲೆಗೆ ಬರುತ್ತಾರೆ ಎಂದು
ಊಹಿಸಲು ಸಾಧ್ಯವಿಲ್ಲ. ಹೀಗಾಗಿಯೇ ಅಂಗನವಾಡಿಗಳನ್ನು ಶಿಕ್ಷಣ ಇಲಾಖೆ ವ್ಯಾಪ್ತಿಗೆ ತರುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಹೀಗಾದಾಗ ಸರ್ಕಾರಿ ಶಾಲೆಗಳಲ್ಲಿ ಎಲ್‌ ಕೆಜಿ-ಯುಕೆಜಿ ವ್ಯಾಸಂಗ ಮಾಡಿದ ಮಕ್ಕಳು ಮುಂದೆ ಸಹಜವಾಗಿ ಅದೇ ಶಾಲೆಯಲ್ಲಿ ಒಂದನೇ ತರಗತಿಯಿಂದ ಕಲಿಯುತ್ತಿ ದ್ದಾರೆ. ಈ ಮೂಲಕ ಖಾಸಗಿ ಶಾಲೆಗಳತ್ತ ಮಕ್ಕಳನ್ನು ಸೇರಿಸು ವುದು ತಪ್ಪಿಸಬಹುದು ಎಂಬುದು ಸರ್ಕಾರದ ಉದ್ದೇಶ. 

ಸಮಿತಿಯ ಶಿಫಾರಸು
2009ರ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯ ಸೆಕ್ಷನ್‌ 11ರ ಪ್ರಕಾರ ಮೂರು ವರ್ಷ ತುಂಬಿದ ಮಕ್ಕಳನ್ನು ಪ್ರಾಥಮಿಕ ಶಾಲೆಗೆ ಸಜ್ಜುಗೊಳಿಸಲು, ಪೂರ್ವ ಪ್ರಾಥಮಿಕ ತರಗತಿಗೆ ಸೇರಿಸುವು ಅಗತ್ಯ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನ್ನೆಲ್ಲ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ-1(ಎಲ್‌ಕೆಜಿ), ಪೂರ್ವ ಪ್ರಾಥಮಿಕ ಶಾಲೆ -2 (ಯುಕೆಜಿ) ಆರಂಭಿಸಬೇಕು ಎಂದು ಸರ್ಕಾರಿ ಶಾಲೆಗಳ ಸಬಲೀಕರಣ ಸಮಿತಿ 2017ರಲ್ಲಿ ನೀಡಿದ ವರದಿಯಲ್ಲಿ ಶಿಫಾರಸು ಮಾಡಿದೆ. ಅದರಂತೆ ಸರ್ಕಾರ ಪೂರ್ವ ಪ್ರಾಥಮಿಕ ಶಾಲೆ ತೆರೆಯಲು ಮುಂದಾಗಿದೆ. 

ಸರ್ಕಾರಿ ಶಾಲೆಗಳಲ್ಲಿ ಪೂರ್ವಪ್ರಾಥಮಿಕ ಶಾಲೆ ತೆರೆಯುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸರ್ಕಾರದಿಂದ ಅಧಿಕೃತ ಆದೇಶ ಬಂದಿಲ್ಲ. ಎಲ್ಲೆಲ್ಲಿ ಸರ್ಕಾರಿ ಶಾಲಾವರಣದಲ್ಲಿ ಅಂಗನವಾಡಿ ಇದೆಯೋ ಅಲ್ಲೆಲ್ಲ ಹೊಂದಾಣಿಕೆಯ ಕಾರ್ಯ ನಡೆಯುತ್ತಿದೆ.
ಡಾ.ಪಿ.ಸಿ.ಜಾಫ‌ರ್‌, ಆಯುಕ್ತ, ಸಾರ್ವಜನಿಕ ಶಿಕ್ಷಣ ಇಲಾಖೆ 

ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.