ಪಕ್ಷಾಂತರ ನಿಷೇಧದಿಂದ ಪಾರಾಗಲು ಕಸರತ್ತು
Team Udayavani, Jan 23, 2018, 6:35 AM IST
ಬೆಂಗಳೂರು: ಪಕ್ಷಾಂತರ ನಿಷೇಧ ಕಾಯ್ದೆಯ ಆತಂಕ ಎದುರಿಸುತ್ತಿರುವ ಶಾಸಕರಾದ ಮಾನಪ್ಪ ವಜ್ಜಲ್ ಹಾಗೂ
ಡಾ.ಶಿವರಾಜ್ ಪಾಟೀಲ್ ಸ್ವಇಚ್ಛೆಯಿಂದ ರಾಜೀನಾಮೆ ನೀಡಿರುವ ಬಗ್ಗೆ ಮತ್ತೂಮ್ಮೆ ವಿಧಾನಸಭೆ ಕಾರ್ಯದರ್ಶಿಗೆ
ಪತ್ರ ನೀಡಿದ್ದಾರೆ.
ಖುದ್ದು ಹಾಜರಾಗಿ ವಿವರಣೆ ನೀಡುವಂತೆ ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ನೀಡಿದ್ದ ನೋಟಿಸ್ ಹಿನ್ನೆಲೆಯಲ್ಲಿ ಸೋಮವಾರ ಇಬ್ಬರೂ ಶಾಸಕರು ವಿದಾನಸಭೆ ಕಾರ್ಯದರ್ಶಿ ಎದುರು ಹಾಜರಾಗಿ ಸ್ವ ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಲಿಖೀತ ಪತ್ರ ಸಲ್ಲಿಸಿದರು.
ಲಿಂಗಸಗೂರು ಶಾಸಕ ಮಾನಪ್ಪ ವಜ್ಜಲ್, ರಾಯಚೂರು ಶಾಸಕ ಡಾ.ಶಿವರಾಜ್ ಪಾಟೀಲ್ ನೀಡಿರುವ ಹೇಳಿಕೆಗಳನ್ನು ಸ್ಪೀಕರ್ ಗಮನಕ್ಕೆ ತರಲಾಗುವುದು. ಮುಂದಿನ ತೀರ್ಮಾನ ಅವರು ಕೈಗೊಳ್ಳಲಿದ್ದಾರೆ ಎಂದು ಎಸ್. ಮೂರ್ತಿ
ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾನಪ್ಪ ವಜ್ಜಲ್, ನಾವು ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇವೆ. ಶಾಸಕ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದೇವೆ. ಅದಕ್ಕೂ ಮುನ್ನ ಸ್ಪೀಕರ್ ಅವರ ಜತೆಯೂ ಚರ್ಚಿಸಿದ್ದೇವೆ. ಅವರ ನಿರ್ದೇಶನದ ಪ್ರಕಾರವೇ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೆವು. ಇದೀಗ ಮತ್ತೆ ವಿವರಣೆ ಕೋರಿದ್ದರಿಂದ ಲಿಖೀತ ಪತ್ರ ಸಹ ನೀಡಿದ್ದೇವೆ. ರಾಜೀನಾಮೆ ಅಂಗೀಕಾರದ ಬಳಿಕ ಬಿಜೆಪಿ
ಸೇರಲಿದ್ದೇವೆ ಎಂದು ತಿಳಿಸಿದರು. ಬಿಜೆಪಿ ಕಚೇರಿಯಲ್ಲಿ ಕಾರ್ಯಕ್ರಮ ಇದೆ ಎಂದು ಹೇಳಿದ್ದಕ್ಕೆ ಹೋಗಿದ್ದೆವು ಅಷ್ಟೆ.
ಆದರೆ, ನಮ್ಮ ವಿರುದಟಛಿ ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಉಪಾಧ್ಯಕ್ಷರು
ಯಾಕೆ ಮನವಿ ಕೊಟ್ಟಿದ್ದಾರೋ ಗೊತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…