ಚಳಿಯ ಅಬ್ಬರಕ್ಕೆ ತತ್ತರಿಸಿದ ಹೈನೋದ್ಯಮ


Team Udayavani, Jan 23, 2018, 6:05 AM IST

Ban23011806Medn.jpg

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಸಂಕ್ರಾಂತಿ ಹಬ್ಬದ ನಂತರವೂ ಚಳಿಯ ಅಬ್ಬರ ಜೋರಾಗಿದ್ದು, ಹೈನೋದ್ಯಮ ತತ್ತರಗೊಳ್ಳುವಂತಾಗಿದೆ. ಕಳೆದೊಂದು ತಿಂಗಳಿಂದ ಚಳಿಯ ತೀವ್ರತೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲು ಉತ್ಪಾದನೆಯಾಗುತ್ತಿರುವ ಹಳೆ ಮೈಸೂರು ವಿಭಾಗ ಹಾಗೂ ಬಯಲುಸೀಮೆ ಜಿಲ್ಲೆಗಳಲ್ಲಿ ಕುಸಿತಗೊಂಡಿರುವುದು ಕೆಎಂಎಫ್ಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. 

ಇದರಿಂದಾಗಿ ಕೆಲ ಹಾಲು ಒಕ್ಕೂಟಗಳು ಆರ್ಥಿಕ ಸಂಕಷ್ಟದ ಭೀತಿ ಎದುರಿಸುತ್ತಿವೆ. ಆದರೆ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಚಳಿಯ ಪ್ರಭಾವ ಹೈನೋದ್ಯಮದ ಮೇಲೆ ಯಾವುದೇ ಪರಿಣಾಮ ಬಿದ್ದಿಲ್ಲ. ಧಾರವಾಡ, ವಿಜಯಪುರ, ಬೆಳಗಾವಿ, ಕಲಬುರಗಿ ಹಾಲು ಒಕ್ಕೂಟಗಳಲ್ಲಿ ಹಾಲಿನ ಉತ್ಪಾದನೆ ಯಥಾಸ್ಥಿತಿಯಲ್ಲಿ ಇದೆ.

ಕ್ಷೀರಕ್ರಾಂತಿಯಲ್ಲಿ ಮುಂಚೂಣಿಯಲ್ಲಿರುವ ರಾಜಧಾನಿ ಬೆಂಗಳೂರು ಹಾಗೂ 2 ನೇ ಸ್ಥಾನದಲ್ಲಿರುವ ಅವಿಭಜಿತ ಕೋಲಾರ ಹಾಲು ಒಕ್ಕೂಟಗಳಲ್ಲಿ ಈಗ ಪ್ರತಿನಿತ್ಯ ತಲಾ ಒಂದು ಲಕ್ಷ ಲೀ. ಹಾಲು ಉತ್ಪಾದನೆ ಕಡಿಮೆಯಾಗಿದೆ. ರಾಜ್ಯದಲ್ಲಿ 72 ಲಕ್ಷ ಲೀಟರ್‌ ಪೈಕಿ ಈಗ ನಿತ್ಯ 66 ರಿಂದ 67 ಲಕ್ಷ ಲೀ. ಹಾಲು ಮಾತ್ರ ಹಾಲು ಒಕ್ಕೂಟಗಳಿಗೆ ಪೂರೈಕೆಯಾಗುತ್ತಿದ್ದು, ಉಳಿದ 5 ರಿಂದ 6 ಲಕ್ಷ ಲೀ. ಹಾಲು ಉತ್ಪಾದನೆ ಕುಸಿತಗೊಂಡಿದೆ.

ಯಾವ ಒಕ್ಕೂಟದಲ್ಲಿ ಎಷ್ಟು?: ಕೆಎಂಎಫ್ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಪ್ರತಿನಿತ್ಯ ಸರಾಸರಿ 15 ಲಕ್ಷ ಲೀ.ಹಾಲು ಉತ್ಪಾದಿಸುತ್ತಿದ್ದ ಬೆಂಗಳೂರು ಹಾಲು ಒಕ್ಕೂಟಕ್ಕೆ ಈಗ 14 ಲಕ್ಷ ಲೀ. ಹಾಲು ಮಾತ್ರ ಪೂರೈಕೆಯಾಗುತ್ತಿದೆ. ನಿತ್ಯ 10 ಲಕ್ಷ ಲೀ.ಹಾಲು ಹರಿದು ಬರುತ್ತಿದ್ದ ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟಕ್ಕೆ ಈಗ ಕೇವಲ 9 ಲಕ್ಷ ಲೀ.ಹಾಲು ಮಾತ್ರ ಪೂರೈಕೆಯಾಗುತ್ತಿದೆ.

ಮೈಸೂರು ಹಾಲು ಒಕ್ಕೂಟದಲ್ಲಿ ಸರಾಸರಿ 5.15 ಲಕ್ಷ ಲೀ. ಪೈಕಿ ಈಗ 4.39 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ತುಮಕೂರು ಹಾಲು ಒಕ್ಕೂಟದಲ್ಲಿ ಸರಾಸರಿ 6.14 ಲಕ್ಷ ಲೀ.ಹಾಲಿನ ಪೈಕಿ 5.78 ಲಕ್ಷ ಉತ್ಪಾದನೆಯಾಗುತ್ತಿದೆ. ಬಳ್ಳಾರಿ ಹಾಲು ಒಕ್ಕೂಟದಲ್ಲಿ 1.86 ಲಕ್ಷ ಲೀ.ಇದ್ದ ಹಾಲು ಉತ್ಪಾ ದನೆ 1.60 ಲಕ್ಷ ಲೀ.ಗೆ ಇಳಿದಿದೆ.

ಮಂಡ್ಯದಲ್ಲಿ ತಿಂಗಳಲ್ಲಿ 34 ಸಾವಿರ ಲೀಟರ್‌ ಹಾಲು ಉತ್ಪಾದನೆ ಕಡಿಮೆಯಾಗಿದೆ. ಶಿವಮೊಗ್ಗದಲ್ಲಿ 5.18 ಲಕ್ಷ ಲೀ. ಪೈಕಿ ಈಗ ಕೇವಲ 4.67 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ಹಾಸನದಲ್ಲಿ 50 ಸಾವಿರ ಲೀಟರ್‌ ಹಾಲು ಕಡಿಮೆಯಾಗಿದೆ. ಇದರಿಂದಾಗಿ ಹೈನೋದ್ಯಮವನ್ನೇ ನಂಬಿರುವ ಉತ್ಪಾದಕರಿಗೂ ಹೊಡೆತ ಬೀಳುತ್ತಿದೆ. ಚಳಿಯಿಂದ ರಾಸುಗಳು ಹೆಚ್ಚಿನ ಪ್ರಮಾಣದಲ್ಲಿ ಪಶು ಆಹಾರ ತಿಂದರೂ ನಿರೀಕ್ಷಿತ ಮಟ್ಟದಲ್ಲಿ ಹಾಲು ಕೊಡುತ್ತಿಲ್ಲ.

10 ಲೀ. ಹಾಲು ಕೊಡುವ ಹಸು ಚಳಿಗಾಲದಿಂದ 6 ರಿಂದ 7 ಲೀ.ಹಾಲನ್ನಷ್ಟೇ ನೀಡುತ್ತಿವೆ ಎನ್ನುತ್ತಾರೆ ರೈತರು. ಚಳಿಗಾಲದ ಸಂದರ್ಭ ಹಾಲು ಉತ್ಪಾದನೆ ಕುಸಿತ ಮಾಮೂಲಿ ಎನ್ನುತ್ತಾರೆ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಶೇಖರಣಾ ಹಾಗೂ ತಾಂತ್ರಿಕ ವಿಭಾಗದ ವ್ಯವಸ್ಥಾಪಕ ಡಾ.ವಿ.ಎಂ. ರಾಜು. ದಿಢೀರನೆ ಹಾಲು ಉತ್ಪಾದನೆಯಲ್ಲಿ ಕುಸಿತ ಕಂಡರೆ ಒಕ್ಕೂಟಗಳ ಆರ್ಥಿಕ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಹೆಸರು ಹೇಳಲು ಇಚ್ಛಿಸದ ಕೆಎಂಎಫ್ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದರು.

ಕಳೆದ ವರ್ಷ ಹೋಲಿಸಿದರೆ ಈ ವರ್ಷ ಚಳಿಯ ತೀವ್ರತೆ ಹೆಚ್ಚಾಗಿರುವುದರಿಂದ ಹಾಲು ಉತ್ಪಾದನೆಯಲ್ಲಿ
ಸಾಕಷ್ಟು ಕುಸಿತ ಕಂಡಿದೆ.

– ಕೆ.ವಿ.ನಾಗರಾಜ್‌, ಕೋಲಾರ-
ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನಿರ್ದೇಶಕ

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.