ಬಾಹುಬಲಿ ಮಜ್ಜನಕ್ಕೆ ವಿಂಧ್ಯಗಿರಿ ಸಜ್ಜು


Team Udayavani, Jan 23, 2018, 6:00 AM IST

Ban23011801Medn.jpg

ಶ್ರವಣಬೆಳಗೊಳ: ಭಗವಾನ್‌ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ನಡೆಸುತ್ತಿರುವ ಪೂರಕ ಸಿದ್ಧತಾ ಕಾರ್ಯಗಳು ಶೇ.90ರಷ್ಟು ಪೂರ್ಣಗೊಂಡಿದ್ದು, ಮಾಸಾಂತ್ಯಕ್ಕೆ ಸಂಪೂರ್ಣವಾಗಲಿವೆ ಎಂದು ಮಹಾಮಸ್ತಕಾಭಿಷೇಕ ಸಮಿತಿಯ ಅಧ್ಯಕ್ಷರೂ ಆದ ಸಚಿವ ಎ.ಮಂಜು, ಶ್ರವಣಬೆಳಗೋಳ ಮಠದ ಚಾರುಕೀರ್ತಿ ಬಟ್ಟಾರಕ ಸ್ವಾಮೀಜಿ ತಿಳಿಸಿದರು.

ಶ್ರವಣಬೆಳಗೋಳದಲ್ಲಿ ಸೋಮವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, 12 ವರ್ಷಗಳಿಗೊಮ್ಮೆ ನಡೆಯುವ ಬಾಹುಬಲಿ ಮಹಾಮಸ್ತಕಾಭಿಷೇಕ ಫೆಬ್ರುವರಿ 7 ರಿಂದ 22ರವರೆಗೆ ನಡೆಯಲಿದ್ದು, ಮಾಸಾಂತ್ಯದ ವೇಳೆಗೆ ಎಲ್ಲ ಕೆಲಸಗಳು ಪೂರ್ಣಗೊಂಡು ಮಹೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಸಿದ್ಧವಾಗಲಿವೆ ಎಂದರು.

ಇದೇ ಮೊದಲ ಬಾರಿಗೆ ಜರ್ಮನ್‌ನ “ರಿಂಗ್‌ ಅಂಡ್‌ ಲಾಕ್‌’ ತಂತ್ರಜ್ಞಾನ ಬಳಸಿ “ಸ್ಕಫ್ ಹೋಲ್ಡಿಂಗ್‌(ಅಟ್ಟಣಿಗೆ)’ ನಿರ್ಮಿಸಲಾಗುತ್ತಿದೆ. ಇದರೊಂದಿಗೆ ಮೂರು ಲಿಫ್ಟ್ಗಳನ್ನು ಸಹ ಅಳವಡಿಸಲಾಗುತ್ತಿದ್ದು, ಸುಮಾರು 5,500 ಮಂದಿ ಕುಳಿತುಕೊಳ್ಳಲು ವಿಂಧ್ಯಗಿರಿಯಲ್ಲಿ ಆಸನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಸಚಿವ ಮಂಜು ಮಾಹಿತಿ ನೀಡಿದರು.
ಸುಮಾರು 89 ಕೋಟಿ ರೂ. ವೆಚ್ಚದಲ್ಲಿ ಶ್ರವಣಬೆಳಗೋಳಕ್ಕೆ ಸಂಪರ್ಕಿಸುವ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ವಾರದೊಳಗೆ ಪೂರ್ಣಗೊಳ್ಳಲಿವೆ. ಮಹೋತ್ಸವದ ಹಿನ್ನೆಲೆಯಲ್ಲಿ 400 ವೈದ್ಯರನ್ನು ಆರೋಗ್ಯ ಸೇವೆಗೆ ನಿಯೋಜಿಸಲಾಗಿದೆ ಎಂದು ಹೇಳಿದರು.

12 ಉಪನಗರಗಳ ನಿರ್ಮಾಣ ಕಾರ್ಯವೂ ಬಹುತೇಕ ಅಂತಿಮ ಹಂತದಲ್ಲಿದ್ದು, ಜನವರಿ 30ರೊಳಗೆ ಬಳಕೆಗೆ ನೀಡಲಾಗುವುದು. ಒಟ್ಟಾರೆಯಾಗಿ ಸುರಕ್ಷತೆ, ಸ್ವತ್ಛತೆ ಹಾಗೂ ಆರೋಗ್ಯಕರ ವಾತಾವರಣದಲ್ಲಿ ವ್ಯವಸ್ಥಿತವಾಗಿ ಮಹೋತ್ಸವ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸುಮಾರು 30 ರಿಂದ 35 ಲಕ್ಷ ಮಂದಿ ಮಹಾಮಸ್ತಕಾಭಿಷೇಕದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಎ.ಮಂಜು ವಿವರಿಸಿದರು.

ಹೆಲಿ ಟೋರಿಸಂ: ಬಾಹುಬಲಿ ಮೂರ್ತಿ ವೀಕ್ಷಣೆಗೆ ಹೆಲಿಕಾಪ್ಟರ್‌ ಮೂಲಕವೂ ಅವಕಾಶ ಕಲ್ಪಿಸಲಾಗುತ್ತಿದ್ದು, 2200 ರಿಂದ 2300 ರೂ. ನಿಗದಿಪಡಿಸಲಾಗಿದೆ. ಸಮೀಪದ ಜನಿವಾರದ ಕೆರೆಯಲ್ಲಿ ಬೋಟಿಂಗ್‌ ವ್ಯವಸ್ಥೆ ಸಹ ಸಹ ಕಲ್ಪಿಸಲಾಗುತ್ತಿದೆ ಎಂದರು.

ಕೇಂದ್ರದಿಂದ ಅನುದಾನ ಬಂದಿಲ್ಲ: ಮಹಾಮಸ್ತಕಾಭಿಷೇಕಕ್ಕೆ ಮುಖ್ಯಮಂತ್ರಿಗಳು 175 ಕೋಟಿ ರೂ. ಬಿಡುಗಡೆ ಮಾಡಿದ್ದು, ಅದರಲ್ಲಿ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ಈವರೆಗೆ ಯಾವುದೇ ಅನುದಾನ ಬಂದಿಲ್ಲ. ರಾಜ್ಯ ಸರ್ಕಾರವೇ ಸಂಪೂರ್ಣ ಜವಾಬ್ದಾರಿ ವಹಿಸಿ ನಿರ್ವಹಿಸುತ್ತಿದೆ ಎಂದು ಮಂಜು ತಿಳಿಸಿದರು.

ಶ್ರವಣಬೆಳಗೋಳ ಮಠದ ಚಾರುಕೀರ್ತಿ ಬಟ್ಟಾರಕ ಸ್ವಾಮೀಜಿ ಮಾತನಾಡಿ, ಫೆಬ್ರುವರಿ 7 ರಿಂದ ಮಹಾಮಸ್ತಕಾಭಿಷೇಕ ನಡೆಯಲಿದ್ದು, ಪೂರ್ವಸಿದ್ಧತಾ ಕಾರ್ಯಗಳ ಪ್ರಗತಿ ತೃಪ್ತಿತಂದಿದೆ. ಈಗಾಗಲೇ 175 ಮುನಿಗಳು ಆಗಮಿಸಿದ್ದು, ಇನ್ನೂ 100 ಮಂದಿ ಜೈನಮುನಿಗಳು ಆಗಮಿಸುವ ನಿರೀಕ್ಷೆಯಿದೆ. ಪರಂಪರೆಯ ಸಂಸ್ಕೃತಿಯಂತೆ ಮಹಾಮಸ್ತಕಾಭಿಷೇಕ ನಡೆಯಲಿದೆ ಎಂದು ತಿಳಿಸಿದರು.

ಫೆ.7 ರಿಂದ 16ರವರೆಗೆ ಬೆಟ್ಟದ ಕೆಳಭಾಗದಲ್ಲಿ ಪಂಚಕಲ್ಯಾಣ ಕಾರ್ಯಕ್ರಮ ನಡೆಯಲಿದ್ದು, ಫೆ.17ರಿಂದ 25ರವರೆಗೆ ಮಹಾಮಸ್ತಕಾಭಿಷೇಕ ನಡೆಯಲಿದೆ. ನಂತರ ಆಗಸ್ಟ್‌ವರೆಗೆ ಪ್ರತಿ ಭಾನುವಾರ ಮಹಾಮಸ್ತಕಾಭಿಷೇಕ ನಡೆಯಲಿದ್ದು, ಭಕ್ತರು ಕಣ್ತುಂಬಿಕೊಳ್ಳಬಹುದಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್‌ ಸದಸ್ಯ ಗೋಪಾಲಕೃಷ್ಣ ಇದ್ದರು. ಬಳಿಕ ಸಚಿವ ಎ.ಮಂಜು ಹಾಗೂ ಜಿಲ್ಲಾಧಿಕಾರಿ ರೋಹಿನಿ ಸಿಂಧೂರಿ ಅವರು ಮುನಿನಗರ, ತ್ಯಾಗಿನಗರಗಳಿಗೆ ಭೇಟಿ ನೀಡಿ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು.

ಗಣ್ಯರ ಭೇಟಿ ಸಾಧ್ಯತೆ
ಮಹಾಮಸ್ತಕಾಭಿಷೇಕಕ್ಕೆ ಪ್ರಧಾನ ಮಂತ್ರಿ, ರಾಷ್ಟ್ರಪತಿ ಸೇರಿ ಇತರೆ ಗಣ್ಯರಿಗೆ ಆಹ್ವಾನ ಪತ್ರ ಕಳುಹಿಸಲಾಗಿದೆ. ಆದರೆ, ಗಣ್ಯರ ಪಾಲ್ಗೊಳ್ಳುವಿಕೆಯ ಬಗ್ಗೆ ಯಾವುದೇ ಖಚಿತ ಮಾಹಿತಿ ಬಂದಿಲ್ಲ. ಆದರೆ, ಉನ್ನತ ಮೂಲಗಳ ಪ್ರಕಾರ ರಾಷ್ಟ್ರಪತಿಯವರು ಫೆ.17ರಂದು ಮಹಾಮಸ್ತಕಾಭಿಷೇಕಕ್ಕೆ ಚಾಲನೆ ನೀಡುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಎಲ್ಲಾರೀತಿಯ ಸಹಕಾರ ನೀಡಲಾಗುವುದು: ಡಿಸಿ
ಮಹಾಮಸ್ತಕಾಭಿಷೇಕಕ್ಕೆ ಸುಮಾರು 30 ರಿಂದ 40 ಲಕ್ಷ ಮಂದಿ ಬರುವ ನಿರೀಕ್ಷೆಯಿದ್ದು, ಅವರಿಗೆ ಪೂರಕ ಮೂಲಸೌಕರ್ಯವನ್ನು ಜಿಲ್ಲಾಡಳಿತದಿಂದ ಕಲ್ಪಿಸಲಾಗುವುದು. ಭದ್ರತೆಗಾಗಿ 5 ಸಾವಿರ ಪೊಲೀಸರನ್ನು ನಿಯೋಜಿಸಿಕೊಳ್ಳಲು ತೀರ್ಮಾನಿಸಲಾಗಿದ್ದು, ಮಹೋತ್ಸವದ ವೇಳೆ ಸಂಚಾರ ದಟ್ಟಣೆ ತಪ್ಪಿಸಲು 5 ಕಿ.ಮೀ. ದೂರದಲ್ಲಿಯೇ ಖಾಸಗಿ ವಾಹನ ಸಂಚಾರ ನಿರ್ಬಂಧಿಸಿ, ಒಳಾವರಣದ ಸಂಚಾರಕ್ಕಾಗಿ ಕೆಎಸ್‌ಆರ್‌ಟಿಸಿಯ 65 ಮಿನಿಬಸ್‌ಗಳನ್ನು ನಿಯೋಜಿಸಿಕೊಂಡು ಉಚಿತ ಸಂಚಾರ ಸೇವೆ ಕಲ್ಪಿಸಲಾಗುವುದು. ಇದರೊಂದಿಗೆ 750ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಮತ್ತು ಬೈಕ್‌ ಟೂರಿಸಂ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

– ಎಂ.ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.