ಮಲೇಷಿಯಾ ಮರಳಿನಲ್ಲಿ ಕೋಟ್ಯಂತರ ಗೋಲ್‌ಮಾಲ್‌: ಜಗದೀಶ ಶೆಟ್ಟರ್‌


Team Udayavani, Jan 24, 2018, 11:49 AM IST

24-12.jpg

ಹುಬ್ಬಳ್ಳಿ: ಮಲೇಷಿಯಾದಿಂದ ಮರಳು ಆಮದು ದಂಧೆಯಲ್ಲಿ ಅಂದಾಜು 5,800 ಕೋಟಿ ರೂ. ಗೋಲ್‌ಮಾಲ್‌ ಶಂಕೆ ಇದೆ.
ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳು ಭಾಗಿಯಾಗಿರುವ ಮಾಹಿತಿ ಇದ್ದು, ಪ್ರಕರಣದ ತನಿಖೆಯನ್ನು ಸಿಬಿಐಗೆ ಒಳಪಡಿಸಬೇಕೆಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ್‌ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಂಎಸ್‌ ಐಎಲ್‌ನಿಂದ 50 ಕೆ.ಜಿ. ಚೀಲದಲ್ಲಿ ಮರಳು ಮಾರಾಟಕ್ಕೆ ಮುಂದಾಗಿದೆ. ಮಲೇಷಿಯಾದಿಂದ ಮರಳು ಆಮದು ಮಾಡುವ ಟೆಂಡರ್‌ ಪಡೆದ ಪೋಸಿಡಾನ್‌ ಎಫ್ಝಡ್‌ಇ ಎಂಬ ಕಂಪನಿ ಬಗ್ಗೆಯೇ ಹಲವು ಸಂಶಯಗಳು ವ್ಯಕ್ತವಾಗಿವೆ. ಎಂಎಸ್‌ಐಎಲ್‌ ಮಲೇಷಿಯಾದಿಂದ ವಾರ್ಷಿಕ 36 ಲಕ್ಷ ಟನ್‌ನಂತೆ ಐದು ವರ್ಷಕ್ಕೆ ಸುಮಾರು 180 ಲಕ್ಷ ಟನ್‌ನಷ್ಟು ಮರಳು ಆಮದಿಗೆ ಒಪ್ಪಂದ ಮಾಡಿಕೊಂಡಿದೆ. ಇದಕ್ಕೆ ಎಂಎಸ್‌ ಐಎಲ್‌ ಆಡಳಿತ ಮಂಡಳಿ ಅನುಮತಿ ಪಡೆದಿಲ್ಲ. ಸಚಿವ ಸಂಪುಟದಲ್ಲೂ ಚರ್ಚೆಯಾಗಿಲ್ಲ ಎಂಬ ಮಾಹಿತಿ ಇದೆ ಎಂದರು. 

ಮಲೇಷಿಯಾದಿಂದ ಬರುವ ಮರಳು ಆಂಧ್ರದ ಕೃಷ್ಣಾಪಾರ್ಕ್‌ಂ ಖಾಸಗಿ ಬಂದರಿಗೆ ಬಂದು ಅಲ್ಲಿಂದ ರಾಜ್ಯಕ್ಕೆ ಬರಲಿದೆ. ಪ್ರತಿ ಟನ್‌ಗೆ 2,300 ರೂ.ನಂತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದೇ ಮಲೇಷಿಯಾದಿಂದ ತಮಿಳುನಾಡು ಪ್ರತಿ ಟನ್‌ಗೆ 925 ರೂ.ನಂತೆ ತರಿಸುತ್ತಿದೆ. ಕೃಷ್ಣ ಪಾರ್ಕ್‌ಂ ಬಂದರಿನಿಂದ ರಾಜ್ಯಕ್ಕೆ ಮರಳು ಸಾಗಣೆಗೆ 1,980 ಕೋಟಿ ರೂ. ಆಗುತ್ತದೆ. ಎಂಎಸ್‌ಐಎಲ್‌ ಪ್ರತಿ ಟನ್‌ ಮರಳನ್ನು 3,900 ರೂ.ಗಳಿಗೆ ಮಾರಾಟ ಮಾಡುತ್ತಿದೆ ಎಂದರು. ಎಂಎಸ್‌ಐಎಲ್‌ ಎಂಡಿ ವಿರುದ್ಧ ಆರೋಪ: ಮಲೇಷಿಯಾ ಮರಳು ಆಮದು ಪ್ರಕರಣದಲ್ಲಿ ಎಂಎಸ್‌ಐಎಲ್‌ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ, ಪ್ರಧಾನ ವ್ಯವಸ್ಥಾಪಕ ಮಹಾವೀರ
ನೇರವಾಗಿ ಭಾಗಿಯಾಗಿದ್ದು, ನನಗಿರುವ ಮಾಹಿತಿಯಂತೆ ಮುಖ್ಯಮಂತ್ರಿ ಕಚೇರಿ ಹಿರಿಯ ಐಎಎಸ್‌ ಅಧಿಕಾರಿಗಳು ಸಹ ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು. 

ಕೇಂದ್ರಕ್ಕೂ ಪತ್ರಬರೆಯುತ್ತೇನೆ
ಮಲೇಷಿಯಾದಿಂದ ಮರಳು ಆಮದು ಕುರಿತಾಗಿ ಕೇಂದ್ರ ಸರ್ಕಾರದಿಂದಲೂ ಸೂಕ್ತ ಪರವಾನಗಿ ಅಗತ್ಯ. ಎಂಎಸ್‌ ಐಎಲ್‌ ಈ ನಿಟ್ಟಿನಲ್ಲಿ ನಿಯಮ ಉಲ್ಲಂಘಿಸಿದೆಯೇ ಎಂಬುದರ ಕುರಿತಾಗಿ ಹಾಗೂ ಇದೊಂದು ಅಂತಾರಾಷ್ಟ್ರೀಯ ಅಪರಾಧ ವ್ಯಾಪ್ತಿಗೆ ಬರುತ್ತಿದ್ದು, ಈ ನಿಟ್ಟಿನಲ್ಲಿಯೂ ಪರಿಶೀಲಿಸುವಂತೆ ಕೇಂದ್ರಕ್ಕೆ ಪತ್ರ ಬರೆಯಲಾಗುವುದು ಎಂದು ಶೆಟ್ಟರ್‌ ತಿಳಿಸಿದರು. 

40 ಸಾವಿರ ಟನ್‌ ಬೇಡಿಕೆ
ಬೆಂಗಳೂರು: ಮೈಸೂರು ಸೇಲ್ಸ್‌ ಇಂಟರ್‌ನ್ಯಾಷನಲ್‌ ಲಿ. ಮಲೇಷಿಯಾದಿಂದ ಆಮದು ಮಾಡಿಕೊಂಡ ಮರಳಿನ ಮಾರಾಟಕ್ಕೆ ಸೋಮವಾರ ಚಾಲನೆ ನೀಡಿದ್ದು, ಎರಡು ದಿನದಲ್ಲಿ 40,000 ಟನ್‌ಗೆ ಬೇಡಿಕೆ ಸೃಷ್ಟಿಯಾಗಿದೆ. ಸದ್ಯ ಬಿಡದಿ ಬಳಿಯ ಸಂಸ್ಥೆಯ ಯಾರ್ಡ್‌ನಲ್ಲಿ ಸೀಮಿತ ಪ್ರಮಾಣದ ದಾಸ್ತಾನು ಇದ್ದು, ಎರಡು ದಿನದಲ್ಲಿ 2,000 ಟನ್‌ ಮರಳು ಮಾರಾಟವಾಗಿದೆ. ಯಾರ್ಡ್‌ಗೆ ಮರಳು ಚೀಲ ಪೂರೈಕೆಯಾಗುತ್ತಿದ್ದಂತೆ ಪೂರೈಸಲು ಸಂಸ್ಥೆ ಸಿದ್ಧತೆ ಮಾಡಿಕೊಂಡಿದೆ. ಮಲೇಷಿಯಾದಿಂದ ಆಮದು ಮಾಡಿಕೊಂಡ ಮರಳಿನ ಮಾರಾಟ ಸೋಮವಾರದಿಂದ ಆರಂಭವಾಗಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಪ್ರತಿಷ್ಠಿತ ಸಂಸ್ಥೆಗಳು, ಕಂಪನಿಗಳಿಂದ ಬೇಡಿಕೆ ಬರಲಾರಂಭಿಸಿದೆ. ಈವರೆಗೆ 40,000 ಟನ್‌ಗೆ ಬೇಡಿಕೆ ಸೃಷ್ಟಿಯಾಗಿದೆ. ಸದ್ಯ ದಾಸ್ತಾನು ಇದ್ದ 2,000
ಟನ್‌ ಪೂರೈಸಲಾಗಿದೆ. ಆಂಧ್ರದ ಕೃಷ್ಣಪಟ್ಟಣಂನ ಬಂದರಿನಿಂದ ರೈಲಿನ ಮೂಲಕ ಬಿಡದಿಯ ಯಾರ್ಡ್‌ಗೆ ಮರಳು ಚೀಲ ಸಾಗಣೆಯಾಗುತ್ತಿದ್ದು, ಸದ್ಯದಲ್ಲೇ ಬೇಡಿಕೆಯಿರುವಷ್ಟೂ ಮರಳನ್ನು ಪೂರೈಸಲಾಗುವುದು ಎಂದು ಎಂಎಸ್‌ಐಎಲ್‌ ವ್ಯವಸ್ಥಾಪಕ ನಿರ್ದೇಶಕ ಜಿ.ಸಿ.ಪ್ರಕಾಶ್‌ ತಿಳಿಸಿದರು.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.