ಶಾ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ
Team Udayavani, Jan 26, 2018, 8:27 AM IST
ಬೆಂಗಳೂರು: ಮಹದಾಯಿ ವಿಚಾರವಾಗಿ ಕರ್ನಾಟಕ ಬಂದ್ ನಡೆಯುತ್ತಿರುವಾಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಪರಿವರ್ತನಾ ಯಾತ್ರೆಯಲ್ಲಿ ಆ ವಿಷಯವೇ ಪ್ರಸ್ತಾಪ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮಹದಾಯಿ ಬಿಕ್ಕಟ್ಟಿಗೆ ಪರಿಹಾರ ಕೊಡಿಸದ ಹೊರತು ಬಿಜೆಪಿ ರಾಷ್ಟ್ರೀಯ ನಾಯಕರು ಇಲ್ಲಿ ಬಂದು ಭಾಷಣ ಮಾಡಲು ನೈತಿಕತೆ ಇರುವುದಿಲ್ಲ ಎಂದು ಹೇಳಿದರು. ಮಹದಾಯಿ ನದಿ ನೀರಿಗಾಗಿ 2 ವರ್ಷದಿಂದ ಹೋರಾಟ ನಡೆಯುತ್ತಿದೆ. ಪರಿವರ್ತನಾ ಯಾತ್ರೆಯಲ್ಲಿ ಅದರ ಬಗ್ಗೆ ಅಮಿತ್ ಶಾ ಮಾತನಾಡುವುದು ಬಿಟ್ಟು ಸುಳ್ಳುಗಳ ಸರಮಾಲೆ ಜೋಡಿಸಿ ಹೋಗಿದ್ದಾರೆಂದು ಟೀಕಿಸಿದರು. ಸಮಾವೇಶಕ್ಕೆ ಬಂದು ಸುಳ್ಳುಗಳನ್ನು ಹೇಳಿ ಹೋಗುವುದಲ್ಲ. ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೇಲೆ ಒತ್ತಡ ಹೇರಲಿ. ಆಗ ಇಲ್ಲಿಗೆ ಬಂದು ಮಾತನಾಡಲು ನೈತಿಕತೆ ಇರುತ್ತದೆ ಎಂದರು.
ಪ್ರಧಾನಿಯವರು ಫೆ.4 ರಂದು ಇಲ್ಲಿಗೆ ಬರುತ್ತಿದ್ದಾರೆ. ಮಹದಾಯಿ ವಿವಾದ ಬಗೆಹರಿಸಲು ನಾನು ಮಧ್ಯಸ್ಥಿಕೆ ವಹಿಸುತ್ತೇನೆಂದು ಘೋಷಣೆ ಮಾಡಲಿ ನೋಡೋಣ ಎಂದು ಸವಾಲು ಹಾಕಿದರು. ಅನುದಾನ ಹೆಚ್ಚು ಕೊಟ್ಟಿದ್ದೇವೆಂದು ಅವರು ಲೆಕ್ಕ ಹೇಳುತ್ತಾರೆ. ಹಣಕಾಸು ಆಯೋಗದ ಶಿಫಾರಸು ಪ್ರಕಾರ ಆನುದಾನ ಕೊಡುವುದೇ ಹೊರತು ಇದರಲ್ಲಿ ಕೇಂದ್ರದ ಹೆಚ್ಚುಗಾರಿಕೆ ಏನಿದೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?