ಕರ್ನಾಟಕದಿಂದ ಆದೇಶ ಉಲ್ಲಂಘನೆ: ಸಾವಂತ್
Team Udayavani, Jan 29, 2018, 6:30 AM IST
ಬೆಳಗಾವಿ/ಖಾನಾಪುರ: ಕರ್ನಾಟಕ ಸರ್ಕಾರ ಮಹದಾಯಿ ನ್ಯಾಯಾಧಿಕರಣದ ಆದೇಶ ಉಲ್ಲಂಘಿಸಿ ಕಳಸಾ ನಾಲಾ ಪ್ರದೇಶದಲ್ಲಿ ಕಾಮಗಾರಿ ನಡೆಸಿದೆ ಎಂದು ಗೋವಾ ಸಭಾಪತಿ ಪ್ರಮೋದ ಸಾವಂತ್ ಮತ್ತು ಉಪಸಭಾಪತಿ ಮೈಕಲ್ ಲೋಬೋ ಗಂಭೀರ ಆರೋಪ ಮಾಡಿದರು.
ಕಣಕುಂಬಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನ್ಯಾಯಾಧಿಕರಣದ ಆದೇಶ ಉಲ್ಲಂಘನೆಯಾಗಿರುವ ಹಿನ್ನೆಲೆಯಲ್ಲಿ ತಕ್ಷಣ ಸಮಿತಿ ರಚನೆ ಮಾಡಿ ತನಿಖೆ ನಡೆಸಬೇಕು ಎಂದು ನ್ಯಾಯಾಧಿಕರಣವನ್ನು ಒತ್ತಾಯಿಸಿದರು. ಕಳಸಾ ನಾಲಾ ಪ್ರದೇಶದಲ್ಲಿ ಯಾವುದೇ ಕಾಮಗಾರಿ ನಡೆದಿಲ್ಲ ಎಂದು ಕರ್ನಾಟಕ ಹೇಳಿದೆಯಾದರೂ ಇಲ್ಲಿನ ಸ್ಥಿತಿ ನೋಡಿದರೆ ನ್ಯಾಯಾಧಿಕರಣದ ಆದೇಶ ಉಲ್ಲಂಘನೆ ಯಾಗಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಕರ್ನಾಟಕ ಸರ್ಕಾರ ಕಳಸಾ ನಾಲಾ ನೀರನ್ನು ತಿರುಗಿಸಿಕೊಳ್ಳಲು ಎಲ್ಲ ಸಿದ್ಧತೆ ಮಾಡಿಕೊಂಡಿದೆ.
ಮಹದಾಯಿ ಮತ್ತು ಅದರ ಉಪನದಿಗಳು ನೈಸರ್ಗಿಕವಾಗಿ ಹರಿಯುತ್ತಿದ್ದು, ಅದನ್ನು ತಡೆಯಲು ಪ್ರಯತ್ನ ಮಾಡಬಾರದು. ನ್ಯಾಯಾಲಯದ ತೀರ್ಪು ಬರುವವರೆಗೆ ಕರ್ನಾಟಕ ಸರ್ಕಾರ ಯಾವುದೇ ಕಾಮಗಾರಿ ಕೈಗೊಳ್ಳಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!
CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ
Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ
Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ