ಸತೀಶ್ ಜಾರಕಿಹೊಳಿ ಮನವೊಲಿಕೆ ಸರ್ಕಸ್
Team Udayavani, Jan 31, 2018, 9:25 AM IST
ಬೆಂಗಳೂರು: ಜಾರಕಿಹೊಳಿ ಸೋದರರ ಭಿನ್ನಾಭಿಪ್ರಾಯ ಶಮನ ಮಾಡಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸತೀಶ್ ಜಾರಕಿಹೊಳಿಯೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರ ಜೊತೆಯೂ ಮಾತುಕತೆ ನಡೆಸಿ, ಸತೀಶ್ ಅಸಮಾಧಾನ ಶಮನ ಮಾಡುವ ಪ್ರಯತ್ನ ಮಾಡಿದ್ದಾರೆ.
ಮಂಗಳವಾರ ವೇಣುಗೋಪಾಲ್ ಅವರು ಸತೀಶ್ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿ, ನಂತರ ಸಿಎಂ ಸಮ್ಮುಖದ ಲ್ಲಿಯೂ ಸಮಾಲೋಚನೆ ನಡೆಸಿ ಅವರ ಮುನಿಸು ಕಡಿಮೆ ಮಾಡುವ ಪ್ರಯತ್ನ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಇರುವ ಗೊಂದಲಗಳ ನಿವಾರಣೆಗೆ ಸತೀಶ್ ಜಾರಕಿ ಹೊಳಿ ಸಿಎಂ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರ ಎದುರಿಗೆ ಹೇಳಿದ್ದರೂ, ಅವರು ತಲೆ ಕೆಡಿಸಿಕೊಳ್ಳದಿದ್ದರಿಂದ ಬುಧವಾರ ತಮ್ಮ ಬೆಂಬಲಿಗರ ಸಭೆ ಕರೆದು ಚರ್ಚಿಸಲು ನಿರ್ಧರಿಸಿದ್ದರು ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತು ಕೊಂಡ ವೇಣುಗೋಪಾಲ್ ಸತೀಶ್ರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಕಾಂಗ್ರೆಸ್ನ ದೊಡ್ಡ ನಾಯಕರು, ಅವರ ನಡೆಯಲ್ಲಿ ಯಾವುದೇ ಗೊಂದಲ ಇಲ್ಲ. ಅವರೊಂದಿಗೆ ಮಾತುಕತೆ ನಡೆಸಿರುವುದಕ್ಕೆ ಯಾವುದೇ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.
ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಪ್ರತಿಕ್ರಿಯಿಸಿ, ಸತೀಶ್ ಅಸಮಾಧಾನಗೊಂಡಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದರು. ಮುಖ್ಯಮಂತ್ರಿ ಭೇಟಿಯ ಬಗ್ಗೆ ಉದಯವಾಣಿಯೊಂದಿಗೆ ಮಾತನಾಡಿದ ಅವರು, ಯಾವುದೇ ಅಸಮಾಧಾನ ಇಲ್ಲ. ಬುಧವಾರ ಯಾವ
ಸಭೆಯನ್ನೂ ಕರೆದಿಲ್ಲ. ಫೆ.1 ರಂದು ಬೆಳಗಾವಿಯಲ್ಲಿ ಸಮಾವೇಶ ನಡೆಸುತ್ತಿದ್ದೇವೆ. ಆ ಸಮಾವೇಶದ ಕುರಿತು ವೇಣುಗೋಪಾಲ್ ಅವರ ಜೊತೆ ಮಾತುಕತೆ ನಡೆಸಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ