ಸಚಿವ ರುದ್ರಪ್ಪ ಲಮಾಣಿ, ಶಾಸಕರ ಮಧ್ಯೆವಾಗ್ವಾದ!
Team Udayavani, Feb 1, 2018, 6:30 AM IST
ಹಾವೇರಿ: ರೈತರಿಗೆ ಬೆಳೆ ವಿಮೆ ಬಾಕಿ ಹಣ ಕೊಡಿಸುವ ವಿಚಾರದಲ್ಲಿ ಆಗುತ್ತಿರುವ ವಿಳಂಬಕ್ಕೆ ಸಂಬಂಧಿಸಿ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಸ್ವಪಕ್ಷದ ಶಾಸಕರೇ ಬಹಿರಂಗವಾಗಿ ವಾಗ್ವಾದ ನಡೆಸಿದರು.
ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಬುಧವಾರ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ, ಬೆಳೆವಿಮೆ ಬಾಕಿ ಹಣ ಎಷ್ಟು ಕೊಡಲಾಗಿದೆ. ಎಷ್ಟು ಬಾಕಿ ಇದೆ ಎಂಬ ಮಾಹಿತಿ ನೀಡುತ್ತಿದ್ದರು. ಸಚಿವರು ಮಾತಾಡುತ್ತಿದ್ದಂತೆ ದಿಢೀರ್ ಮಧ್ಯ ಪ್ರವೇಶಿಸಿದ ಶಾಸಕ ಬಸವರಾಜ ಶಿವಣ್ಣನವರ, “ವಿಮೆ ಹಣ ರೈತರಿಗೆ ಕನ್ನಡಿಯೊಳಗಿನ ಗಂಟಾಗಿದೆ.ಬಂದಿದೆ ಎನ್ನುತ್ತಾರೆ. ಆರು ತಿಂಗಳಿಂದ ಅಧಿಕಾರಿಗಳು ಇವತ್ತು-ನಾಳೆ ಎನ್ನುತ್ತ ಕಾಲ ಕಳೆಯುತ್ತಿದ್ದಾರೆ. ನಾವು ಹೋದಲ್ಲೆಲ್ಲ ರೈತರು ನಮಗೆ ಬೈಯ್ಯುತ್ತಿದ್ದಾರೆ. ಇದರ ಬಿಸಿ(ಸಚಿವರಿಗೆ) ನಿಮಗೆ ಮುಟ್ಟಿಲ್ಲ. ಇದರ ಬಗ್ಗೆ ವಿಚಾರಿಸಿದರೆ ಕಂಪನಿ ಅಧಿಕಾರಿಗಳು, ಬ್ಯಾಂಕ್ನವರ ಮೇಲೆ,ಬ್ಯಾಂಕ್ನವರು ಕಂಪನಿಯವರ ಮೇಲೆ ಆರೋಪ ಮಾಡುತ್ತಿದ್ದಾರೆ. ಇಷ್ಟೆಲ್ಲ ಕೆಲಸ ಮಾಡಿದರೂ, ವಿರೋಧ ಪಕ್ಷದವರಿಂದಲೂ ಬೈಯಿಸಿಕೊಳ್ಳಬೇಕಿದೆ ಎಂದು ಆಕ್ರೋಶ ವ್ಯಕ್ತಪಡಿದರು. ಸಚಿವ ರುದ್ರಪ್ಪ ಲಮಾಣಿ ಅಧಿಕಾರಿಗಳ ಸಭೆ ಮಾಡಿ ಅಂಕಿ-ಅಂಶ ಸಹಿತ ಮಾಹಿತಿ ಪಡೆದಿದ್ದೇನೆ.
ಶೀಘ್ರ ರೈತರ ಖಾತೆಗೆ ಹಣ ಹಾಕಿಸುವ ವ್ಯವಸ್ಥೆ ಮಾಡಲು ಹೇಳಿದ್ದೇನೆ ಎಂದರು. “ಮೊದಲು ಅಧಿಕಾರಿಗಳ ಸಭೆ ಮಾಡಿದ ಬಳಿಕವೇ ಸುದ್ದಿಗೋಷ್ಠಿ ಮಾಡಬೇಕಿತ್ತು’ ಎಂದರು ಶಾಸಕರು. ವಾಗ್ವಾದಕ್ಕೆ ತೆರೆ ಎಳೆಯಲು ಬೇರೆ ವಿಷಯ ಪ್ರಸ್ತಾಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ