ಸಚಿವ ರುದ್ರಪ್ಪ ಲಮಾಣಿ, ಶಾಸಕರ ಮಧ್ಯೆವಾಗ್ವಾದ!
Team Udayavani, Feb 1, 2018, 6:30 AM IST
ಹಾವೇರಿ: ರೈತರಿಗೆ ಬೆಳೆ ವಿಮೆ ಬಾಕಿ ಹಣ ಕೊಡಿಸುವ ವಿಚಾರದಲ್ಲಿ ಆಗುತ್ತಿರುವ ವಿಳಂಬಕ್ಕೆ ಸಂಬಂಧಿಸಿ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಸ್ವಪಕ್ಷದ ಶಾಸಕರೇ ಬಹಿರಂಗವಾಗಿ ವಾಗ್ವಾದ ನಡೆಸಿದರು.
ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಬುಧವಾರ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ, ಬೆಳೆವಿಮೆ ಬಾಕಿ ಹಣ ಎಷ್ಟು ಕೊಡಲಾಗಿದೆ. ಎಷ್ಟು ಬಾಕಿ ಇದೆ ಎಂಬ ಮಾಹಿತಿ ನೀಡುತ್ತಿದ್ದರು. ಸಚಿವರು ಮಾತಾಡುತ್ತಿದ್ದಂತೆ ದಿಢೀರ್ ಮಧ್ಯ ಪ್ರವೇಶಿಸಿದ ಶಾಸಕ ಬಸವರಾಜ ಶಿವಣ್ಣನವರ, “ವಿಮೆ ಹಣ ರೈತರಿಗೆ ಕನ್ನಡಿಯೊಳಗಿನ ಗಂಟಾಗಿದೆ.ಬಂದಿದೆ ಎನ್ನುತ್ತಾರೆ. ಆರು ತಿಂಗಳಿಂದ ಅಧಿಕಾರಿಗಳು ಇವತ್ತು-ನಾಳೆ ಎನ್ನುತ್ತ ಕಾಲ ಕಳೆಯುತ್ತಿದ್ದಾರೆ. ನಾವು ಹೋದಲ್ಲೆಲ್ಲ ರೈತರು ನಮಗೆ ಬೈಯ್ಯುತ್ತಿದ್ದಾರೆ. ಇದರ ಬಿಸಿ(ಸಚಿವರಿಗೆ) ನಿಮಗೆ ಮುಟ್ಟಿಲ್ಲ. ಇದರ ಬಗ್ಗೆ ವಿಚಾರಿಸಿದರೆ ಕಂಪನಿ ಅಧಿಕಾರಿಗಳು, ಬ್ಯಾಂಕ್ನವರ ಮೇಲೆ,ಬ್ಯಾಂಕ್ನವರು ಕಂಪನಿಯವರ ಮೇಲೆ ಆರೋಪ ಮಾಡುತ್ತಿದ್ದಾರೆ. ಇಷ್ಟೆಲ್ಲ ಕೆಲಸ ಮಾಡಿದರೂ, ವಿರೋಧ ಪಕ್ಷದವರಿಂದಲೂ ಬೈಯಿಸಿಕೊಳ್ಳಬೇಕಿದೆ ಎಂದು ಆಕ್ರೋಶ ವ್ಯಕ್ತಪಡಿದರು. ಸಚಿವ ರುದ್ರಪ್ಪ ಲಮಾಣಿ ಅಧಿಕಾರಿಗಳ ಸಭೆ ಮಾಡಿ ಅಂಕಿ-ಅಂಶ ಸಹಿತ ಮಾಹಿತಿ ಪಡೆದಿದ್ದೇನೆ.
ಶೀಘ್ರ ರೈತರ ಖಾತೆಗೆ ಹಣ ಹಾಕಿಸುವ ವ್ಯವಸ್ಥೆ ಮಾಡಲು ಹೇಳಿದ್ದೇನೆ ಎಂದರು. “ಮೊದಲು ಅಧಿಕಾರಿಗಳ ಸಭೆ ಮಾಡಿದ ಬಳಿಕವೇ ಸುದ್ದಿಗೋಷ್ಠಿ ಮಾಡಬೇಕಿತ್ತು’ ಎಂದರು ಶಾಸಕರು. ವಾಗ್ವಾದಕ್ಕೆ ತೆರೆ ಎಳೆಯಲು ಬೇರೆ ವಿಷಯ ಪ್ರಸ್ತಾಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್