ಭಕ್ತರ ದರ್ಶನಕ್ಕೆ ಗ್ರಹಣ ಹಿಡಿಸಿದ ಚಂದ್ರಗ್ರಹಣ


Team Udayavani, Feb 1, 2018, 6:20 AM IST

Ban01021806Medn.jpg

ಬೆಂಗಳೂರು: ಚಂದ್ರಗ್ರಹಣದ ಪ್ರಯುಕ್ತ ರಾಜ್ಯಾದ್ಯಂತ ದೇವಾಲಯಗಳು ಬುಧವಾರ ಸಂಜೆ 4 ಗಂಟೆ ಬಳಿಕ ಬಾಗಿಲು ಮುಚ್ಚಿದ್ದವು.

ಶ್ರೀರಂಗಪಟ್ಟಣದ ರಂಗನಾಥ, ಧರ್ಮಸ್ಥಳದ ಮಂಜುನಾಥ, ಕೊಲ್ಲೂರಿನ ಮೂಕಾಂಬಿಕೆ, ಗೋಕರ್ಣದ ಮಹಾಬಲೇಶ್ವರ, ಕರೀಘಟ್ಟ ವೆಂಕಟರಮಣ ಸೇರಿ ರಾಜ್ಯದ ಪ್ರಸಿದ್ಧ ದೇಗುಲಗಳಲ್ಲಿ ಭಕ್ತರಿಗೆ ಸಂಜೆಯ ವೇಳೆ ದೇವರ ದರ್ಶನ ಲಭ್ಯವಿರಲಿಲ್ಲ. ದೇವಾಲಯಗಳ ಬಾಗಿಲುಗಳನ್ನು ಮುಚ್ಚಲಾಗಿತ್ತು. ಸಂಜೆ 4 ಗಂಟೆಯಿಂದ ರಾತ್ರಿ 9.30ರ ತನಕ ದೇವಾಲಯದಲ್ಲಿ ಯಾವುದೇ ಪೂಜೆ ನಡೆಯಲಿಲ್ಲ. ರಾತ್ರಿ 9.30ರ ಬಳಿಕ ದೇಗುಲ ಶುದ್ಧೀಕರಣ ಮಾಡಿದ ಮೇಲೆ ದೇವರಿಗೆ ಅಭಿಷೇಕ ಮಾಡಲಾಯಿತು.

– ಶ್ರೀರಂಗಪಟ್ಟಣದ ಗಂಜಾಂನ ನಿಮಿಷಾಂಬದಲ್ಲಿ ಹುಣ್ಣಿಮೆ ಪ್ರಯುಕ್ತ ಬುಧವಾರ ಮುಂಜಾನೆ 1 ಗಂಟೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಭಕ್ತರು ಪುಣ್ಯಸ್ನಾನದೊಂದಿಗೆ ದೇವರಿಗೆ ಪೂಜೆ ಸಲ್ಲಿಸಿದರು. ಮಂಗಳವಾರ ಸಂಜೆಯಿಂದಲೇ ದೇವಾಲಯಕ್ಕೆ ಭಕ್ತರ ದಂಡು ಆಗಮಿಸಿತ್ತು. ಮಧ್ಯರಾತ್ರಿಯ ನಂತರ ಭಕ್ತರು ಕಾವೇರಿ ನದಿಯಲ್ಲಿ ಪುಣ್ಯಸ್ನಾನ ಮಾಡಿ ದೇವರ ದರ್ಶನ ಪಡೆದರು.

– ಯಾದಗಿರಿ ಜಿಲ್ಲೆ ಹಾಲಗೇರಾ ಗ್ರಾಮದ ಗ್ರಾಮ ದೇವತೆ ಯಲ್ಲಮ್ಮ ದೇವಿಯ ರಥೋತ್ಸವವನ್ನು ಚಂದ್ರಗ್ರಹಣ ನಿಮಿತ್ತ ಎರಡು ಗಂಟೆ ಹದಿನೈದು ನಿಮಿಷ ಮೊದಲೇ ಎಳೆಯಲಾಯಿತು. ಪ್ರತಿವರ್ಷ ಸಂಜೆ ಆರು ಗಂಟೆಗೆ ಎಳೆಯಲಾಗುತ್ತಿದ್ದ ರಥವನ್ನು ಈ ಸಲ ಮೂರು ಗಂಟೆ ನಲವತ್ತೈದು ನಿಮಿಷಕ್ಕೆ ಎಳೆಯಲಾಯಿತು. ರಾಯಚೂರು ಜಿಲ್ಲೆ ಮಸ್ಕಿಯ ಮಲ್ಲಿಕಾರ್ಜುನ ಸ್ವಾಮಿ, ಗಬ್ಬೂರಿನ ಬೂದಿಬಸವೇಶ್ವರ ರಥೋತ್ಸವ ಕೂಡ ಸಮಜೆ ಬದಲಿಗೆ ಮಧ್ಯಾಹ್ನವೇ ನೆರವೇರಿದವು.

– ಗ್ರಹಣ ನಿಮಿತ್ತ ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಬುಧವಾರ ಸಂಜೆ ಸುದರ್ಶನ ಹೋಮ, ಧನ್ವಂತರಿ ಹೋಮ, ಮಂಜುಸೂಕ್ತ ಹೋಮಗಳನ್ನು ನೆರವೇರಿಸಲಾಯಿತು. ಜತೆಗೆ, ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥರು ಶೀಘ್ರ ಗುಣಮುಖರಾಗಲಿ ಎಂದು ಸಂಸ್ಕೃತ ಪಾಠಶಾಲೆ ಮಕ್ಕಳು, ಶ್ರೀಮಠದ ಸಿಬ್ಬಂದಿ, ಭಕ್ತರು 108 ಗುರು ರಾಯರ ಸ್ತೋತ್ರ ಪಠಿಸಿದರು. ಬುಧವಾರ ಬೆಳಗ್ಗೆಯಿಂದಲೇ ಯಾವುದೇ ಪೂಜೆ ಇರಲಿಲ್ಲ. ಜತೆಗೆ ಪ್ರಸಾದ, ಉಪಾಹಾರದ ವ್ಯವಸ್ಥೆ ಕೂಡ ಇರಲಿಲ್ಲ.

– ಶೃಂಗೇರಿಯಲ್ಲಿ ಮಧ್ಯಾಹ್ನದ ನಂತರ ಪೂಜಾದಿಗಳನ್ನು ಸ್ಥಗಿತಗೊಳಿಸಲಾಗಿತ್ತು. ಭಕ್ತರಿಗೆ ಮಧ್ಯಾಹ್ನ ಮತ್ತು ರಾತ್ರಿ ಭೋಜನ ರದ್ದುಪಡಿಸಲಾಗಿತ್ತು. ಗ್ರಹಣ ಮೋಕ್ಷದ ನಂತರ ತುಂಗಾ ನದಿಯಲ್ಲಿ ಭಕ್ತಾದಿಗಳು ತರ್ಪಣ ಬಿಟ್ಟರು.

– ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸಂಜೆ 5.45 ರಿಂದ ರಾತ್ರಿ 7.30ರವರೆಗೆ ದೇವಿಗೆ ವಿಶೇಷ ಅಭಿಷೇಕ ನಡೆಸಲಾಯಿತು. ಈ ವೇಳೆ, ಭಕ್ತರ ಪ್ರವೇಶ ನಿರ್ಬಂಧಿಸಲಾಗಿತ್ತು.

– ನಂಜನಗೂಡಿನಲ್ಲಿ ಸಾವಿರಾರು ಭಕ್ತರು ಕಪಿಲೆಯಲ್ಲಿ ಸ್ನಾನ ಮಾಡಿದರು. ಮಾಸಿಕ ಹುಣ್ಣಿಮೆಯ ರಥೋತ್ಸವವನ್ನು ಗ್ರಹಣದ ಪ್ರಯುಕ್ತ 4.30ಕ್ಕೆ ಮುಂಚಿತವಾಗಿ ಮುಗಿಸಲಾಯಿತು. ಗ್ರಹಣ ಪ್ರಾರಂಭವಾದ ನಂತರ ಕಪಿಲಾ ನದಿಯಿಂದ ಅಗ್ರೋದಕ ತಂದು ಶ್ರೀಕಂಠೇಶ್ವರನಿಗೆ ವಿಶೇಷ ಅಭಿಷೇಕ ಮಾಡಲಾಯಿತು.

– ಬಳ್ಳಾರಿ ಜಿಲ್ಲೆ ಶ್ರೀಗುರು ಕೊಟ್ಟೂರೇಶ್ವರ ಮತ್ತು ಉಜ್ಜಯಿನಿಯ ಶ್ರೀಮರುಳಸಿದ್ದೇಶ್ವರ ದೇವಸ್ಥಾನಗಳಲ್ಲಿ ಎಂದಿನಂತೆ ದೇವಾಲಯದ ಬಾಗಿಲು ತೆರೆದು, ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿತ್ತು. ಎರಡೂ ದೇವಾಲಯದಲ್ಲಿ ಎಂದಿನಂತೆ ಪೂಜೆಗಳು ನಡೆದವು.ಗ್ರಹಣವಿದ್ದರೂ ಸಹ ದೇವಾಲಯಗಳ ಬಾಗಿಲು ಮುಚ್ಚದೆ ಭಕ್ತರಿಗೆ ದರ್ಶನ ನೀಡುವುದು ಇಲ್ಲಿ ಮೊದಲಿನಿಂದ ಬಂದ ವಾಡಿಕೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.