ಮಹಾಮಸ್ತಕಾಭಿಷೇಕಕ್ಕೆ ಉಪ ನಗರಗಳು ಸಜ್ಜು


Team Udayavani, Feb 1, 2018, 6:15 AM IST

Ban010218.jpg

ಹಾಸನ: ಶ್ರವಣಬೆಳಗೊಳದ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕದಲ್ಲಿ ಉಪ ನಗರಗಳ ನಿರ್ಮಾಣ ಮತ್ತು ಅಟ್ಟಣಿಗೆ ನಿರ್ಮಾಣ ಪ್ರಮುಖ ವ್ಯವಸ್ಥೆಗಳಲ್ಲಿ ಒಂದಾಗಿದೆ. ಆ ಪೈಕಿ ಉಪ ನಗರಗಳ ನಿರ್ಮಾಣ ಬಹುತೇಕ ಪೂರ್ಣಗೊಂಡಿದ್ದು, 12 ಉಪ ನಗರಗಳ ಪೈಕಿ ಈಗಾಗಲೇ 3 ಉಪ ನಗರಗಳನ್ನು ಶ್ರವಣಬೆಳಗೊಳದ ಜೈನ ಮಠಕ್ಕೆ ಹಸ್ತಾಂತರಿಸಲಾಗಿದೆ.

12 ತಾತ್ಕಾಲಿಕ ಉಪ ನಗರಗಳ ನಿರ್ಮಾಣಕ್ಕೆ 75 ಕೋಟಿ ರೂ. ಗಳನ್ನು ವೆಚ್ಚ ಮಾಡಲಾಗಿದೆ. ಶ್ರವಣಬೆಳಗೊಳದ ಸುತ್ತಮುತ್ತಲಿನ ವಿವಿಧ ಗ್ರಾಮಗಳ ರೈತರ 476 ಎಕರೆ ಜಮೀನನ್ನು ಎಕರೆಗೆ 50 ಸಾವಿರ ರೂ. ಪರಿಹಾರ ನೀಡಿ ತಾತ್ಕಾಲಿಕವಾಗಿ ಸ್ವಾಧೀನಪಡಿಸಿಕೊಂಡಿದ್ದು, ಆ ಪ್ರದೇಶದಲ್ಲಿ ಉಪ ನಗರಗಳನ್ನು ನಿರ್ಮಿಸಲಾಗಿದೆ.

ಉಪ ನಗರಗಳಿಗೆ ಮೂಲ ಸೌಕರ್ಯ ಕಲ್ಪಿಸಲಾಗಿದ್ದು, ಆಯಾಯ ಉಪ ನಗರಗಳಲ್ಲಿಯೇ ಭೋಜನಾಲಯ, ಅಡುಗೆ ತಯಾರು ಮಾಡುವ ಕೋಣೆಗಳನ್ನೂ ನಿರ್ಮಿಸಲಾಗಿದೆ.

12 ಉಪನಗರಗಳು ಪ್ರತ್ಯೇಕ ಸ್ಥಳಗಳಲ್ಲಿ ನಿರ್ಮಾಣವಾಗಿದ್ದು ಮುಖ್ಯ ರಸ್ತೆಗೆ ಗಣ್ಯರನ್ನು ತರಲು ಮತ್ತು ಅಲ್ಲಿಗೆ ಕಳುಹಿಸಲು ಈಗಾಗಲೆ ಚೆನ್ನೈ, ಗುಜರಾತ್‌ ಹಾಗೂ ಬೆಂಗಳೂರಿನಿಂದ 19ಕ್ಕೂ ಹೆಚ್ಚು ವಿದ್ಯುತ್‌ ಬ್ಯಾಟರಿ ಚಾಲಿತ ವಾಹನಗಳು ಶ್ರವಣಬೆಳಗೊಳಕ್ಕೆ ಬಂದಿವೆ. ಒಂದಕ್ಕೆ 3.50 ಲಕ್ಷ ರೂ. ಬೆಲೆಯ ವಿದ್ಯುತ್‌ ಬ್ಯಾಟರಿ ಚಾಲಿತ ವಾಹನಗಳನ್ನು ಉದ್ಯಮಿಯೋರ್ವ ಜೈನಮಠದ ಪೀಠಾಧ್ಯಕ್ಷ ಶ್ರೀ ಚಾರುಕೀರ್ತಿ ಭಟ್ಟಾರಕರಿಗೆ ಉಡುಗೊರೆಯಾಗಿ ನೀಡಿದ್ದಾರೆ.

ಉಪನಗರಗಳ ವರ್ಗೀಕರಣ
ಮಹಾಮಸ್ತಕಾಭಿಷೇಕಕ್ಕೆ ಬರುವ ಜೈನಮುನಿಗಳಿಗೆ ತ್ಯಾಗಿನಗರ, ಮಹಾಮಸ್ತಕಾಭಿಷೇಕದ ಕಳಶ ಖರೀದಿಸುವವರಿಗೆ ಕಳಶ ನಗರ, ವಿವಿಧ ರಾಜ್ಯಗಳಿಂದ ಬರುವ ಅತಿ ಗಣ್ಯರಿಗೆ ನಿರ್ಮಿಸಿರುವ ಗಣ್ಯಾತಿಗಣ್ಯರ ನಗರಗಳನ್ನು ಜೈನ ಮಠ ವಹಿಸಿಕೊಂಡು ಅಲ್ಲಿನ ಊಟೋಪಚಾರ ಸಹಿತ ಎಲ್ಲಾ ವ್ಯವಸ್ಥೆಯನ್ನೂ ಕಲ್ಪಿಸಲಿದೆ. ಆಯಾಯ ಇಲಾಖೆಗೆ ಸಂಬಂಧಿಸಿದಂತೆ ಸೇವಾ ನಗರ, ( ಸ್ವಯಂ ಸೇವಕರಿಗೆ), ಪೊಲೀಸ್‌ ನಗರ (ಭದ್ರತೆಗಾಗಿ ಆಗಮಿಸುವ ಪೊಲೀಸರಿಗೆ), ಅಧಿಕಾರಿಗಳ ನಗರ (ಜವಾಬ್ದಾರಿಯುತ ಅಧಿಕಾರಿಗಳಿಗೆ), ಯಾತ್ರಿ ನಗರ (ಪ್ರವಾಸಿಗರು ಮತ್ತು ಯಾತ್ರಾರ್ಥಿಗಳಿಗೆ), ಮಾಧ್ಯಮ ನಗರ (ಸುದ್ದಿಗಾರರು, ಛಾಯಾಗ್ರಾಹಕರು) ಹೀಗೆ ಉಪ ನಗರಗಳ ನಿರ್ಮಾಣ ಮಾಡಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.