ಅರುಣಾಚಲ ಪ್ರದೇಶದಲ್ಲಿ ಶಿಗ್ಗಾವಿ ಯೋಧ ಹುತಾತ್ಮ
Team Udayavani, Feb 3, 2018, 9:38 AM IST
ಶಿಗ್ಗಾವಿ: ಅರುಣಾಚಲ ಪ್ರದೇಶದ ತವಾಂಗ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕು ಮುಗಳಿ ಗ್ರಾಮದ ಯೋಧರೊಬ್ಬರು ಶುಕ್ರವಾರ ಹುತಾತ್ಮರಾಗಿದ್ದಾರೆ.
ಯೋಧ ಚಂದ್ರು ಬಸಪ್ಪ ಡವಗಿ (35) ಮೃತಪಟ್ಟಿರುವ ಬಗ್ಗೆ ಸೇನೆಯಿಂದ ದೂರವಾಣಿ ಮೂಲಕ ಮಾಹಿತಿ ಬಂದಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಚಂದ್ರುವಿಗೆ ತಂದೆ ಬಸಪ್ಪ, ತಾಯಿ ಬಸವಣ್ಣೆವ್ವ, ಪತ್ನಿ ಶಿಲ್ಪಾ, ಇಬ್ಬರು ಪುತ್ರಿಯರಿದ್ದು ಕುಟುಂಬ ದುಃಖದ ಮಡುವಿನಲ್ಲಿ ಮುಳುಗಿದೆ. ಚಂದ್ರು ಒಂದು ತಿಂಗಳು ರಜೆ ಪಡೆದು ಡಿಸೆಂಬರ್ 2ನೇ ವಾರ ಸ್ವಗ್ರಾಮಕ್ಕೆ ಬಂದು ಜ. 29ರಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಗುವಾಹಟಿ ಮೂಲಕ ಸೇವೆಗೆ ತೆರಳಿದ್ದರು. 2002ರ ಅಕ್ಟೋಬರ್ನಲ್ಲಿ ಸೇನೆಗೆ ಸೇರ್ಪಡೆಯಾಗಿದ್ದು, ಮದ್ರಾಸ್ ರೆಜಿಮೆಂಟ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು. 2019ರ ಅಕ್ಟೋಬರ್ನಲ್ಲಿ ಸೇವೆ ಪೂರ್ಣಗೊಳಿಸಿ ಸ್ವಗ್ರಾಮಕ್ಕೆ ಮರಳಲು ಯೋಚಿಸಿದ್ದರು ಎನ್ನಲಾಗಿದೆ.
ಕುಟುಂಬದವರಿಗೆ ಬಂದ ಕರೆ ಆಧಾರದಲ್ಲಿ ಸ್ಥಳೀಯರೇ ಆತನ ಸ್ನೇಹಿತರಿಗೆ ಕರೆ ಮಾಡಿ ತಾಪಮಾನ ಶೂನ್ಯ ಡಿಗ್ರಿಗೆ ಕುಸಿದು, ಉಸಿರಾಟ ಸಮಸ್ಯೆಯಿಂದ ಮೃತಪಟ್ಟಿರುವುದನ್ನು ಖಚಿತಪಡಿಸಿಕೊಂಡಿದ್ದು, ಗ್ರಾಮದಲ್ಲಿ ಶೋಕ ಆವರಿಸಿದೆ. ಶಿಗ್ಗಾವಿ ತಹಶೀಲ್ದಾರ್ ಶಿವಾನಂದ ರಾಣೆ, ಪೊಲೀಸರು ಧಾವಿಸಿದ್ದು, ಗ್ರಾಮದ ಶಾಲಾ ಆವರಣದಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…