ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಾಯಿಗೆ ಫ‌ುಲ್‌ ಟಿಕೆಟ್‌!


Team Udayavani, Feb 3, 2018, 11:20 AM IST

30-27.jpg

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ ಗಳಲ್ಲಿ ಪ್ರಯಾಣಿಕರು ಈಗ ನಾಯಿ, ಬೆಕ್ಕು, ಮೊಲ ಮತ್ತಿತರ ಸಾಕುಪ್ರಾಣಿಗಳನ್ನು ಕೊಂಡೊಯ್ಯಲು ಅವಕಾಶ ಮಾಡಿಕೊಡಲಾಗಿದೆ. ನಾಯಿಗೆ ಪ್ರಯಾಣ ದರ ವಯಸ್ಕರರಿಗೆ ವಿಧಿಸುವ ಟಿಕೆಟ್‌ನಷ್ಟು ಹಾಗೂ ಬೆಕ್ಕು, ಮೊಲದಂತಹ ಸಣ್ಣ ಪ್ರಾಣಿಗಳಿಗೆ ಮಕ್ಕಳ ಟಿಕೆಟ್‌ ದರ ನಿಗದಿಪಡಿಸಲಾಗಿದೆ. ಆದರೆ, ಈ ಸಾಕುಪ್ರಾಣಿಗಳನ್ನು ತೆಗೆದುಕೊಂಡು ಹೋಗುವ ಜವಾಬ್ದಾರಿ ಆ ಪ್ರಾಣಿಗಳ ವಾರಸುದಾರರದ್ದಾಗಿದೆ ಎಂದು ಕೆಎಸ್‌ಆರ್‌ಟಿಸಿ ಸ್ಪಷ್ಟಪಡಿಸಿದೆ. 

ಸಾರ್ವಜನಿಕ ಪ್ರಯಾಣಿಕರ ಲಗೇಜು/ ಸರಕುಗಳನ್ನು ನಿಗಮವು ಐದು ಪ್ರಕಾರಗಳಲ್ಲಿ ವರ್ಗೀಕರಣ ಮಾಡಿದ್ದು, ಹಗುರ ಲಗೇಜು, ಭಾರದ ಲಗೇಜು, ಸಾಗಿಸಲು ಸಾಧ್ಯವಿರುವ ವಸ್ತುಗಳು, ಸಾಕುಪ್ರಾಣಿಗಳು ಮತ್ತು ರೇಷ್ಮೆ ಗೂಡು ಎಂದು ವಿಂಗಡಿಸಲಾಗಿದೆ. ಅದರಲ್ಲಿ ನಾಯಿಯನ್ನು ಒಬ್ಬ ವಯಸ್ಕ ಪ್ರಯಾಣಿಕರಂತೆ ಪರಿಗಣಿಸಿ ಪೂರ್ಣ (ವಯಸ್ಕ)ದರ, ಮೊಲ, ನಾಯಿಮರಿ, ಬೆಕ್ಕು, ಪಕ್ಷಿ, ಪಂಜರದಲ್ಲಿನ ಪಕ್ಷಿ ಇತ್ಯಾದಿಗಳಿಗೆ ಅರ್ಧ (ಮಕ್ಕಳ) ದರ ವಿಧಿಸಲಾಗುವುದು ಎಂದು ತಿಳಿಸಿದೆ.

ಒಬ್ಬ ವ್ಯಕ್ತಿ ಒಂದು ಬಸ್ಸಿನಲ್ಲಿ ಒಂದು ನಾಯಿ ಅಥವಾ ನಾಯಿ ಮರಿಗಿಂತ ಹೆಚ್ಚು ಕೊಂಡೊಯ್ಯಲು ಅವಕಾಶ ಇಲ್ಲ. ಕೋಳಿ ಮರಿಗಳು ಒಂದು ಪಂಜರದಲ್ಲಿ ಇದ್ದರೆ, ಒಂದು ಯೂನಿಟ್‌ ಎಂದು ಪರಿಗಣಿಸಲಾಗುವುದು. ಈ ಸಾಕು ಪ್ರಾಣಿಗಳಿಗೆ ಪ್ರಯಾಣಿಕರು ಅಥವಾ ನಿಗಮದ ಸಿಬ್ಬಂದಿಗೆ ಅಥವಾ ಲಗೇಜ್‌ಗೆ ಹಾನಿಯಾಗದಂತೆ ವಾರಸುದಾರರು ಕಾಳಜಿ ವಹಿಸತಕ್ಕದ್ದು ಎಂದು ನಿಗಮದ ಆದೇಶದಲ್ಲಿ ಸೂಚಿಸಲಾಗಿದೆ. 

ಹಿಂದೆಯೂ ಅವಕಾಶ ಇತ್ತು: ಸಚಿವ ಸಾಕುಪ್ರಾಣಿಗಳ ಸಾಗಾಣಿಕೆಗೆ ಅವಕಾಶ ಮಾಡಿಕೊಟ್ಟಿರುವುದು ಇದೇ ಮೊದಲಲ್ಲ. ಈ ಹಿಂದೆಯೇ ಇದಕ್ಕೆ ಅವಕಾಶ ಇತ್ತು. ಗ್ರಾಮೀಣ ಭಾಗಗಳಲ್ಲಿ ಕುರಿ, ಕೋಳಿಗಳನ್ನು ಸಾಗಿಸುವುದನ್ನು ಈಗಲೂ ಕಾಣಬಹುದು. ಈಗ ಕೇವಲ ದರ ಪರಿಷ್ಕರಣೆ ಮಾಡಲಾಗಿದೆ ಅಷ್ಟೇ ಎಂದು ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ  ಸ್ಪಷ್ಟಪಡಿಸಿದ್ದಾರೆ. ಇನ್ನು ಪ್ರತಿ ಪ್ರಯಾಣಿಕರು 30 ಕೆ.ಜಿ. ತೂಕದವರೆಗಿನ ಲಗೇಜನ್ನು ಉಚಿತವಾಗಿ ಕೊಂಡೊಯ್ಯಲು ಅವಕಾಶ ಮಾಡಿಕೊಡಲಾಗಿದೆ. ಆದರೆ ಯಾವೊಂದು ಗುಂಪಿನಲ್ಲಿ ಒಂದು ಬ್ಯಾಗ್‌ ಅಥವಾ ಬಂಡಲ್‌ ಲಗೇಜ್‌ ಕೊಂಡೊಯ್ಯುತ್ತಿದ್ದರೆ, ಆ ಇಡೀ ಗುಂಪು ಒಂದು ಲಗೇಜು ಮಾತ್ರ ಉಚಿತವಾಗಿ ಕೊಂಡೊಯ್ಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.